ಕೆ.ಶಿವಣ್ಣ
ಟಿಬೆಟಿಯನ್ ಕ್ಯಾಂಪ್ಗಳಿಂದ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ; ದುರ್ವಾಸನೆಯಿಂದ ರೋಗ ಹರಡುವ ಭೀತಿ
ಬೈಲಕುಪ್ಪೆ: ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟ ಪರಿಣಾಮ ದುರ್ವಾಸನೆ ಹರಡುತ್ತಿರುವುದರಿಂದ ಬೈಲಕುಪ್ಪೆ ಸುತ್ತಮುತ್ತಲಿನ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ಬೈಲಕುಪ್ಪೆ ಪೆಟ್ರೋಲ್ ಬಂಕ್ ಸಮೀಪ ಟಿಬೆಟಿಯನ್ ಸೊಸೈಟಿ ವತಿಯಿಂದ ಟೆಂಡರ್ ಮೂಲಕ ಗುತ್ತಿಗೆ ನೀಡಿದ ಗುತ್ತಿಗೆದಾರರಿಂದ ಟಿಬೆಟಿಯನ್ ಕ್ಯಾಂಪ್ಗಳಿಂದ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯನ್ನು ಸಂಗ್ರಹಿಸಿ ವಾಹನದಲ್ಲಿ ತಂದು ಸುರಿದು ಗ್ರೇಡ್ ಮಾಡಿಕೊಂಡು, ವಾರಕ್ಕೆರಡು ಬಾರಿ ತ್ಯಾಜ್ಯದ ಗುಂಡಿಗೆ ಹಾಕಿ ಸುಡುವುದರಿಂದ ದುರ್ವಾಸನೆ ಬೀರುತ್ತಿದೆ.
ಇದರಿಂದ ಗ್ರಾಮದ ಜನರಿಗೆ ಸಮಸ್ಯೆಯಾಗಿದೆ. ರಾತ್ರಿ ವೇಳೆ ಮನೆಯಿಂದ ಜನರು ಹೊರಬಂದರೆ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹಿಂದೆ ಇದ್ದ ಬೈಲಕುಪ್ಪೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರ ದೂರಿನ ಮೇರೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಟಿಬೆಟಿಯನ್ ಸೊಸೈಟಿ ವ್ಯವಸ್ಥಾಪಕರೊಡನೆ ಚರ್ಚಿಸಿದ್ದು, ಟಿಬೆಟಿಯನ್ ಕ್ಯಾಂಪಿನ ಹೊರವಲಯದಲ್ಲಿ ತ್ಯಾಜ್ಯ ವಿಲೇವಾರಿಗೆ ಜಾಗ ಪತ್ತೆ ಹಚ್ಚಲಾಗಿದೆ.
ಕೊರೊನಾ ಬಂದಿದ್ದರಿಂದ ಆ ವಿಚಾರ ನನೆಗುದಿಗೆ ಬಿದ್ದಿತು. ಬೇಸಿಗೆ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದು, ಪಿಡಿಒಗೆ ಹಲವಾರು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಜವರೇಗೌಡ, ದೂರಿದ್ದಾರೆ.
” ಈ ವಿಚಾರ ಕುರಿತು ನಾವು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ್ದು, ಕೂಡಲೇ ಸಂಬಂಧಪಟ್ಟವರಿಗೆ ಪಂಚಾಯಿತಿ ವತಿಯಿಂದ ತಿಳಿವಳಿಕೆ ಪತ್ರ ನೀಡಲಾಗಿದೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.”
-ರಘು, ಗ್ರಾಪಂ ಅಧ್ಯಕ್ಷ, ಬೈಲಕುಪ್ಪೆ
” ಈಗಾಗಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಬೌದ್ಧ ಗುರು ದಲೈಲಾಮಾ ಇಲ್ಲಿಗೆ ವಿಶ್ರಾಂತಿಗಾಗಿ ಆಗಮಿಸಿರುವುದರಿಂದ ಕೆಲಸದ ಒತ್ತಡವಿತ್ತು. ಅವರು ಮೂಲ ಸ್ಥಾನಕ್ಕೆ ತೆರಳಿದ ಕೂಡಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.”
-ಬೋರೇಗೌಡ, ಪಿಡಿಒ, ಬೈಲಕುಪ್ಪೆ ಗ್ರಾಪಂ
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…