ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ.
ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ ಮೊದಲು ಕೊಳ್ಳೇಗಾಲದಲ್ಲಿ ಹೂವಿನ ವ್ಯಾಪಾರವನ್ನೇ ಮಾಡುತ್ತಿದ್ದ ರಂಗಣ್ಣ ಅವರಿಗೆ ಮೈಸೂರಿಗೆ ಬರಬೇಕೆನಿಸಿದ್ದೇ ಅಚ್ಚರಿ. ತನ್ನೂರನ್ನು ಬಿಟ್ಟು, ಮೈಸೂರಿಗೆ ಬಂದಾಗ ಹೊಂದಿಕೊಳ್ಳುವುದಕ್ಕೆ ಕಷ್ಟ ವೆನಿಸಿದರೂ ವ್ಯಾಪಾರದ ಗುಟ್ಟು ತಿಳಿದ ಕಾರಣ ಬದುಕು ಸರಾಗವಾಯಿತು. ರಂಗಣ್ಣ ಅವರ ಬಳಿ ಸಿಗುವುದು ಚೆಂಡು ಹೂ ಮಾತ್ರ. ಮಲ್ಲಿಗೆ, ಸೇವಂತಿಗೆ ಹೂಗಳನ್ನು ಏಕೆ ಮಾರುತ್ತಿಲ್ಲವೆಂದರೆ ಇವರು ಹೇಳುವುದು ಲಾಭವಿಲ್ಲ ಎಂಬ ಒಂದೇ ಉತ್ತರ. ಮೈಸೂರಿನಲ್ಲಿ ನಿರಂತರವಾಗಿ ಸುರಿವ ಮಳೆಯ ನಡುವೆಯೂ ಟಾರ್ಪಲ್ ಕಟ್ಟಿಕೊಂಡು, ಹೂ ಮಾರುತ್ತಾರೆ. ದುಡ್ಡಿಗೆ ಚರ್ಚಿಸುವ ಗ್ರಾಹಕರ ಬಗೆಗಾಗಲಿ, ವ್ಯಾಪಾರವನ್ನು ಸಂಕಷ್ಟಕ್ಕೀಡುಮಾಡಿದ ಮಳೆಯ ಬಗೆಗಾಗಲಿ ಇವರಿಗೆ ಯಾವ ಬೇಸರವೂ ಇಲ್ಲ. ಮನುಷ್ಯ, ಪ್ರಕೃತಿ ಇರಬೇಕಾದದ್ದೇ ಹಾಗೆ ಎನ್ನುತ್ತಾರೆ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…