Andolana originals

ಹೂವೇ ಬದುಕಾಗಿರುವ ರಂಗಣ್ಣನಾಯಕ

ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ.

ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ ಮೊದಲು ಕೊಳ್ಳೇಗಾಲದಲ್ಲಿ ಹೂವಿನ ವ್ಯಾಪಾರವನ್ನೇ ಮಾಡುತ್ತಿದ್ದ ರಂಗಣ್ಣ ಅವರಿಗೆ ಮೈಸೂರಿಗೆ ಬರಬೇಕೆನಿಸಿದ್ದೇ ಅಚ್ಚರಿ. ತನ್ನೂರನ್ನು ಬಿಟ್ಟು, ಮೈಸೂರಿಗೆ ಬಂದಾಗ ಹೊಂದಿಕೊಳ್ಳುವುದಕ್ಕೆ ಕಷ್ಟ ವೆನಿಸಿದರೂ ವ್ಯಾಪಾರದ ಗುಟ್ಟು ತಿಳಿದ ಕಾರಣ ಬದುಕು ಸರಾಗವಾಯಿತು. ರಂಗಣ್ಣ ಅವರ ಬಳಿ ಸಿಗುವುದು ಚೆಂಡು ಹೂ ಮಾತ್ರ. ಮಲ್ಲಿಗೆ, ಸೇವಂತಿಗೆ ಹೂಗಳನ್ನು ಏಕೆ ಮಾರುತ್ತಿಲ್ಲವೆಂದರೆ ಇವರು ಹೇಳುವುದು ಲಾಭವಿಲ್ಲ ಎಂಬ ಒಂದೇ ಉತ್ತರ. ಮೈಸೂರಿನಲ್ಲಿ ನಿರಂತರವಾಗಿ ಸುರಿವ ಮಳೆಯ ನಡುವೆಯೂ ಟಾರ್ಪಲ್ ಕಟ್ಟಿಕೊಂಡು, ಹೂ ಮಾರುತ್ತಾರೆ. ದುಡ್ಡಿಗೆ ಚರ್ಚಿಸುವ ಗ್ರಾಹಕರ ಬಗೆಗಾಗಲಿ, ವ್ಯಾಪಾರವನ್ನು ಸಂಕಷ್ಟಕ್ಕೀಡುಮಾಡಿದ ಮಳೆಯ ಬಗೆಗಾಗಲಿ ಇವರಿಗೆ ಯಾವ ಬೇಸರವೂ ಇಲ್ಲ. ಮನುಷ್ಯ, ಪ್ರಕೃತಿ ಇರಬೇಕಾದದ್ದೇ ಹಾಗೆ ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

14 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

29 mins ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

44 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 hours ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

2 hours ago