Andolana originals

ಕರಿನಂಜನಪುರ ರಸ್ತೆಗೆ ಕೊನೆಗೂ ಕಾಂಕ್ರೀಟ್ ಭಾಗ

ಪ್ರಸಾದ್‌ ಲಕ್ಕೂರು 

ಕುಂಟುತ್ತ, ತೆವಳುತ್ತ ಸಾಗಿದ್ದ ಕಾಮಗಾರಿಗೆ ಮುಕ್ತಿ 

ಚಾಮರಾಜನಗರ: ನಗರದ ಕರಿನಂಜನಪುರ ರಸ್ತೆಗೆ ಕೊನೆಗೂ ಕಾಂಕ್ರಿಟೀಕರಣ ಭಾಗ್ಯ ದೊರಕಿದೆ. ಕುಂಟುತ್ತ, ತೆವಳುತ್ತಾ ಸಾಗಿದ್ದ ಕಾಮಗಾರಿ ಕೊನೆಗೂ ಮುಕ್ತಾಯದ ಹಂತ ತಲುಪಿದೆ.

ಡಿವೈಎಸ್ಪಿ ಕಚೇರಿ ಬಳಿಯಿಂದ ಆರಂಭವಾಗುವ ನ್ಯಾಯಾಲಯದ ರಸ್ತೆ ಕರಿನಂಜನಪುರ ರಸ್ತೆ ಮಾರ್ಗವಾಗಿ ಸತ್ಯಮಂಗಲ ರಸ್ತೆಯನ್ನು ಸಂಪರ್ಕಿಸುತ್ತದೆ. ಡಿವೈಎಸ್ಪಿ ಕಚೇರಿಯಿಂದ ನ್ಯಾಯಾಲಯದ ತನಕ ಕಾಂಕ್ರಿಟೀಕರಣ ಆಗಿದೆ. ಸತ್ಯಮಂಗಲ ರಸ್ತೆಯಿಂದ ನಿಜಗುಣ ರೆಸಾರ್ಟ್ ಸಮೀಪದ ಸೇತುವೆತನಕ ಕಾಂಕ್ರಿಟೀಕರಣವಾಗಿದೆ. ಈ ಎರಡರ ನಡುವೆ ಇರುವ ೨೧೭ ಮೀಟರ್ ಅಂತರದ ರಸ್ತೆ ಕಾಂಕ್ರಿಟೀಕರಣ ಆಗಿರಲಿಲ್ಲ.

೬ ತಿಂಗಳ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್ ಭವನ, ನಿಜಗುಣ ರೆಸಾರ್ಟ್ ಮುಂಭಾಗ ಸುಮಾರು ೧೦೦ ಮೀಟರ್ ರಸ್ತೆ ಕಾಂಕ್ರಿಟೀಕರಣವಾಯಿತು. ನ್ಯಾಯಾಲಯದ ಮುಂಭಾಗ ಒಂದು ತಿಂಗಳ ಹಿಂದೆ ೪-೫ ಮೀಟರ್ ಕಾಂಕ್ರಿಟೀಕರಣಗೊಂಡಿತು. ವಿವಿಧ ಕಾರಣಗಳಿಂದ ಕಾಮಗಾರಿ ಮುಂದಕ್ಕೆ ಹೋಗಲಿಲ್ಲ. ಈ ರಸ್ತೆಯನ್ನು ೧೦ ಮೀಟರ್ ಅಗಲಕ್ಕೆ ಕಾಂಕ್ರಿಟೀಕರಣ ಮಾಡಬೇಕು ಎಂದು ನಗರಸಭೆ ಮುಂದಾಗಿತ್ತು. ಆದರೆ, ರಸ್ತೆಯ ಅಕ್ಕಪಕ್ಕದ ಜಾಗದವರು ಹಿಂದೆ ರಸ್ತೆ ಎಷ್ಟು ಅಗಲಿವಿತ್ತು ಅಷ್ಟಕ್ಕೇ ಮಾಡಬೇಕು. ನಮ್ಮ ಜಾಗ ಬೇಕಾದರೆ ನ್ಯಾಯಯುತ ಪರಿಹಾರ ನೀಡಿ ಎಂದು ತಕರಾರು ತೆಗೆದರು. ಆದ್ದರಿಂದಲೇ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು.

