ಮೈಸೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಡೆಂಗ್ಯೂ ಜ್ವರದ ಭೀತಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಾನು ಹಿರಿಯ ನಾಗರಿಕನಾಗಿದ್ದು, ಜೆ.ಪಿ.ನಗರದ ಸಾಯಿಬಾಬ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ವಾಸಿಸುತ್ತಿದ್ದೇನೆ. ಇತ್ತೀಚೆಗೆ ನಮ್ಮ ಬಡಾವಣೆಯಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ನಮ್ಮ ಬಡಾವಣೆಯ ರಸ್ತೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆಯ ವೇಳೆ ಮಹಿಳೆಯರು, ಮಕ್ಕಳು ಹಾಗೂ ನಮ್ಮಂತಹ ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಿದ್ದು, ಈ ವೇಳೆ ಸೊಳ್ಳೆಗಳ ಕಡಿತಕ್ಕೆ ಒಳಗಾಗುತ್ತಿದ್ದೇವೆ. ಈಗಾಗಲೇ ನಗರದಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವುದರಿಂದ ಇಲ್ಲಿನ ನಿವಾಸಿಗಳಿಗೂ ಆತಂಕ ಶುರುವಾಗಿದೆ. ಆದ್ದರಿಂದ ಜನರ ಸುರಕ್ಷತೆಯ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯವರು ನಮ್ಮ ರಸ್ತೆಗೂ ಫಾಗಿಂಗ್ ಮಾಡಬೇಕಾಗಿದೆ.
-ಕೆ.ಎನ್.ಅಶ್ವತ್ಥನಾರಾಯಣ, ಜೆ.ಪಿ.ನಗರ, ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…