ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ.
ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ತಾಲ್ಲೂಕಿನ ಹೊಸ ಬೂದನೂರು-ಹಳೇ ಬೂದನೂರು ಬಳಿ ಕಳಪೆ ಕಾಮಗಾರಿ ಯಿಂದಾಗಿ ರಸ್ತೆ ಕುಸಿದು ಹಾಗೂ ತಡೆಗೋಡೆ ವಾಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಜೀವ ಭಯ ಹುಟ್ಟಿಸುತ್ತಿದೆ. ತಡೆಗೋಡೆ ವಾಲಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ತೇಪೆ ಹಾಕುವ ಕೆಲಸಕ್ಕೆ ಮುಂದಾಗಿದೆ. ೨೦೨೩ರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಗುತ್ತಿಗೆದಾರ ಕಂಪೆನಿ ಡಿಬಿಎಲ್ ೪ ಕಿ. ಮೀ. ಉದ್ದದ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆಸಿದೆ ಎಂದು ಎರಡೂ ಗ್ರಾಮಗಳ ಗ್ರಾಮಸ್ಥರು ದೂರಿದ್ದಾರೆ. ಸ್ಥಳೀಯರು ಅಂದೇ ರಸ್ತೆ ಅಂಡರ್ಪಾಸ್ ಬಳಿ ತಡೆಗೋಡೆಗಳು ವಾಲಿರುವ ಬಗ್ಗೆ ದೂರು ನೀಡಿದ್ದರು.
ನಂತರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಿದ್ದರು. ನಂತರ ಅಪಘಾತ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಅಲೋಕ್ಕುಮಾರ್ ಕೂಡ ವೀಕ್ಷಣೆ ಮಾಡಿದ್ದರು. ಆದರೂ ಯಾವುದೇ ಕ್ರಮ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಳೇ ಬೂದನೂರು ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ ಮೇಲಿನ ರಸ್ತೆ ಅಲ್ಪ ಪ್ರಮಾಣದಲ್ಲಿ ಕುಸಿತವಾಗಿದೆ. ಬಹುಮುಖ್ಯವಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತವಾಗಿದ್ದು, ವಾಹನ ಸವಾರರು ವಾಹನ ಗುಂಡಿಗೆ ಬಿದ್ದಾಗ ಆತಂಕಪಡುತ್ತಿದ್ದಾರೆ. ಹಗಲು- ರಾತ್ರಿ ವೇಳೆ ಜೀವಭಯದಿಂದ ಸಂಚರಿಸುವಂತಾಗಿದೆ. ಮೊದಲೇ ಅಪಘಾತ ಹೆದ್ದಾರಿ ಎಂಬ ಹೆಸರು ಪಡೆದಿರುವ ರಸ್ತೆಯಲ್ಲೀಗ ಮತ್ತೊಂದು ಸಮಸ್ಯೆ ಸವಾರರನ್ನು ಕಾಡುವಂತಾಗಿದೆ. ಕಬ್ಬಿಣದ ರಾಡು, ಕಾಂಕ್ರೀಟ್ ತುಂಬುವ ಕೆಲಸ ವಾರದಿಂದ ತಡೆಗೋಡೆ ವಾಲಿರುವುದನ್ನು ತಡೆಯಲು ಹೆದ್ದಾರಿ ಪ್ರಾಽಕಾರ ಕಬ್ಬಿಣದ ರಾಡು ಅಳವಡಿಸಲು ರಂಧ್ರಗಳನ್ನು ಮಾಡಿ ಜೊತೆಗೆ ಕಾಂಕ್ರಿಟ್ ತುಂಬುವ ಕಾಮಗಾರಿ ನಡೆಯುತ್ತಿದೆ. ಇದು ಕೂಡ ಅವೈಜ್ಞಾನಿಕ ವಾಗಿದ್ದು, ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ದೂರಿರುವ ಸ್ಥಳೀಯರು ಸಮರ್ಪಕ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…