Andolana originals

24 ಗಂಟೆಯಲ್ಲೇ ಹರಿದು ಹೋದ ಫ್ಲೆಕ್ಸ್‌  ಎಸ್.ಎಸ್.ಭಟ್

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಚಾಮುಂಡಿ ಟೌನ್‌ಶಿಪ್ ಬಳಿಯ ರೈಲ್ವೆ ಮೇಲ್ಸೇತುವೆಯ ತಿರುವಿನಲ್ಲಿ ಯಾವುದೇ ಸೂಚನಾ ಫಲಕಗಳಿಲ್ಲದೆ ಅಲ್ಲಿ ಅಪಘಾತಗಳ ಸರಣಿಯೇ ನಡೆಯಲಾರಂಭಿಸಿದೆ.

ಈ ಸ್ಥಳದ ಸರಣಿ ಅಪಘಾತ ಹಾಗೂ ಸಾವು-ನೋವಿನ ಅನಾಹುತವನ್ನು ಅರಿತ ಶಾಸಕ ದರ್ಶನ್ ಧ್ರುವನಾರಾಯಣ ತಾಲ್ಲೂಕು ಪಂಚಾಯಿತಿಯಲ್ಲಿ ಸಭೆ ನಡೆಸಿ ಅಪಘಾತಗಳಾಗಿ ಅನೇಕ ಜನರ ಸಾವಿಗೆ ಕಾರಣವಾಗಿರುವ ಆ ಸ್ಥಳದಲ್ಲಿ ಎಚ್ಚರಿಕೆಯ ಸೂಚನಾ ಫಲಕವನ್ನುಅಳವಡಿಸಬೇಕು. ತಪ್ಪಿದಲ್ಲಿ ಆಗಬಹುದಾದ ಅಪಘಾತಗಳಿಗೆ ನಿಮ್ಮ ಮೇಲೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆಯ ಸೂಚನೆ ನೀಡಿದ್ದರು. ಶಾಸಕರು ಸೂಚನೆ ನೀಡಿ ವಾರ ಕಳೆದರೂ ಫಲಕ ಅಳವಡಿಸಿರಲಿಲ್ಲ.

ಇದನ್ನು ಓದಿ : ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

ಸೂಚನಾ ಫಲಕಗಳಿಲ್ಲದೆ ಮತ್ತೆ ಘಟಿಸಿದ ಅಪಘಾತದಲ್ಲಿ ಸಾವು ಸಂಭವಿಸಿದಾಗ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗುತ್ತಿರುವ ಅಪಘಾತ ಎಂದು ಪೊಲೀಸರು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. ಅದಾದ ಮೇಲೆ ಅವರು ಕಾಟಾಚಾರದ ಪ್ಲೆಕ್ಸ್ ಮಾಡಿ ತಂದು ಹಾಕಿದರು. ಆದರೆ ಇದು ಹಾಕಿದ ೨೪ ಗಂಟೆಗಳೊಳಗೆ ಗಾಳಿಗೆ ಹರಿದು ಹೋಗಿದೆ. ಅಲ್ಲಿ ಸೂಚನಾಫಲಕ ಅಳವಡಿಸಿ ಅಪಘಾತಗಳನ್ನು ತಡೆಗಟ್ಟಬೇಕೆಂಬ ಶಾಸಕರ ಸದುದ್ದೇಶಕ್ಕೆ ಇದರಿಂದ ತಡೆಯಾದಂತಾಗಿದೆ.

ಕಳಪೆ ಫ್ಲೆಕ್ಸ್ ಅಳವಡಿಕೆ:  ಯಾವುದೋ ಮದುವೆ ಅಥವಾ ಗೃಹ ಪ್ರವೇಶದ ಮನೆಗಳಿಗೆ ದಾರಿ ತೋರುವಂತಿದ್ದ ಪ್ಲಾಸ್ಟಿಕ್ ಪ್ಲೆಕ್ಸ್ ತಂದು ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ಸಂಚಾರ ಶುಲ್ಕ ವಸೂಲಿ ಮಾಡುವ ಪ್ರಾಧಿಕಾರಕ್ಕೆ ಸಂಚಾರಿಗಳ ಪ್ರಾಣ ರಕ್ಷಣೆಗಾಗಿ ಗುಣಮಟ್ಟದ ಸೂಚನಾ ಫಲಕ ಅಳವಡಿಸಲು ಹಣವಿಲ್ಲವೇ? ಒಂದೇ ದಿನದಲ್ಲಿ ಹರಿದು ಚಿಂದಿಯಾಗಿರುವ ಕಳಪೆ ಗುಣಮಟ್ಟದ ಪ್ಲೆಕ್ಸ್ ಏಕೆ? ಮತ್ತೇ ಇಲ್ಲಿ ಸರಣಿ ಅಪಘಾತ ಮುಂದುವರಿಯುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬೇಕೆ ಎಂಬ ಸಾರ್ವಜನಿಕರ ಪ್ರಶ್ನೆಗೆ ಈಗ ಉತ್ತರಿಸುವವರ‍್ಯಾರು?

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

6 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

35 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago