Andolana originals

ಅತ್ಯಾಡಿ ಗ್ರಾಮಸ್ಥರಿಗೆ ಕಾಲು ಸೇತುವೆ ಹಸ್ತಾಂತರ

ಆಂದೋಲನ ವರದಿಗೆ ಸ್ಪಂದಿಸಿದ ಪ್ರಣವ್ ಫೌಂಡೇಷನ್

ಮಡಿಕೇರಿ: ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ನಿರ್ಮಿಸಲಾಗಿರುವ ಕಾಲು ಸೇತುವೆಯನ್ನು ಆ.25ರಂದು ಗ್ರಾಮಸ್ಥರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಣವ್ ಫೌಂಡೇಶನ್ ಮಾಧ್ಯಮ ಸಲಹೆಗಾರ ಯು.ಎಚ್.ಕಾರ್ತಿಕ್ ಭಟ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.10ರಂದು ಕಾಮಗಾರಿ ಕಾಲುಸೇತುವೆಯ ಆರಂಭವಾಯಿತು. ಆ.22ಕ್ಕೆ ಸೇತುವೆ ನಿರ್ಮಾಣ ಹಾಗೂ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. 2.50 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿದೆ. ಸೇತುವೆಯನ್ನು ಉಕ್ಕಿನಿಂದ ಮಾಡಲಾಗಿದ್ದು, ಸುಮಾರು 24 ಮೀಟರ್ ಉದ್ದ, 0.75 ಮೀಟರ್ ಅಗಲವಿದೆ. ಒಂದೇ ಬಾರಿಗೆ 10 ಜನರು ನಿಲ್ಲಬಹುದಾಗಿದೆ. ಅಲ್ಲದೇ, ಈ ಸೇತುವೆಯ ಸಂಪೂರ್ಣ ನಿರ್ವಹಣೆಯನ್ನು ಪ್ರಣವ್ ಫೌಂಡೇಶನ್ ವಹಿಸಿಕೊಂಡಿದೆ ಎಂದು ತಿಳಿಸಿದರು.

ಕಾಲು ಸೇತುವೆಗೆ ಪ್ರಣವ ಸೇತು ಎಂದು ನಾಮಕರಣ ಮಾಡಲಾಗಿದೆ. ಸೇತುವೆಯನ್ನು ಗ್ರಾಮಸ್ಥರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಆ.25ರ ಭಾನುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಅತ್ಯಾಡಿ ಗ್ರಾಮಸ್ಥರು ಹಾಗೂ ಪ್ರಣವ್ ಫೌಂಡೇಶನ್‌ನ ಅಧ್ಯಕ್ಷ ರಾಕೇಶ್ ರೈ, ಸ್ಥಾಪಕ ಕಾರ್ಯದರ್ಶಿ ನಾಗರಾಜ ಹೆಬ್ಬಾಳ್, ಟ್ರಸ್ಟಿಗಳಾದ ಕೆ.ಪಿ.ರಕ್ಷಿಣ್, ಮಂಜುನಾಥ ಭಟ್, ಮಹೇಶ್ ಮೇನಾಲ, ನೇತ್ರ, ಯೋಜನೆಯ ಸಂಚಾಲಕರಾದ ದೇವಿಪ್ರಸಾದ್, ಕಿರಣ್ ಅಟ್ಟೂರು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಪ್ರಣವ್ ಫೌಂಡೇಶನ್ ಟ್ರಸ್ಟಿಗಳಾದ ಯು.ಎಚ್.ಮಂಜುನಾಥ್ ಭಟ್, ನೇತ್ರ, ಮಹೇಶ್ ಕುಮಾರ್, ಯೋಜನೆಯ ಸಂಚಾಲಕರಾದ ದೇವಿಪ್ರಸಾದ್, ಕಿರಣ್ ಅಟ್ಟೂರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಕಟಿಸಿದ್ದ ಆಂದೋಲನ..!

ಚೆಂಬು ಗ್ರಾ.ಪಂ. ವ್ಯಾಪ್ತಿಯ ಅತ್ಯಾಡಿ ಗ್ರಾಮದಲ್ಲಿ ಸೇತುವೆಯಿಲ್ಲದೆ ಅಲ್ಲಿನ ಜನರು ಸಮಸ್ಯೆ ಎದುರಿಸುತ್ತಿ ರುವ ಕುರಿತು ಆಂದೋಲನ ದಿನಪತ್ರಿಕೆಯು ವರದಿ ಪ್ರಕಟಿಸಿತ್ತು. ಸ್ಥಳಕ್ಕೆ ತೆರಳಿ ಅಲ್ಲಿನ ಚಿತ್ರಣ, ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಜೂ.18ರಂದು ‘ಮಳೆಗಾಲದಲ್ಲಿ ದ್ವೀಪವಾಗುವ ಗ್ರಾಮ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ಇದೀಗ ‘ಆಂದೋಲನ’ ವರದಿಗೆ ಫಲಶ್ರುತಿ ದೊರೆತಿದ್ದು, ಅಲ್ಲಿನ ಗ್ರಾಮಸ್ಥರ ಸಮಸ್ಯೆಯು ಬಗೆಹರಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

41 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

51 mins ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

56 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

1 hour ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

6 hours ago