ಕೇವಲ ೮ರಿಂದ ೧೦ ಮೀಟರ್ ಅಗಲಕ್ಕೆ ರಸ್ತೆ ಕಾಂಕ್ರಿಟೀಕರಣವಾಗಿದೆ. ಈ ರಸ್ತೆಯನ್ನು ಪೂರ್ಣಗೊಳಿಸಲು ೭ ವರ್ಷ ಬೇಕಾಯಿತು. ಈ ರಸ್ತೆಯನ್ನು ೮೦ ಅಡಿಗಳ ರಸ್ತೆ ಮಾಡಲು ಡಿಪಿಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ರಸ್ತೆ ಅಕ್ಕಪಕ್ಕದ ಭೂಮಿಯನ್ನು ಕಾನೂನುಬದ್ಧವಾಗಿ ಸ್ವಾಧಿನ ಮಾಡಿಕೊಳ್ಳದ ಕಾರಣ ಇಷ್ಟೊಂದು ವಿಳಂಬವಾಯಿತು ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರಸಭೆಯ ವಿಶೇಷ ಅನುದಾನ ೩.೫೦ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿಯ ರವೀಂದ್ರನಾಥ್ ಕನ್ಸ್‌ಟ್ರಕ್ಷನ್ ಅಂಡ್ ಪ್ರೈವೇಟ್ ಲಿಮಿಟೆಡ್ ಈ ರಸ್ತೆ ಕಾಮಗಾರಿಯನ್ನು ಗುತ್ತಿಗೆಗೆ ಪಡೆದಿದೆ. ಒಂದು ವರ್ಷದ ಹಿಂದೆ ಕಾಮಗಾರಿ ಆರಂಭವಾಗಿತ್ತು.

ಚರಂಡಿ, ಲೈಟ್, ಫುಟ್‌ಪಾತ್ ಇಲ್ಲ: 

ಡಿವೈಎಸ್ಪಿ ಕಚೇರಿಯಿಂದ ನ್ಯಾಯಾಲಯಗಳ ಸಂಕೀರ್ಣದ ತನಕ ರಸ್ತೆ ಕಾಂಕ್ರಿಟೀಕರಣಗೊಂಡಿದೆ. ಚರಂಡಿ ವ್ಯವಸ್ಥೆಯೂ (ಎಡಬದಿ) ಆಗಿದೆ. ಇಲ್ಲಿಂದ ಮುಂದಕ್ಕೆ ಅಂಬೇಡ್ಕರ್ ಭವನದತನಕ ಚರಂಡಿ, ಪಾದಚಾರಿ ರಸ್ತೆ (ಫುಟ್‌ಪಾತ್) ಆಗಿಲ್ಲ. ಬೀದಿ ದೀಪ ಅಳವಡಿಸಿಲ್ಲ. ಇದೇ ರಸ್ತೆಯ (ಬಲ ಬದಿ) ಜಿಲ್ಲಾ ಕಾರಾಗೃಹದಿಂದ ನಿಜಗುಣ ರೆಸಾರ್ಟ್‌ತನಕ ಚರಂಡಿ ಆಗಿಲ್ಲ. ಬೀದಿ ದೀಪ ಅಳವಡಿಸಿಲ್ಲ. ಪಾದಚಾರಿ ರಸ್ತೆಯೂ ಆಗಿಲ್ಲ.

” ರಸ್ತೆಯ ಬದಿಯಲ್ಲಿ ಅಗತ್ಯವಿರುವ ಭೂಮಿಯನ್ನು ಪಡೆದು ದೊಡ್ಡದಾಗಿ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿತ್ತು. ಕಾರಣಾಂತರಗಳಿಂದ ಇರುವ ರಸ್ತೆಯನ್ನು ಕಾಂಕ್ರಿಟೀಕರಣ ಮಾಡುತ್ತಿದ್ದೇವೆ.”

-ಪ್ರಕಾಶ್, ಎಇಇ, ನಗರಸಭೆ 

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago