Andolana originals

24 ಗಂಟೆಯಲ್ಲೇ ಹರಿದು ಹೋದ ಫ್ಲೆಕ್ಸ್‌  ಎಸ್.ಎಸ್.ಭಟ್

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಚಾಮುಂಡಿ ಟೌನ್‌ಶಿಪ್ ಬಳಿಯ ರೈಲ್ವೆ ಮೇಲ್ಸೇತುವೆಯ ತಿರುವಿನಲ್ಲಿ ಯಾವುದೇ ಸೂಚನಾ ಫಲಕಗಳಿಲ್ಲದೆ ಅಲ್ಲಿ ಅಪಘಾತಗಳ ಸರಣಿಯೇ ನಡೆಯಲಾರಂಭಿಸಿದೆ.

ಈ ಸ್ಥಳದ ಸರಣಿ ಅಪಘಾತ ಹಾಗೂ ಸಾವು-ನೋವಿನ ಅನಾಹುತವನ್ನು ಅರಿತ ಶಾಸಕ ದರ್ಶನ್ ಧ್ರುವನಾರಾಯಣ ತಾಲ್ಲೂಕು ಪಂಚಾಯಿತಿಯಲ್ಲಿ ಸಭೆ ನಡೆಸಿ ಅಪಘಾತಗಳಾಗಿ ಅನೇಕ ಜನರ ಸಾವಿಗೆ ಕಾರಣವಾಗಿರುವ ಆ ಸ್ಥಳದಲ್ಲಿ ಎಚ್ಚರಿಕೆಯ ಸೂಚನಾ ಫಲಕವನ್ನುಅಳವಡಿಸಬೇಕು. ತಪ್ಪಿದಲ್ಲಿ ಆಗಬಹುದಾದ ಅಪಘಾತಗಳಿಗೆ ನಿಮ್ಮ ಮೇಲೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆಯ ಸೂಚನೆ ನೀಡಿದ್ದರು. ಶಾಸಕರು ಸೂಚನೆ ನೀಡಿ ವಾರ ಕಳೆದರೂ ಫಲಕ ಅಳವಡಿಸಿರಲಿಲ್ಲ.

ಇದನ್ನು ಓದಿ : ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

ಸೂಚನಾ ಫಲಕಗಳಿಲ್ಲದೆ ಮತ್ತೆ ಘಟಿಸಿದ ಅಪಘಾತದಲ್ಲಿ ಸಾವು ಸಂಭವಿಸಿದಾಗ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗುತ್ತಿರುವ ಅಪಘಾತ ಎಂದು ಪೊಲೀಸರು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. ಅದಾದ ಮೇಲೆ ಅವರು ಕಾಟಾಚಾರದ ಪ್ಲೆಕ್ಸ್ ಮಾಡಿ ತಂದು ಹಾಕಿದರು. ಆದರೆ ಇದು ಹಾಕಿದ ೨೪ ಗಂಟೆಗಳೊಳಗೆ ಗಾಳಿಗೆ ಹರಿದು ಹೋಗಿದೆ. ಅಲ್ಲಿ ಸೂಚನಾಫಲಕ ಅಳವಡಿಸಿ ಅಪಘಾತಗಳನ್ನು ತಡೆಗಟ್ಟಬೇಕೆಂಬ ಶಾಸಕರ ಸದುದ್ದೇಶಕ್ಕೆ ಇದರಿಂದ ತಡೆಯಾದಂತಾಗಿದೆ.

ಕಳಪೆ ಫ್ಲೆಕ್ಸ್ ಅಳವಡಿಕೆ:  ಯಾವುದೋ ಮದುವೆ ಅಥವಾ ಗೃಹ ಪ್ರವೇಶದ ಮನೆಗಳಿಗೆ ದಾರಿ ತೋರುವಂತಿದ್ದ ಪ್ಲಾಸ್ಟಿಕ್ ಪ್ಲೆಕ್ಸ್ ತಂದು ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ಸಂಚಾರ ಶುಲ್ಕ ವಸೂಲಿ ಮಾಡುವ ಪ್ರಾಧಿಕಾರಕ್ಕೆ ಸಂಚಾರಿಗಳ ಪ್ರಾಣ ರಕ್ಷಣೆಗಾಗಿ ಗುಣಮಟ್ಟದ ಸೂಚನಾ ಫಲಕ ಅಳವಡಿಸಲು ಹಣವಿಲ್ಲವೇ? ಒಂದೇ ದಿನದಲ್ಲಿ ಹರಿದು ಚಿಂದಿಯಾಗಿರುವ ಕಳಪೆ ಗುಣಮಟ್ಟದ ಪ್ಲೆಕ್ಸ್ ಏಕೆ? ಮತ್ತೇ ಇಲ್ಲಿ ಸರಣಿ ಅಪಘಾತ ಮುಂದುವರಿಯುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬೇಕೆ ಎಂಬ ಸಾರ್ವಜನಿಕರ ಪ್ರಶ್ನೆಗೆ ಈಗ ಉತ್ತರಿಸುವವರ‍್ಯಾರು?

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago