ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ ಕಾರಣಮವಾಗುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಿರಿಯರು ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದರೆ, ಇಸ್ಪೀಟ್ ಆಡಿದರೆ ೧ ಲಕ್ಷ ರೂ. ದಂಡ ಹಾಗೂ ಮದ್ಯ ಮಾರಾಟ, ಜೂಜು ಆಡುವವರ ಕುರಿತು ಮಾಹಿತಿ ನೀಡಿದರೆ ೫೦ ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಡಂಗೂರ ಸಾರಿಸಲಾಗಿದೆ.
ಬನ್ನಿತಾಳಪುರ ಗ್ರಾಮದ ಮುಖಂಡರು, ಕುಲಸ್ಥರು, ಯಜಮಾನರು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿ ಗ್ರಾಮದಲ್ಲಿ ಟಾಂಟಾಂ ಮಾಡಿಸಿದ್ದಾರೆ.
ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಈ ಗ್ರಾಮದಲ್ಲಿ ಕೂಲಿ ಮತ್ತಿತರ ಕೆಲಸ ಮಾಡಿ ಕಷ್ಟ ಪಟ್ಟು ಒಂದಷ್ಟು ಹಣ ಸಂಪಾದಿಸುವಮ ಜನರು ಜೂಜು, ಕುಡಿತದತ್ತ ಮುಖ ಮಾಡಿದರೆ ಅವರನ್ನು ನಂಬಿಕೊಂಡು ಇರುವ ಪತ್ನಿ, ಮಕ್ಕಳು, ತಂದೆ ತಾಯಿ ಬೀದಿಗೆ ಬೀಳುತ್ತಾರೆ ಎಂಬ ಕಾರಣದಿಂದ ನಿರ್ಣಯ ಕೈಗೊಳ್ಳಲಾಗಿದೆ.
” ಗ್ರಾಮದ ಒಳಗೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವಂತಿಲ್ಲ, ಜೂಜಾಡು ವಂತಿಲ್ಲ ಎಂದು ವರ್ಷದ ಹಿಂದೆ ಸಾರಲಾಗಿತ್ತು. ಆದರೆ, ಅದು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರಲಿಲ್ಲ. ಯುವಕರು, ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದರು. ಈ ಬಗ್ಗೆ ಮಹಿಳೆಯರು ಅಳಲು ತೋಡಿಕೊಂಡಿದ್ದರು. ಹೀಗಾಗಿ ಗ್ರಾಮದ ಯಜಮಾನರು, ಮುಖಂಡರು ಸೇರಿ ಈ ತೀರ್ಮಾನ ಕೈಗೊಂಡಿದ್ದು, ಇದರಿಂದ ಗ್ರಾಮದ ಯುವಕರು ದಾರಿ ತಪ್ಪುವುದು ಕಡಿಮೆಯಾಗಿದೆ. ”
-ಕುಮಾರಸ್ವಾಮಿ, ಗ್ರಾಮದ ಮುಖಂಡರು
” ಹಬ್ಬದ ನೆಪದಲ್ಲಿ ಜೂಜಾಟ, ಕುಡಿತ ಹೆಚ್ಚಾಗಿತ್ತು. ಗ್ರಾಮದಲ್ಲಿ ಯುವಕರು, ಸಣ್ಣ ವಯಸ್ಸಿನವರು ಕುಡಿತಕ್ಕೆ ದಾಸರಾಗಿ ದಾರಿ ತಪ್ಪಿದ್ದರು. ಇವರನ್ನು ನಂಬಿಕೊಂಡಿದ್ದ ಕುಟುಂಬಸ್ಥರು ಆರ್ಥಿಕ ತೊಂದರೆಯಿಂದ ಜೀವನ ನಿರ್ವಹಿಸಲು ಕಷ್ಟಪಡುತ್ತಿದ್ದು ಅನೇಕರು ಮದ್ಯವ್ಯಸನಿಗಳಾಗಿ ಚಿಕ್ಕ ವಯಸ್ಸಿನಲ್ಲೇ ಸಾವಿಗೀಡಾಗುತಿದ್ದರು. ಮಕ್ಕಳು ತಬ್ಬಲಿಗಳಾಗಮ ಬಾರದು, ಗ್ರಾಮಕ್ಕೆ ಕೆಟ್ಟ ಹೆಸರು ಬರಬಾರದು ಎಂದು ತೀರ್ಮಾನಿಸಿ, ಈ ಕ್ರಮ ಕೈಗೊಳ್ಳಲಾಗಿದೆ.”
-ಶಿವಯ್ಯಶೆಟ್ಟಿ, ಗ್ರಾಮದ ಯಜಮಾನ
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…