Andolana originals

ಚಂದದ ಬದುಕು ನೀಡಿದ ಚೆಂಡು ಹೂ ಬೇಸಾಯ

ಅನಿಲ್ ಅಂತರಸಂತೆ

ಬೇಸಾಯ ಎಂಬುದು ಈಗ ಯುವಕರಿಂದ ದೂರಾಗಿದೆ. ಅಲ್ಪಸ್ವಲ್ಪ ಜಮೀನು ಇದ್ದರಂತೂ ಅವರು ಜಮೀನಿನತ್ತ ಮುಖ ಮಾಡಿಯೂ ನೋಡುವುದಿಲ್ಲ. ಜಮೀನನ್ನು ಮಾರಾಟ ಮಾಡಿ ನಗರ ಭಾಗಗಳಲ್ಲಿ ಹೋಗಿ ನೆಲೆಸಿ ಬಿಡುತ್ತಾರೆ.

ಹೌದು, ಗ್ರಾಮೀಣ ಭಾಗಗಳಲ್ಲಿ ಈಗ ಕೃಷಿ ಬಿಟ್ಟು ನಗರಗಳತ್ತ ಹೋಗುವವರೇ ಹೆಚ್ಚು. ಅಲ್ಪಸ್ವಲ್ಪ ಭೂಮಿಯಲ್ಲಿ ಕೃಷಿ ಮಾಡಿ ಅದರಿಂದ ಲಾಭ ಪಡೆದು ಜೀವನ ಸಾಗಿಸು ವುದಾದರೂ ಹೇಗೆ? ಎಂಬ ಉದ್ದೇಶದಿಂದಲೇ ಕೃಷಿ ಬಿಡುವವರೇ ಹೆಚ್ಚಾಗಿದ್ದಾರೆ. ಅರ್ಧ ಎಕರೆ, ಮುಕ್ಕಾಲು ಎಕರೆ ಭೂಮಿಯಲ್ಲಿ ಕೃಷಿ ಬೆಳೆಯನ್ನು ಮಾರಾಟ ಮಾಡುವುದರಲ್ಲೇ ಬಂದ ಲಾಭವೆಲ್ಲಾ ಅಲ್ಲಿಯೇ ಖರ್ಚಾಗಿ ಹೋಗುತ್ತದೆ. ಹೀಗಿರುವ ಕೃಷಿಯಿಂದ ಆದಾಯ ಪಡೆದು ಜೀವನ ಸಾಗಿಸುವುದು ಕಷ್ಟದ ಕೆಲಸ. ಹೀಗಾಗಿಯೇ ಜಮೀನು ಮಾರಿ ನಗರಗಳತ್ತ ಮುಖ ಮಾಡಿಬಿಡುತ್ತಾರೆ. ಹೀಗೆ ಕೃಷಿ ತೊರೆದು ನಗರಗಳತ್ತ ಹೋಗುವವರ ಮಧ್ಯೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾಚನಾಯಕನಹಳ್ಳಿ ಗ್ರಾಮದ ರೈತ ಗೋಪಾಲಶೆಟ್ಟಿ ಮಾದರಿಯಾಗಿದ್ದಾರೆ. ಇವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದು, ಮುಕ್ಕಾಲು ಎಕರೆ ಜಮೀನನ್ನು ಚೆಂಡು ಹೂ ಬೇಸಾಯಕ್ಕಾಗಿ ಮೀಸಲಿಟ್ಟು, ಹೂ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವ ಮೂಲಕ ಮಾದರಿ ರೈತರ ಅನಿಸಿಕೊಂಡಿದ್ದಾರೆ.

