Andolana originals

ಬಟಿಗನಹಳ್ಳಿ ಗ್ರಾಮದಲ್ಲಿ ಮೇಳೈಸಿದ ಜಾನಪದ ವೈಭವ

ಭೇರ್ಯ ಮಹೇಶ್

ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ ನಮ್ಮ ಜಾನಪದ ಸೊಗಡನ್ನು ಅನಾವರಣಗೊಳಿಸಿತು.

ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಶ್ರೀ ದೊಡ್ಡಮ್ಮ, ಕರಿಯಮ್ಮ ಸಿಡಿ ಮತ್ತು ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವರ ಓಕುಳಿ ಹಬ್ಬ ನಡೆದ ಮಾರನೇ ದಿನ ಮಂಗಳವಾರ ವಿವಿಧ ಜನಪದ ಗ್ರಾಮೀಣ ಕಲೆಗಳನ್ನು ವಿಭಿನ್ನವಾಗಿ ಪ್ರದರ್ಶಿಸಲಾಯಿತು.

ಗ್ರಾಮೀಣ ಕಲೆಗಳಾದ ಹುಲಿ ವೇಷ, ಪಾಳೆಗಾರಿಕೆ, ಕೀಲು ಕುದುರೆ, ಮಹಿಷಿ , ಮರಿ ಹುಲಿಗಳು, ಯಮಕಿಂಕರರ ವೇಷ ಸೇರಿದಂತೆ ಅನೇಕ ವಿಭಿನ್ನ ರೀತಿಯ ಜನಪದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕಲಾ ಪ್ರಕಾರಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಜನರಿಗೆ ಉತ್ತಮ ಸಂದೇಶ ನೀಡುವಲ್ಲಿ ಪ್ರಮಖ ಪಾತ್ರ ವಹಿಸಿವೆ.

ನಾನು ನನ್ನ ಹತ್ತನೇ ವಯಸ್ಸಿನಿಂದ ಗ್ರಾಮದ ಹಬ್ಬಗಳಲ್ಲಿ ಸಿಂಡು ಹುಲಿ ವೇಷ ಹಾಕುತ್ತಿದ್ದೇನೆ. ನಾನು ವೇಷ ಹಾಕಿ ಕುಣಿತ ಹಾಕುವಾಗ ಜನರು ಪ್ರತಿ ಬಾರಿ ನನಗೆ ಬೆಂಬಲ ಸೂಚಿಸಿ ಸೂರ್ತಿ ತುಂಬುತ್ತಾರೆ. ನನಗೆ ೫೭ ವರ್ಷಗಳು ತುಂಬಿದೆ. ಆದರೂ ಇನ್ನೂ ಕುಣಿತ ಹಾಕಬೇಕು ಎನ್ನುವ ಆಸೆ ಹೊಂದಿದ್ದೇನೆ ಎಂದು ಹುಲಿ ವೇಷ ಪಾತ್ರಧಾರಿ ಸತ್ಯನಾರಾಯಣ ಹೇಳಿದರು.

” ನಮ್ಮ ಪೂರ್ವಿಕರ ಕಾಲದಿಂದ ಭೇರ್ಯ ಗ್ರಾಮದ ದೊಡಮ್ಮ ಕರಿಯಮ್ಮ ಜಾತ್ರೆ ಪ್ರಯುಕ್ತ ನಡೆಯುವ ಶ್ರೀ ಬಸವೇಶ್ವರ ದೇವರ ಓಕುಳಿ ಹಬ್ಬವನ್ನು ಎಲ್ಲಾ ಜಾತಿ ಜನಾಂಗದವರೊಂದಿಗೆ ಬಟಿಗನಹಳ್ಳಿ ಗ್ರಾಮದಲ್ಲಿ ಸಾಮರಸ್ಯದಿಂದ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಗ್ರಾಮದ ಯುವಕರು ವಿವಿಧ ಕಲೆಗಳನ್ನು ಪ್ರದರ್ಶಿಸಿ ಹಳ್ಳಿಯ ಜನಪದ ಸೊಗಡನ್ನು ಜೀವಂತವಾಗಿಸಿದ್ದಾರೆ.”

-ಬಿ.ಹೆಚ್.ಮಹದೇವ್, ಗ್ರಾ.ಪಂ. ಮಾಜಿ ಅಧ್ಯಕ್ಷ.

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

8 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

11 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

14 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

17 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

17 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

17 hours ago