Andolana originals

ಕುಪ್ಪಣ್ಣ ಪಾರ್ಕ್‌ನಲ್ಲಿ ಕಣ್ಮನ ಸೆಳೆವ ಪುಷ್ಪಲೋಕ

ಗಾಜಿನ ಮನೆಯಲ್ಲಿ ಗುಲಾಬಿ ಹೂವುಗಳಿಂದ ಸಿದ್ಧವಾದ ಸಂಸತ್ ಭವನ, ಅಂಬೇಡ್ಕರ್ ಪುತ್ತಳಿ; ಮಕ್ಕಳನ್ನು ಆಕರ್ಷಿಸುವ ಕೆಂಪು ಪಾರಿವಾಳ, ಹೂವಿನಿಂದ ಅಲಂಕೃತಗೊಂಡ ನವದುರ್ಗೆಯರ ಪ್ರತಿಕೃತಿಗಳು; ಬಣ್ಣ ಬಣ್ಣದ ಗುಲಾಬಿ ಹೂಗಳಿಂದ ಜೀವತಳೆದ ಕಲಾಕೃತಿಗಳು

ಕೆ.ಬಿ.ರಮೇಶ ನಾಯಕ

ಮೈಸೂರು: ದಸರಾ ಎಂದರೆ ಒಂದು ವಿಶೇಷ ಹಬ್ಬ, ಈ ವಿಶೇಷ ಹಬ್ಬದಲ್ಲಿ ಫಲಪುಷ್ಪ ಪ್ರದರ್ಶನ ಮತ್ತೊಂದು ವಿಶೇಷವಾಗಿದೆ. ಪ್ರತಿವರ್ಷವೂ ವಿಭಿನ್ನ ಮಾದರಿಗಳು ಫಲ ಪುಷ್ಪಗಳಿಂದ ನಿರ್ಮಾಣವಾಗುತ್ತವೆ. ಅಂತೆಯೇ ಈ ಬಾರಿಯೂ ಪುಷ್ಪಗಳಿಂದ ನಿರ್ಮಾಣ ವಾಗಿರುವ ಕಲಾಕೃತಿಗಳು ನೋಡುಗರ ಕಣ್ಮನ ಸೆಳೆಯುತ್ತಿವೆ.

ಅರಮನೆ ನಗರಿ ಮೈಸೂರಿನಲ್ಲಿ ದಸರಾ ಮಹೋತ್ಸವ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕುಪ್ಪಣ್ಣ ಪಾರ್ಕ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ಪುಷ್ಪಲೋಕ ಅರಳಿ ನಿಂತಿದೆ.

ಗ್ಲಾಸ್‌ ಹೌಸ್‌ನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿಗಳು ಹಾಗೂ ಮಂಟಪಗಳನ್ನು ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಗುಲಾಬಿ ಹೂವುಗಳೊಂದಿಗೆ ಸಿದ್ಧಪಡಿಸಿರುವುದು ಸಂಸತ್ ಭವನ ಮತ್ತು ಮೊದಲ ಪ್ರಮುಖ ಸಂಸತ್ ಸದಸ್ಯರುಗಳ ಪುತ್ತಳಿಗಳ ಮಾದರಿ ನೋಡುಗರನ್ನು ಆಕರ್ಷಿಸುತ್ತಿದೆ.

ಗಾಜಿನ ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ವಿದೇಶಿ ಹೂವುಗಳನ್ನು ಬಳಸಿ ಅನುಭವ ಮಂಟಪ, ಸಮಾನತೆಯನ್ನು ಸಾರುವ ಬುದ್ಧನ ಪ್ರಜಾಪ್ರತಿನಿಧಿ ಸಭೆಯ ಸಂದರ್ಭ, ಅನುಭವ ಮಂಟಪ ಮುಂತಾದವುಗಳು ಇತಿಹಾಸವನ್ನು ಮೆಲುಕು ಹಾಕುವಂತೆ ಮಾಡಿದ್ದರೆ, ಸಾವಿತ್ರಿ ಬಾಯಿ ಫುಲೆಯವರ ಪ್ರತಿಕೃತಿ ಯುವ ಸಮೂಹವನ್ನು ಹುರಿದುಂಬಿಸುತ್ತಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳ ಬಗ್ಗೆ ಹೂವಿನಿಂದ ಅಲಂಕರಿಸಿ ಪ್ರಚಾರ ಮಾಡ ಲಾಗುತ್ತಿದೆ. ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರ ಹೂವಿನ ಕಲಾಕೃತಿ ನೋಡುಗರಲ್ಲಿ ಬೆರಗು ಮೂಡಿಸುತ್ತಿದೆ.

