Andolana originals

ಒಂದೂವರೆ ವರ್ಷಕ್ಕೇ ವಾಲಿದ ಬೆಂಗಳೂರು – ಮೈಸೂರು ಹೆದ್ದಾರಿ ತಡೆಗೋಡೆ

ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ.

ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ತಾಲ್ಲೂಕಿನ ಹೊಸ ಬೂದನೂರು-ಹಳೇ ಬೂದನೂರು ಬಳಿ ಕಳಪೆ ಕಾಮಗಾರಿ ಯಿಂದಾಗಿ ರಸ್ತೆ ಕುಸಿದು ಹಾಗೂ ತಡೆಗೋಡೆ ವಾಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಜೀವ ಭಯ ಹುಟ್ಟಿಸುತ್ತಿದೆ. ತಡೆಗೋಡೆ ವಾಲಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ತೇಪೆ ಹಾಕುವ ಕೆಲಸಕ್ಕೆ ಮುಂದಾಗಿದೆ. ೨೦೨೩ರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಗುತ್ತಿಗೆದಾರ ಕಂಪೆನಿ ಡಿಬಿಎಲ್ ೪ ಕಿ. ಮೀ. ಉದ್ದದ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆಸಿದೆ ಎಂದು ಎರಡೂ ಗ್ರಾಮಗಳ ಗ್ರಾಮಸ್ಥರು ದೂರಿದ್ದಾರೆ. ಸ್ಥಳೀಯರು ಅಂದೇ ರಸ್ತೆ ಅಂಡರ್‌ಪಾಸ್ ಬಳಿ ತಡೆಗೋಡೆಗಳು ವಾಲಿರುವ ಬಗ್ಗೆ ದೂರು ನೀಡಿದ್ದರು.

ನಂತರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಿದ್ದರು. ನಂತರ ಅಪಘಾತ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಅಲೋಕ್‌ಕುಮಾರ್ ಕೂಡ ವೀಕ್ಷಣೆ ಮಾಡಿದ್ದರು. ಆದರೂ ಯಾವುದೇ ಕ್ರಮ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಳೇ ಬೂದನೂರು ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ ಮೇಲಿನ ರಸ್ತೆ ಅಲ್ಪ ಪ್ರಮಾಣದಲ್ಲಿ ಕುಸಿತವಾಗಿದೆ. ಬಹುಮುಖ್ಯವಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತವಾಗಿದ್ದು, ವಾಹನ ಸವಾರರು ವಾಹನ ಗುಂಡಿಗೆ ಬಿದ್ದಾಗ ಆತಂಕಪಡುತ್ತಿದ್ದಾರೆ. ಹಗಲು- ರಾತ್ರಿ ವೇಳೆ ಜೀವಭಯದಿಂದ ಸಂಚರಿಸುವಂತಾಗಿದೆ. ಮೊದಲೇ ಅಪಘಾತ ಹೆದ್ದಾರಿ ಎಂಬ ಹೆಸರು ಪಡೆದಿರುವ ರಸ್ತೆಯಲ್ಲೀಗ ಮತ್ತೊಂದು ಸಮಸ್ಯೆ ಸವಾರರನ್ನು ಕಾಡುವಂತಾಗಿದೆ. ಕಬ್ಬಿಣದ ರಾಡು, ಕಾಂಕ್ರೀಟ್ ತುಂಬುವ ಕೆಲಸ ವಾರದಿಂದ ತಡೆಗೋಡೆ ವಾಲಿರುವುದನ್ನು ತಡೆಯಲು ಹೆದ್ದಾರಿ ಪ್ರಾಽಕಾರ ಕಬ್ಬಿಣದ ರಾಡು ಅಳವಡಿಸಲು ರಂಧ್ರಗಳನ್ನು ಮಾಡಿ ಜೊತೆಗೆ ಕಾಂಕ್ರಿಟ್ ತುಂಬುವ ಕಾಮಗಾರಿ ನಡೆಯುತ್ತಿದೆ. ಇದು ಕೂಡ ಅವೈಜ್ಞಾನಿಕ ವಾಗಿದ್ದು, ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ದೂರಿರುವ ಸ್ಥಳೀಯರು ಸಮರ್ಪಕ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ

 

andolana

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

13 hours ago