ಕೆ.ಶಿವಣ್ಣ
ಟಿಬೆಟಿಯನ್ ಕ್ಯಾಂಪ್ಗಳಿಂದ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ; ದುರ್ವಾಸನೆಯಿಂದ ರೋಗ ಹರಡುವ ಭೀತಿ
ಬೈಲಕುಪ್ಪೆ: ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟ ಪರಿಣಾಮ ದುರ್ವಾಸನೆ ಹರಡುತ್ತಿರುವುದರಿಂದ ಬೈಲಕುಪ್ಪೆ ಸುತ್ತಮುತ್ತಲಿನ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ಬೈಲಕುಪ್ಪೆ ಪೆಟ್ರೋಲ್ ಬಂಕ್ ಸಮೀಪ ಟಿಬೆಟಿಯನ್ ಸೊಸೈಟಿ ವತಿಯಿಂದ ಟೆಂಡರ್ ಮೂಲಕ ಗುತ್ತಿಗೆ ನೀಡಿದ ಗುತ್ತಿಗೆದಾರರಿಂದ ಟಿಬೆಟಿಯನ್ ಕ್ಯಾಂಪ್ಗಳಿಂದ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯನ್ನು ಸಂಗ್ರಹಿಸಿ ವಾಹನದಲ್ಲಿ ತಂದು ಸುರಿದು ಗ್ರೇಡ್ ಮಾಡಿಕೊಂಡು, ವಾರಕ್ಕೆರಡು ಬಾರಿ ತ್ಯಾಜ್ಯದ ಗುಂಡಿಗೆ ಹಾಕಿ ಸುಡುವುದರಿಂದ ದುರ್ವಾಸನೆ ಬೀರುತ್ತಿದೆ.
ಇದರಿಂದ ಗ್ರಾಮದ ಜನರಿಗೆ ಸಮಸ್ಯೆಯಾಗಿದೆ. ರಾತ್ರಿ ವೇಳೆ ಮನೆಯಿಂದ ಜನರು ಹೊರಬಂದರೆ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹಿಂದೆ ಇದ್ದ ಬೈಲಕುಪ್ಪೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರ ದೂರಿನ ಮೇರೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಟಿಬೆಟಿಯನ್ ಸೊಸೈಟಿ ವ್ಯವಸ್ಥಾಪಕರೊಡನೆ ಚರ್ಚಿಸಿದ್ದು, ಟಿಬೆಟಿಯನ್ ಕ್ಯಾಂಪಿನ ಹೊರವಲಯದಲ್ಲಿ ತ್ಯಾಜ್ಯ ವಿಲೇವಾರಿಗೆ ಜಾಗ ಪತ್ತೆ ಹಚ್ಚಲಾಗಿದೆ.
ಕೊರೊನಾ ಬಂದಿದ್ದರಿಂದ ಆ ವಿಚಾರ ನನೆಗುದಿಗೆ ಬಿದ್ದಿತು. ಬೇಸಿಗೆ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದು, ಪಿಡಿಒಗೆ ಹಲವಾರು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಜವರೇಗೌಡ, ದೂರಿದ್ದಾರೆ.
” ಈ ವಿಚಾರ ಕುರಿತು ನಾವು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ್ದು, ಕೂಡಲೇ ಸಂಬಂಧಪಟ್ಟವರಿಗೆ ಪಂಚಾಯಿತಿ ವತಿಯಿಂದ ತಿಳಿವಳಿಕೆ ಪತ್ರ ನೀಡಲಾಗಿದೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.”
-ರಘು, ಗ್ರಾಪಂ ಅಧ್ಯಕ್ಷ, ಬೈಲಕುಪ್ಪೆ
” ಈಗಾಗಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಬೌದ್ಧ ಗುರು ದಲೈಲಾಮಾ ಇಲ್ಲಿಗೆ ವಿಶ್ರಾಂತಿಗಾಗಿ ಆಗಮಿಸಿರುವುದರಿಂದ ಕೆಲಸದ ಒತ್ತಡವಿತ್ತು. ಅವರು ಮೂಲ ಸ್ಥಾನಕ್ಕೆ ತೆರಳಿದ ಕೂಡಲೇ ಟಿಬೆಟಿಯನ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.”
-ಬೋರೇಗೌಡ, ಪಿಡಿಒ, ಬೈಲಕುಪ್ಪೆ ಗ್ರಾಪಂ
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…