Andolana originals

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಕಸದ ತೊಟ್ಟಿಯಲ್ಲಿ ಅನ್ನದ ರಾಶಿ

ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಪಡೆದಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಟ್ರಾಮಾ ಕೇರ್, ಪಿಕೆಟಿಬಿ ಆಸ್ಪತ್ರೆಗಳಲ್ಲಿ ರೋಗಿಗಳ ಹಸಿವನ್ನು ನೀಗಿಸಬೇಕಾದ ಅನ್ನ ಕಸದ ತೊಟ್ಟಿ ಪಾಲಾಗುತ್ತಿರುವುದು ವಿಷಾದಕರ ಸಂಗತಿ.

ಆಸ್ಪತ್ರೆಯ ಫುಡ್ ಮೆನುವಿನಲ್ಲಿ ಮಧ್ಯಾಹ್ನ ಒಂದು ಕಪ್ ಮೊಸರು, ರಾತ್ರಿ ಮಜ್ಜಿಗೆ ಕೊಡಬೇಕು ಎಂದಿದ್ದರೂ ಒಂದೇ ಒಂದು ದಿನವೂ ಮೊಸರು ಮತ್ತು ಮಜ್ಜಿಗೆಯನ್ನು ನೀಡಿಲ್ಲ ಎಂಬುದು ಒಳ ರೋಗಿಗಳ ಆಪಾದನೆಯಾಗಿದೆ.

ಪಿಕೆಟಿಬಿ ಮತ್ತು ಚೆಲುವಾಂಬ ಆಸ್ಪತ್ರೆಗಳಲ್ಲಿ ಮೊಟ್ಟೆ ನೀಡಲಾಗುತ್ತಿದೆ, ಆದರೆ ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ದಿನಗಳಲ್ಲಿ ವಿಶೇಷ ಅಡುಗೆ ಮಾಡಲಾಗುತ್ತಿತ್ತು, ಈಗ ಅದ್ಯಾವುದೂ ಇಲ್ಲದೆ ಪ್ರತಿ ದಿನವೂ ಒಂದೇ ತರಹದ ತರಕಾರಿ ಸಾರು ನೀಡುತ್ತಿದ್ದು, ಭಾನುವಾರ ಬೆಳಿಗ್ಗೆ ತಿಂಡಿ ಬದಲು ಮೂರು ಪೀಸ್ ಬ್ರೆಡ್ – ಕಾಫಿ ನೀಡಲಾಗುತ್ತಿದೆ. ಒಳರೋಗಿಗಳಿಗ ನಿಗದಿತ ಸಮಯದಲ್ಲಿ ಊಟ ನೀಡದೆ, ರಾತ್ರಿ ಊಟವನ್ನು ಮಧ್ಯಾಹ್ನ ೩ ರಿಂದ ೫ ಗಂಟೆಯೊಳಗೆ ನೀಡುತ್ತಿರುವುದರಿಂದ ಅನ್ನವನ್ನು ತಿನ್ನಲಾಗದೆ ಬಹುತೇಕ ರೋಗಿಗಳು ಊಟವನ್ನು ಕಸದ ತೊಟ್ಟಿಗೆ ಬಿಸಾಡುತ್ತಿದ್ದಾರೆ. ಜಯದೇವ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿರುವ ಅನಾಥ ಒಳರೋಗಿಗಳಿಗೆ ಊಟವನ್ನು ಪಾರ್ಸೆಲ್ ಕವರ್‌ನಲ್ಲಿ ಪ್ಯಾಕ್ ಮಾಡಿ ನೀಡುತ್ತಾರೆ. ಆದರೆ ಅದೂ ಕಸದ ತೊಟ್ಟಿಗೆ ಸೇರುತ್ತಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರೋಗಿಗಳಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಊಟ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.

ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

46 mins ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

3 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

3 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

4 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

4 hours ago