Andolana originals

ಹೂವೇ ಬದುಕಾಗಿರುವ ರಂಗಣ್ಣನಾಯಕ

ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ.

ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ ಮೊದಲು ಕೊಳ್ಳೇಗಾಲದಲ್ಲಿ ಹೂವಿನ ವ್ಯಾಪಾರವನ್ನೇ ಮಾಡುತ್ತಿದ್ದ ರಂಗಣ್ಣ ಅವರಿಗೆ ಮೈಸೂರಿಗೆ ಬರಬೇಕೆನಿಸಿದ್ದೇ ಅಚ್ಚರಿ. ತನ್ನೂರನ್ನು ಬಿಟ್ಟು, ಮೈಸೂರಿಗೆ ಬಂದಾಗ ಹೊಂದಿಕೊಳ್ಳುವುದಕ್ಕೆ ಕಷ್ಟ ವೆನಿಸಿದರೂ ವ್ಯಾಪಾರದ ಗುಟ್ಟು ತಿಳಿದ ಕಾರಣ ಬದುಕು ಸರಾಗವಾಯಿತು. ರಂಗಣ್ಣ ಅವರ ಬಳಿ ಸಿಗುವುದು ಚೆಂಡು ಹೂ ಮಾತ್ರ. ಮಲ್ಲಿಗೆ, ಸೇವಂತಿಗೆ ಹೂಗಳನ್ನು ಏಕೆ ಮಾರುತ್ತಿಲ್ಲವೆಂದರೆ ಇವರು ಹೇಳುವುದು ಲಾಭವಿಲ್ಲ ಎಂಬ ಒಂದೇ ಉತ್ತರ. ಮೈಸೂರಿನಲ್ಲಿ ನಿರಂತರವಾಗಿ ಸುರಿವ ಮಳೆಯ ನಡುವೆಯೂ ಟಾರ್ಪಲ್ ಕಟ್ಟಿಕೊಂಡು, ಹೂ ಮಾರುತ್ತಾರೆ. ದುಡ್ಡಿಗೆ ಚರ್ಚಿಸುವ ಗ್ರಾಹಕರ ಬಗೆಗಾಗಲಿ, ವ್ಯಾಪಾರವನ್ನು ಸಂಕಷ್ಟಕ್ಕೀಡುಮಾಡಿದ ಮಳೆಯ ಬಗೆಗಾಗಲಿ ಇವರಿಗೆ ಯಾವ ಬೇಸರವೂ ಇಲ್ಲ. ಮನುಷ್ಯ, ಪ್ರಕೃತಿ ಇರಬೇಕಾದದ್ದೇ ಹಾಗೆ ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

3 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

3 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

3 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

3 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

3 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

3 hours ago