Andolana originals

24 ಗಂಟೆಯಲ್ಲೇ ಹರಿದು ಹೋದ ಫ್ಲೆಕ್ಸ್‌  ಎಸ್.ಎಸ್.ಭಟ್

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಚಾಮುಂಡಿ ಟೌನ್‌ಶಿಪ್ ಬಳಿಯ ರೈಲ್ವೆ ಮೇಲ್ಸೇತುವೆಯ ತಿರುವಿನಲ್ಲಿ ಯಾವುದೇ ಸೂಚನಾ ಫಲಕಗಳಿಲ್ಲದೆ ಅಲ್ಲಿ ಅಪಘಾತಗಳ ಸರಣಿಯೇ ನಡೆಯಲಾರಂಭಿಸಿದೆ.

ಈ ಸ್ಥಳದ ಸರಣಿ ಅಪಘಾತ ಹಾಗೂ ಸಾವು-ನೋವಿನ ಅನಾಹುತವನ್ನು ಅರಿತ ಶಾಸಕ ದರ್ಶನ್ ಧ್ರುವನಾರಾಯಣ ತಾಲ್ಲೂಕು ಪಂಚಾಯಿತಿಯಲ್ಲಿ ಸಭೆ ನಡೆಸಿ ಅಪಘಾತಗಳಾಗಿ ಅನೇಕ ಜನರ ಸಾವಿಗೆ ಕಾರಣವಾಗಿರುವ ಆ ಸ್ಥಳದಲ್ಲಿ ಎಚ್ಚರಿಕೆಯ ಸೂಚನಾ ಫಲಕವನ್ನುಅಳವಡಿಸಬೇಕು. ತಪ್ಪಿದಲ್ಲಿ ಆಗಬಹುದಾದ ಅಪಘಾತಗಳಿಗೆ ನಿಮ್ಮ ಮೇಲೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆಯ ಸೂಚನೆ ನೀಡಿದ್ದರು. ಶಾಸಕರು ಸೂಚನೆ ನೀಡಿ ವಾರ ಕಳೆದರೂ ಫಲಕ ಅಳವಡಿಸಿರಲಿಲ್ಲ.

ಇದನ್ನು ಓದಿ : ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

ಸೂಚನಾ ಫಲಕಗಳಿಲ್ಲದೆ ಮತ್ತೆ ಘಟಿಸಿದ ಅಪಘಾತದಲ್ಲಿ ಸಾವು ಸಂಭವಿಸಿದಾಗ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗುತ್ತಿರುವ ಅಪಘಾತ ಎಂದು ಪೊಲೀಸರು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. ಅದಾದ ಮೇಲೆ ಅವರು ಕಾಟಾಚಾರದ ಪ್ಲೆಕ್ಸ್ ಮಾಡಿ ತಂದು ಹಾಕಿದರು. ಆದರೆ ಇದು ಹಾಕಿದ ೨೪ ಗಂಟೆಗಳೊಳಗೆ ಗಾಳಿಗೆ ಹರಿದು ಹೋಗಿದೆ. ಅಲ್ಲಿ ಸೂಚನಾಫಲಕ ಅಳವಡಿಸಿ ಅಪಘಾತಗಳನ್ನು ತಡೆಗಟ್ಟಬೇಕೆಂಬ ಶಾಸಕರ ಸದುದ್ದೇಶಕ್ಕೆ ಇದರಿಂದ ತಡೆಯಾದಂತಾಗಿದೆ.

ಕಳಪೆ ಫ್ಲೆಕ್ಸ್ ಅಳವಡಿಕೆ:  ಯಾವುದೋ ಮದುವೆ ಅಥವಾ ಗೃಹ ಪ್ರವೇಶದ ಮನೆಗಳಿಗೆ ದಾರಿ ತೋರುವಂತಿದ್ದ ಪ್ಲಾಸ್ಟಿಕ್ ಪ್ಲೆಕ್ಸ್ ತಂದು ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ಸಂಚಾರ ಶುಲ್ಕ ವಸೂಲಿ ಮಾಡುವ ಪ್ರಾಧಿಕಾರಕ್ಕೆ ಸಂಚಾರಿಗಳ ಪ್ರಾಣ ರಕ್ಷಣೆಗಾಗಿ ಗುಣಮಟ್ಟದ ಸೂಚನಾ ಫಲಕ ಅಳವಡಿಸಲು ಹಣವಿಲ್ಲವೇ? ಒಂದೇ ದಿನದಲ್ಲಿ ಹರಿದು ಚಿಂದಿಯಾಗಿರುವ ಕಳಪೆ ಗುಣಮಟ್ಟದ ಪ್ಲೆಕ್ಸ್ ಏಕೆ? ಮತ್ತೇ ಇಲ್ಲಿ ಸರಣಿ ಅಪಘಾತ ಮುಂದುವರಿಯುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬೇಕೆ ಎಂಬ ಸಾರ್ವಜನಿಕರ ಪ್ರಶ್ನೆಗೆ ಈಗ ಉತ್ತರಿಸುವವರ‍್ಯಾರು?

ಆಂದೋಲನ ಡೆಸ್ಕ್

Recent Posts

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

24 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

1 hour ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

1 hour ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

4 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

4 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

4 hours ago