Andolana originals

ಒಂದೂವರೆ ವರ್ಷಕ್ಕೇ ವಾಲಿದ ಬೆಂಗಳೂರು – ಮೈಸೂರು ಹೆದ್ದಾರಿ ತಡೆಗೋಡೆ

ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ.

ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ತಾಲ್ಲೂಕಿನ ಹೊಸ ಬೂದನೂರು-ಹಳೇ ಬೂದನೂರು ಬಳಿ ಕಳಪೆ ಕಾಮಗಾರಿ ಯಿಂದಾಗಿ ರಸ್ತೆ ಕುಸಿದು ಹಾಗೂ ತಡೆಗೋಡೆ ವಾಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಜೀವ ಭಯ ಹುಟ್ಟಿಸುತ್ತಿದೆ. ತಡೆಗೋಡೆ ವಾಲಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ತೇಪೆ ಹಾಕುವ ಕೆಲಸಕ್ಕೆ ಮುಂದಾಗಿದೆ. ೨೦೨೩ರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಗುತ್ತಿಗೆದಾರ ಕಂಪೆನಿ ಡಿಬಿಎಲ್ ೪ ಕಿ. ಮೀ. ಉದ್ದದ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆಸಿದೆ ಎಂದು ಎರಡೂ ಗ್ರಾಮಗಳ ಗ್ರಾಮಸ್ಥರು ದೂರಿದ್ದಾರೆ. ಸ್ಥಳೀಯರು ಅಂದೇ ರಸ್ತೆ ಅಂಡರ್‌ಪಾಸ್ ಬಳಿ ತಡೆಗೋಡೆಗಳು ವಾಲಿರುವ ಬಗ್ಗೆ ದೂರು ನೀಡಿದ್ದರು.

ನಂತರ ಮಾರ್ಚ್ ೧೨ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಿದ್ದರು. ನಂತರ ಅಪಘಾತ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಅಲೋಕ್‌ಕುಮಾರ್ ಕೂಡ ವೀಕ್ಷಣೆ ಮಾಡಿದ್ದರು. ಆದರೂ ಯಾವುದೇ ಕ್ರಮ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಳೇ ಬೂದನೂರು ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್ ಮೇಲಿನ ರಸ್ತೆ ಅಲ್ಪ ಪ್ರಮಾಣದಲ್ಲಿ ಕುಸಿತವಾಗಿದೆ. ಬಹುಮುಖ್ಯವಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತವಾಗಿದ್ದು, ವಾಹನ ಸವಾರರು ವಾಹನ ಗುಂಡಿಗೆ ಬಿದ್ದಾಗ ಆತಂಕಪಡುತ್ತಿದ್ದಾರೆ. ಹಗಲು- ರಾತ್ರಿ ವೇಳೆ ಜೀವಭಯದಿಂದ ಸಂಚರಿಸುವಂತಾಗಿದೆ. ಮೊದಲೇ ಅಪಘಾತ ಹೆದ್ದಾರಿ ಎಂಬ ಹೆಸರು ಪಡೆದಿರುವ ರಸ್ತೆಯಲ್ಲೀಗ ಮತ್ತೊಂದು ಸಮಸ್ಯೆ ಸವಾರರನ್ನು ಕಾಡುವಂತಾಗಿದೆ. ಕಬ್ಬಿಣದ ರಾಡು, ಕಾಂಕ್ರೀಟ್ ತುಂಬುವ ಕೆಲಸ ವಾರದಿಂದ ತಡೆಗೋಡೆ ವಾಲಿರುವುದನ್ನು ತಡೆಯಲು ಹೆದ್ದಾರಿ ಪ್ರಾಽಕಾರ ಕಬ್ಬಿಣದ ರಾಡು ಅಳವಡಿಸಲು ರಂಧ್ರಗಳನ್ನು ಮಾಡಿ ಜೊತೆಗೆ ಕಾಂಕ್ರಿಟ್ ತುಂಬುವ ಕಾಮಗಾರಿ ನಡೆಯುತ್ತಿದೆ. ಇದು ಕೂಡ ಅವೈಜ್ಞಾನಿಕ ವಾಗಿದ್ದು, ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ದೂರಿರುವ ಸ್ಥಳೀಯರು ಸಮರ್ಪಕ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ

 

andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

3 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

3 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

3 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago