ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ.
ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ ಮೊದಲು ಕೊಳ್ಳೇಗಾಲದಲ್ಲಿ ಹೂವಿನ ವ್ಯಾಪಾರವನ್ನೇ ಮಾಡುತ್ತಿದ್ದ ರಂಗಣ್ಣ ಅವರಿಗೆ ಮೈಸೂರಿಗೆ ಬರಬೇಕೆನಿಸಿದ್ದೇ ಅಚ್ಚರಿ. ತನ್ನೂರನ್ನು ಬಿಟ್ಟು, ಮೈಸೂರಿಗೆ ಬಂದಾಗ ಹೊಂದಿಕೊಳ್ಳುವುದಕ್ಕೆ ಕಷ್ಟ ವೆನಿಸಿದರೂ ವ್ಯಾಪಾರದ ಗುಟ್ಟು ತಿಳಿದ ಕಾರಣ ಬದುಕು ಸರಾಗವಾಯಿತು. ರಂಗಣ್ಣ ಅವರ ಬಳಿ ಸಿಗುವುದು ಚೆಂಡು ಹೂ ಮಾತ್ರ. ಮಲ್ಲಿಗೆ, ಸೇವಂತಿಗೆ ಹೂಗಳನ್ನು ಏಕೆ ಮಾರುತ್ತಿಲ್ಲವೆಂದರೆ ಇವರು ಹೇಳುವುದು ಲಾಭವಿಲ್ಲ ಎಂಬ ಒಂದೇ ಉತ್ತರ. ಮೈಸೂರಿನಲ್ಲಿ ನಿರಂತರವಾಗಿ ಸುರಿವ ಮಳೆಯ ನಡುವೆಯೂ ಟಾರ್ಪಲ್ ಕಟ್ಟಿಕೊಂಡು, ಹೂ ಮಾರುತ್ತಾರೆ. ದುಡ್ಡಿಗೆ ಚರ್ಚಿಸುವ ಗ್ರಾಹಕರ ಬಗೆಗಾಗಲಿ, ವ್ಯಾಪಾರವನ್ನು ಸಂಕಷ್ಟಕ್ಕೀಡುಮಾಡಿದ ಮಳೆಯ ಬಗೆಗಾಗಲಿ ಇವರಿಗೆ ಯಾವ ಬೇಸರವೂ ಇಲ್ಲ. ಮನುಷ್ಯ, ಪ್ರಕೃತಿ ಇರಬೇಕಾದದ್ದೇ ಹಾಗೆ ಎನ್ನುತ್ತಾರೆ.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…