Andolana originals

ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ; ಗ್ರಾಮಸ್ಥರಿಗೆ ಕಿರಿಕಿರಿ

ಕೆ.ಶಿವಣ್ಣ

ಟಿಬೆಟಿಯನ್ ಕ್ಯಾಂಪ್‌ಗಳಿಂದ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ; ದುರ್ವಾಸನೆಯಿಂದ ರೋಗ ಹರಡುವ ಭೀತಿ

ಬೈಲಕುಪ್ಪೆ: ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟ ಪರಿಣಾಮ ದುರ್ವಾಸನೆ ಹರಡುತ್ತಿರುವುದರಿಂದ ಬೈಲಕುಪ್ಪೆ ಸುತ್ತಮುತ್ತಲಿನ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ಬೈಲಕುಪ್ಪೆ ಪೆಟ್ರೋಲ್ ಬಂಕ್ ಸಮೀಪ ಟಿಬೆಟಿಯನ್ ಸೊಸೈಟಿ ವತಿಯಿಂದ ಟೆಂಡರ್ ಮೂಲಕ ಗುತ್ತಿಗೆ ನೀಡಿದ ಗುತ್ತಿಗೆದಾರರಿಂದ ಟಿಬೆಟಿಯನ್ ಕ್ಯಾಂಪ್‌ಗಳಿಂದ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯನ್ನು ಸಂಗ್ರಹಿಸಿ ವಾಹನದಲ್ಲಿ ತಂದು ಸುರಿದು ಗ್ರೇಡ್ ಮಾಡಿಕೊಂಡು, ವಾರಕ್ಕೆರಡು ಬಾರಿ ತ್ಯಾಜ್ಯದ ಗುಂಡಿಗೆ ಹಾಕಿ ಸುಡುವುದರಿಂದ ದುರ್ವಾಸನೆ ಬೀರುತ್ತಿದೆ.

ಇದರಿಂದ ಗ್ರಾಮದ ಜನರಿಗೆ ಸಮಸ್ಯೆಯಾಗಿದೆ. ರಾತ್ರಿ ವೇಳೆ ಮನೆಯಿಂದ ಜನರು ಹೊರಬಂದರೆ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಹಿಂದೆ ಇದ್ದ ಬೈಲಕುಪ್ಪೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರ ದೂರಿನ ಮೇರೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಟಿಬೆಟಿಯನ್ ಸೊಸೈಟಿ ವ್ಯವಸ್ಥಾಪಕರೊಡನೆ ಚರ್ಚಿಸಿದ್ದು, ಟಿಬೆಟಿಯನ್ ಕ್ಯಾಂಪಿನ ಹೊರವಲಯದಲ್ಲಿ ತ್ಯಾಜ್ಯ ವಿಲೇವಾರಿಗೆ ಜಾಗ ಪತ್ತೆ ಹಚ್ಚಲಾಗಿದೆ.

ಕೊರೊನಾ ಬಂದಿದ್ದರಿಂದ ಆ ವಿಚಾರ ನನೆಗುದಿಗೆ ಬಿದ್ದಿತು. ಬೇಸಿಗೆ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದು, ಪಿಡಿಒಗೆ ಹಲವಾರು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಜವರೇಗೌಡ, ದೂರಿದ್ದಾರೆ.

” ಈ ವಿಚಾರ ಕುರಿತು ನಾವು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ್ದು, ಕೂಡಲೇ ಸಂಬಂಧಪಟ್ಟವರಿಗೆ ಪಂಚಾಯಿತಿ ವತಿಯಿಂದ ತಿಳಿವಳಿಕೆ ಪತ್ರ ನೀಡಲಾಗಿದೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.”

-ರಘು, ಗ್ರಾಪಂ ಅಧ್ಯಕ್ಷ, ಬೈಲಕುಪ್ಪೆ

” ಈಗಾಗಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಬೌದ್ಧ ಗುರು ದಲೈಲಾಮಾ ಇಲ್ಲಿಗೆ ವಿಶ್ರಾಂತಿಗಾಗಿ ಆಗಮಿಸಿರುವುದರಿಂದ ಕೆಲಸದ ಒತ್ತಡವಿತ್ತು. ಅವರು ಮೂಲ ಸ್ಥಾನಕ್ಕೆ ತೆರಳಿದ ಕೂಡಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.”

-ಬೋರೇಗೌಡ, ಪಿಡಿಒ, ಬೈಲಕುಪ್ಪೆ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

4 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

8 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

8 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

8 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

9 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

9 hours ago