ಗೋಪಾಲ ಶೆಟ್ಟಿಯವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಟೊಮೆಟೋ, ಚೊಟ್ಟು, ಮೆಂತ್ಯ, ಜೋಳ ಜತೆ ಚೆಂಡು ಹೂ ಬೆಳೆಯುವ ಮೂಲಕ ಲಾಭದಾಯಕ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಸಾಧಾರಣ ಆದಾಯ ವಿದ್ದ ಕೃಷಿಯಲ್ಲಿ ಕುಟುಂಬದವರೆಲ್ಲ ಸೇರಿ ದುಡಿಯುತ್ತಿದ್ದರು. ಈ ವೇಳೆ ಓಮ್ಮಿ ಆಕ್ಟಿವ್ ಹೆಲ್ತ್ ಟೆಕ್ನಾಲಜಿಸ್ ಕಂಪೆನಿಯ ಸಹಕಾರದಿಂದ ಕಂಪೆನಿಯಲ್ಲಿಯೇ ಚೆಂಡು ಹೂ ಬಿತ್ತನೆ ಬೀಜ, ಗೊಬ್ಬರ ಪಡೆದು ಚೆಂಡು ಹೂ ಬೇಸಾಯ ಆರಂಭಿಸಿದರು. ಸದ್ಯ ಗುಣಮಟ್ಟದ ಬೇಸಾಯ ಮಾಡುತ್ತಿರುವ ಗೋಪಾಲಶೆಟ್ಟಿ, ಪ್ರತಿ ಭಾರಿ 8-10 ಟನ್‌ಗಳಷ್ಟು ಹೂ ಬೆಳೆಯುತ್ತಾರೆ. ಕೆಲ ಬಾರಿ ಉತ್ತಮ ಮಳೆಯಾಗಿ ಸಕಾಲಕ್ಕೆ ಗೊಬ್ಬರ ನೀಡಿದರೆ 10-12 ಟನ್‌ನಷ್ಟು ಹೂ ಸಿಗಲಿದೆ.

ಓಮ್ಮಿ ಆಕ್ಟಿವ್ ಹೆಲ್ತ್‌ ಟೆಕ್ನಾಲಜಿಸ್ ಕಂಪೆನಿಯು ರೈತರಿಗೆ ಚೆಂಡು ಹೂ ಬಿತ್ತನೆ ಬೀಜ, ಗೊಬ್ಬರವನ್ನು ವಿತರಣೆ ಮಾಡುತ್ತಿದ್ದು, ಬೆಳೆಯನ್ನು ಜಮೀನಿಗೆ ನೇರವಾಗಿ ರೈತರಿಂದಲೇ ಖರೀದಿಸುತ್ತದೆ. ಅಲ್ಲದೆ ಕಂಪೆನಿಯ ತಜ್ಞರು, ಅಧಿಕಾರಿಗಳು ಆಗಾಗ್ಗೆ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಗುಣಮಟ್ಟವನ್ನು ಪರಿಶೀಲಿಸುತ್ತಾರೆ.

ಬೆಳೆಯನ್ನೂ ನೇರವಾಗಿ ರೈತರ ಭೂಮಿಯಿಂದಲೇ ಖರೀದಿಸುತ್ತಾರೆ. ಬೆಳೆ ಕೈಗೆ ಬಂದ ಬಳಿಕ ತಗುಲಿದ ಖರ್ಚು ಹಿಡಿದು ಬಂದ ಆದಾಯವನ್ನು ರೈತರಿಗೆ ನೇರವಾಗಿ ನೀಡುವುದರಿಂದ ರೈತರಿಗೆ ಮಾರುಕಟ್ಟೆಯ ಸಮಸ್ಯೆಯೂ ತಪ್ಪುತ್ತಿದೆ.
ania64936@gmail.com

ನಾನು ನಾಲೈದು ವರ್ಷಗಳಿಂದ ಚೆಂಡು ಹೂ ಬೇಸಾಯ ಮಾಡುತ್ತಿದ್ದೇನೆ. ಉತ್ತಮ ಲಾಭ ಇದೆ. ಕಂಪೆನಿಯ ಕಡೆಯಿಂದ ಪ್ರೋತ್ಸಾಹ ಚೆನ್ನಾಗಿದೆ. ಆರಂಭದಲ್ಲಿ ನಾನು ಬೆಳೆಯು ತ್ತಿದ್ದ ಬೆಳೆಗಳಿಗೆ ಹೋಲಿಸಿದರೆ ಚೆಂಡು ಹೂನಲ್ಲಿ ಹೆಚ್ಚಿನ ಲಾಭವಿದೆ. ಕಂಪೆನಿಯವರೇ ಸ್ಥಳಕ್ಕೆ ಬಂದು ಖರೀದಿ ಮಾಡುವುದರಿಂದ ಮಾರುಕಟ್ಟೆ ಸಮಸ್ಯೆಯೂ ಇಲ್ಲ.
-ಗೋಪಾಲ ಶೆಟ್ಟಿ, ರೈತ.