ಕೆಂಪು ಮೆಣಸಿನ ಕಾಯಿ ಹಾಗೂ ಅತ್ಯಾಕರ್ಷಕ ಹೂವುಗಳಿಂದ ಪಾರಿವಾಳವನ್ನು ಜೋಡಣೆ ಮಾಡಿರುವುದು ಗಮನ ಸೆಳೆಯುತ್ತಿದೆ. ನವದುರ್ಗೆಯರ ಪ್ರತಿಕೃತಿ, ವರ್ಲ್ಡ್ ಕಪ್, ವೀಣೆ, ಗಾಜಿನ ಮನೆ ಮುಂಭಾಗ ರಕ್ಷಣಾ ವಾಹನವನ್ನು ಹೂವಿನಲ್ಲಿ ನಿರ್ಮಿಸಿರುವುದ ರಿಂದ ಪುಷ್ಪ ಪ್ರಿಯರು ವೀಕ್ಷಿಸಿ ಸೆಲ್ಲಿ ಕ್ಲಿಕ್ಕಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ರಾಜರ ಕೊಡುಗೆಗಳ ಅನಾವರಣ: ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಸ್ಥಾಪನೆಯಾದಂತಹ ಭದ್ರಾವತಿ ಕಾರ್ಖಾನೆ, ಶಿವನಸಮುದ್ರದ ವಿದ್ಯುತ್ ಉತ್ಪಾದನೆ ಘಟಕ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಮಾಹಿತಿ ಪ್ರದರ್ಶನ ನೋಡುಗರನ್ನು ಆಕರ್ಷಿಸುತ್ತಿದೆ.

ಕರ್ನಾಟಕ ಸಂಭ್ರಮ-50: ಮುಖ್ಯ ದ್ವಾರದಲ್ಲಿ ಇತ್ತೀಚೆಗೆ ಆಚರಣೆಗೊಂಡ ಕನ್ನಡಿಗರ ಹೆಮ್ಮೆಯ ಕರ್ನಾಟಕ ಸಂಭ್ರಮ: 50ರ ಕುರಿತು ಹಳದಿ ಮತ್ತು ಕೆಂಪುಬಣ್ಣದ ಗುಲಾಬಿ ಹೂವಿನಿಂದ ನಿರ್ಮಿಸಲಾದ ಕರ್ನಾಟಕ ಭೂಪಟ, ಎಡ-ಬಲದಲ್ಲಿ ಆನೆಯ ಮಾದರಿ ಅಲ್ಲದೆ, ಹೂವಿನಿಂದ ಅರಳಿದ ಟೀಮ್ ಇಂಡಿಯಾ ವಿಶ್ವಕಪ್ ಮಾದರಿಯು ಕ್ರೀಡಾಪ್ರಿಯರನ್ನು ಸೆಳೆಯುತ್ತದೆ.

ಹೂವುಗಳಲ್ಲಿ ಅರಳಿದ ದೇಗುಲಗಳು:
ಹುಲಿಯನ್ನೇರಿದ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಮೆಯ ಪ್ರತಿಕೃತಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಗೋಪುರ ಹಾಗೂ ಶ್ರೀಚಾಮುಂಡೇ ಶ್ವರಿ ದೇವಾಲಯದ ಗೋಪುರವನ್ನು ವಿವಿಧ ಬಣ್ಣದ ಹೂವುಗಳಿಂದ ಸಿದ್ಧಗೊಳಿಸಿರುವುದು ಜನಾಕರ್ಷಣೆಯಾಗಿದೆ.

ಪುಷ್ಪ ಪ್ರದರ್ಶನದಲ್ಲಿ ವಿಶೇಷ ಹೂವುಗಳು:

ಪುಷ್ಪ ಪ್ರದರ್ಶನದಲ್ಲಿ ಆಫ್ರಿಕನ್ ಮಾರಿಗೋಲ್ಡ್, ಹಳದಿ, ಆರ್ಕಿಡ್‌ಗಳು, ಸೆಲೋಸಿಯಾ, ಕಾರ್ನೇಷನ್, ಆಂಥೋರಿಯಂ, ಗರ್ಬೆರಾ, ರೋಸಸ್, ಕಾಸ್ಟೋಸ್, ಬ್ಲೂಡೈಸಿ, ಪಿಂಗ್ ಪಾಂಗ್, ಪೆಟುನಿಯಾ, ಟೊರೆನಿಯಾ, ಡ್ರಾಕೇನಾ, ಟಿಥೋನಿಯಾ, ಜಿನ್ನಿಯಾ ಹೀಗೆ ನಾನಾ ಬಗೆಯ ಹೂವುಗಳನ್ನು ಹೇರಳವಾಗಿ ಬಳಸಲಾಗಿದೆ.

• 60 ಅಡಿ ಸುತ್ತಳತೆ, 18 ಅಡಿ ಎತ್ತರವಿರುವ ಸಂಸತ್ ಭವನ
• 18 ಅಡಿ ಅಗಲ, 18 ಅಡಿ ಎತ್ತರ, 18 ಅಡಿ ಉದ್ದವಿರುವ ಬುದ್ಧ ಪ್ರತಿಕೃತಿ
• ನಾಲ್ಕು ಟನ್ ಹೂವು, 100ಕ್ಕೂ ಹೆಚ್ಚು ಕಾರ್ಮಿಕರ ಬಳಕೆ
• ಊಟಿ, ಚಿಕ್ಕಬಳ್ಳಾಪುರ, ಬೆಂಗಳೂರಿನಿಂದ ಹೂಗಳ ಖರೀದಿ
• ಕೆಂಪು ಮೆಣಸಿನ ಕಾಯಿಯಿಂದ ನಿರ್ಮಿಸಿರುವ ಕೆಂಪು ಪಾರಿವಾಳ
• ಹೂವಿನಿಂದ ಅಲಂಕರಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

11 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

11 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

11 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

12 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

12 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

12 hours ago