ಓದುಗರ ಪತ್ರ
ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಪಡೆದಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಟ್ರಾಮಾ ಕೇರ್, ಪಿಕೆಟಿಬಿ ಆಸ್ಪತ್ರೆಗಳಲ್ಲಿ ರೋಗಿಗಳ ಹಸಿವನ್ನು ನೀಗಿಸಬೇಕಾದ ಅನ್ನ ಕಸದ ತೊಟ್ಟಿ ಪಾಲಾಗುತ್ತಿರುವುದು ವಿಷಾದಕರ ಸಂಗತಿ.
ಆಸ್ಪತ್ರೆಯ ಫುಡ್ ಮೆನುವಿನಲ್ಲಿ ಮಧ್ಯಾಹ್ನ ಒಂದು ಕಪ್ ಮೊಸರು, ರಾತ್ರಿ ಮಜ್ಜಿಗೆ ಕೊಡಬೇಕು ಎಂದಿದ್ದರೂ ಒಂದೇ ಒಂದು ದಿನವೂ ಮೊಸರು ಮತ್ತು ಮಜ್ಜಿಗೆಯನ್ನು ನೀಡಿಲ್ಲ ಎಂಬುದು ಒಳ ರೋಗಿಗಳ ಆಪಾದನೆಯಾಗಿದೆ.
ಪಿಕೆಟಿಬಿ ಮತ್ತು ಚೆಲುವಾಂಬ ಆಸ್ಪತ್ರೆಗಳಲ್ಲಿ ಮೊಟ್ಟೆ ನೀಡಲಾಗುತ್ತಿದೆ, ಆದರೆ ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ದಿನಗಳಲ್ಲಿ ವಿಶೇಷ ಅಡುಗೆ ಮಾಡಲಾಗುತ್ತಿತ್ತು, ಈಗ ಅದ್ಯಾವುದೂ ಇಲ್ಲದೆ ಪ್ರತಿ ದಿನವೂ ಒಂದೇ ತರಹದ ತರಕಾರಿ ಸಾರು ನೀಡುತ್ತಿದ್ದು, ಭಾನುವಾರ ಬೆಳಿಗ್ಗೆ ತಿಂಡಿ ಬದಲು ಮೂರು ಪೀಸ್ ಬ್ರೆಡ್ – ಕಾಫಿ ನೀಡಲಾಗುತ್ತಿದೆ. ಒಳರೋಗಿಗಳಿಗ ನಿಗದಿತ ಸಮಯದಲ್ಲಿ ಊಟ ನೀಡದೆ, ರಾತ್ರಿ ಊಟವನ್ನು ಮಧ್ಯಾಹ್ನ ೩ ರಿಂದ ೫ ಗಂಟೆಯೊಳಗೆ ನೀಡುತ್ತಿರುವುದರಿಂದ ಅನ್ನವನ್ನು ತಿನ್ನಲಾಗದೆ ಬಹುತೇಕ ರೋಗಿಗಳು ಊಟವನ್ನು ಕಸದ ತೊಟ್ಟಿಗೆ ಬಿಸಾಡುತ್ತಿದ್ದಾರೆ. ಜಯದೇವ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿರುವ ಅನಾಥ ಒಳರೋಗಿಗಳಿಗೆ ಊಟವನ್ನು ಪಾರ್ಸೆಲ್ ಕವರ್ನಲ್ಲಿ ಪ್ಯಾಕ್ ಮಾಡಿ ನೀಡುತ್ತಾರೆ. ಆದರೆ ಅದೂ ಕಸದ ತೊಟ್ಟಿಗೆ ಸೇರುತ್ತಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರೋಗಿಗಳಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಊಟ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…