ಇತರೆ ಬೆಳೆಗಳಿಂತ ಚೆಂಡು ಹೂನಲ್ಲಿ ಲಾಭ ಇದೆ. ಮಳೆ ಚೆನ್ನಾಗಿ ಬಂದಷ್ಟು ಫಸಲು ಚೆನ್ನಾಗಿರಲಿದೆ. ಚೆಂಡು ಹೂನಿಂದ ನಮಗೆ ನಷ್ಟವಾಗಿಲ್ಲ. ನಾನು ನಮ್ಮ ತಂದೆ, ತಾಯಿ ಎಲ್ಲರೂ ಒಟ್ಟಾಗಿ ಜಮೀನಿನಲ್ಲಿ ಶ್ರಮಿಸುತ್ತೇವೆ. ಅಗತ್ಯವಿದ್ದಾಗ ಕೆಲಸಗಾರರನ್ನು ಕರೆದುಕೊಳ್ಳುತ್ತೇವೆ.
-ಚಿನ್ನ ಗೋಪಾಲ, ಗೋಪಾಲ ಶೆಟ್ಟಿಯವರ ಮಗ.

ತಾಲ್ಲೂಕಿನಲ್ಲಿ ಚೆಂಡು ಹೂ ಬೆಳೆಯುವವರ ಸಂಖ್ಯೆ ಹೆಚ್ಚಾಗಿದೆ. ಕಂಪೆನಿಯೇ ಸ್ಥಳಕ್ಕೆ ಬಂದು ಖರೀದಿ ಮಾಡುವುದರಿಂದ ಮಾರಕಟ್ಟೆಯ ಸಮಸ್ಯೆಯೂ ಇಲ್ಲ. ಅಗತ್ಯ ಬಿದ್ದಾಗ ತಜ್ಞರು, ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ರೈತರಿಗೆ ಅಗತ್ಯ ಸಲಹೆ ನೀಡುತ್ತಾರೆ.
-ಗಣೇಶ್, ಓಮ್ಮಿ ಆಕ್ಟಿವ್‌ ಹೆಲ್ತ್ ಟೆಕ್ನಾಲಜಿಸ್.

ಅನಿಲ್‌ ಅಂತರಸಂತೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ವಾಸಿಸುತ್ತಿರುವ ನಾನು 2019ರಲ್ಲಿ ಮೈಸೂರಿನ ಮಾನಸಗಂಗೋತ್ರಿ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ನನ್ನ ವಿದ್ಯಾಭ್ಯಾಸದ ಬಳಿಕ ಮೈಸೂರಿನ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದರೊಂದಿಗೆ ನಾನು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕನಾಗಿದ್ದು, ದೇಶದ ವಿವಿಧ ಕಾಡುಗಳಲ್ಲಿ ಸಫಾರಿ ಮಾಡಿ ವನ್ಯಜೀವಿಗಳ ಛಾಯಾಚಿತ್ರ ಸೆರೆಹಿಡಿದು ಅವುಗಳ ಮೇಲೆ ಲೇಖನಗಳನ್ನು ಬರೆಯುವುದು, ಪ್ರವಾಸಿ ಲೇಖನಗಳನ್ನು ಬರೆಯುವುದು, ವನ್ಯಜೀವಿ ಸಂಬಂಧಿತ ಪುಸ್ತಕಗಳನ್ನು ಓದುವುದು ನನ್ನ ಹವ್ಯಾಸ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago