Andolana originals

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ ಕಾರಣಮವಾಗುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಿರಿಯರು ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದರೆ, ಇಸ್ಪೀಟ್ ಆಡಿದರೆ ೧ ಲಕ್ಷ ರೂ. ದಂಡ ಹಾಗೂ ಮದ್ಯ ಮಾರಾಟ, ಜೂಜು ಆಡುವವರ ಕುರಿತು ಮಾಹಿತಿ ನೀಡಿದರೆ ೫೦ ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಡಂಗೂರ ಸಾರಿಸಲಾಗಿದೆ.

ಬನ್ನಿತಾಳಪುರ ಗ್ರಾಮದ ಮುಖಂಡರು, ಕುಲಸ್ಥರು, ಯಜಮಾನರು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿ ಗ್ರಾಮದಲ್ಲಿ ಟಾಂಟಾಂ ಮಾಡಿಸಿದ್ದಾರೆ.

ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಈ ಗ್ರಾಮದಲ್ಲಿ ಕೂಲಿ ಮತ್ತಿತರ ಕೆಲಸ ಮಾಡಿ ಕಷ್ಟ ಪಟ್ಟು ಒಂದಷ್ಟು ಹಣ ಸಂಪಾದಿಸುವಮ ಜನರು ಜೂಜು, ಕುಡಿತದತ್ತ ಮುಖ ಮಾಡಿದರೆ ಅವರನ್ನು ನಂಬಿಕೊಂಡು ಇರುವ ಪತ್ನಿ, ಮಕ್ಕಳು, ತಂದೆ ತಾಯಿ ಬೀದಿಗೆ ಬೀಳುತ್ತಾರೆ ಎಂಬ ಕಾರಣದಿಂದ ನಿರ್ಣಯ ಕೈಗೊಳ್ಳಲಾಗಿದೆ.

” ಗ್ರಾಮದ ಒಳಗೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವಂತಿಲ್ಲ, ಜೂಜಾಡು ವಂತಿಲ್ಲ ಎಂದು ವರ್ಷದ ಹಿಂದೆ ಸಾರಲಾಗಿತ್ತು. ಆದರೆ, ಅದು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರಲಿಲ್ಲ. ಯುವಕರು, ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದರು. ಈ ಬಗ್ಗೆ ಮಹಿಳೆಯರು ಅಳಲು ತೋಡಿಕೊಂಡಿದ್ದರು. ಹೀಗಾಗಿ ಗ್ರಾಮದ ಯಜಮಾನರು, ಮುಖಂಡರು ಸೇರಿ ಈ ತೀರ್ಮಾನ ಕೈಗೊಂಡಿದ್ದು, ಇದರಿಂದ ಗ್ರಾಮದ ಯುವಕರು ದಾರಿ ತಪ್ಪುವುದು ಕಡಿಮೆಯಾಗಿದೆ. ”

-ಕುಮಾರಸ್ವಾಮಿ, ಗ್ರಾಮದ ಮುಖಂಡರು

” ಹಬ್ಬದ ನೆಪದಲ್ಲಿ ಜೂಜಾಟ, ಕುಡಿತ ಹೆಚ್ಚಾಗಿತ್ತು. ಗ್ರಾಮದಲ್ಲಿ ಯುವಕರು, ಸಣ್ಣ ವಯಸ್ಸಿನವರು ಕುಡಿತಕ್ಕೆ ದಾಸರಾಗಿ ದಾರಿ ತಪ್ಪಿದ್ದರು. ಇವರನ್ನು ನಂಬಿಕೊಂಡಿದ್ದ ಕುಟುಂಬಸ್ಥರು ಆರ್ಥಿಕ ತೊಂದರೆಯಿಂದ ಜೀವನ ನಿರ್ವಹಿಸಲು ಕಷ್ಟಪಡುತ್ತಿದ್ದು ಅನೇಕರು ಮದ್ಯವ್ಯಸನಿಗಳಾಗಿ ಚಿಕ್ಕ ವಯಸ್ಸಿನಲ್ಲೇ ಸಾವಿಗೀಡಾಗುತಿದ್ದರು. ಮಕ್ಕಳು ತಬ್ಬಲಿಗಳಾಗಮ ಬಾರದು, ಗ್ರಾಮಕ್ಕೆ ಕೆಟ್ಟ ಹೆಸರು ಬರಬಾರದು ಎಂದು ತೀರ್ಮಾನಿಸಿ, ಈ ಕ್ರಮ ಕೈಗೊಳ್ಳಲಾಗಿದೆ.”

-ಶಿವಯ್ಯಶೆಟ್ಟಿ, ಗ್ರಾಮದ ಯಜಮಾನ

 

 

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

2 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

4 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

4 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago