Andolana originals

ಜಂಬೂ ಸವಾರಿಯಲ್ಲಿ ಸೌಹಾರ್ದತೆ ಮೆರೆದ ನಾಲ್ವಡಿ

ನಾಲ್ವಡಿಯವರು ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೆ ಕೂರಿಸಿಕೊಂಡ ಪ್ರಸಂಗ ಇಲ್ಲಿದೆ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಆಳ್ವಿಕೆಯಲ್ಲಿ ಸರ್ವ ಸಮುದಾಯಗಳ ನಡುವೆ ಸೌಹಾದತೆಗೆ ಒತ್ತು ನೀಡಿದ್ದರು ಎಂಬುದಾಗಿ ಪ್ರೊ.ಎಸ್.ಚಂದ್ರಶೇಖರ್ ಅವರು ರಚಿಸಿರುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಆಧುನಿಕ ಮೈಸೂರು’ ಕೃತಿಯಲ್ಲಿ ದಾಖಲಾಗಿದೆ. ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ, ಆ ಪುಸ್ತಕದ ಆಯ್ದ ಭಾಗವನ್ನು ಇಲ್ಲಿ ಪ್ರಕಟಿಸಲಾಗಿದೆ.
ಅಕ್ಟೋಬರ್ ೨೭, ೧೯೨೭ರಂದು ನಡೆದ, ದಸರ ಮಹೋತ್ಸವದ ಸಂದರ್ಭದಲ್ಲಿ ಮಹಾರಾಜರು, ಮಿರ್ಜಾ ಅವರನ್ನು ಆನೆ ಅಂಬಾರಿಯ ಮೇಲೆ ಕುಳ್ಳಿರಿಸಿಕೊಂಡು ಮೈಸೂರಿನ ರಾಜಮಾರ್ಗಗಳಲ್ಲಿ ಮೆರವಣಿಗೆ ಹೊರಟಿದ್ದು ಸಂಪ್ರದಾಯಕ್ಕೆ, ಧರ್ಮಕ್ಕೆ ಆದ ಅಪಚಾರವೆಂದು ಬಗೆಯಲಾಯಿತು. ಅಲ್ಲಿಯವರೆಗೆ ಯಾರಿಗೂ ಸಿಗದ ಗೌರವ ಒಬ್ಬ ಮುಸಲ್ಮಾನನಿಗೆ ದೊರೆತದನ್ನು ಕೆಲವರು ಸಹಿಸಲಾಗದೆ ಅಂಬಾರಿಯ ಕಡೆಗೆ ಚಪ್ಪಲಿಗಳನ್ನೂ ಎಸೆದು, ಅಂಬಾರಿ ಹೊತ್ತಿದ್ದ ಆನೆಯನ್ನು ಬೆದರಿಸುವಂಥ ಕೃತ್ಯವೂ ನಡೆದಿತ್ತು. ಮತೀಯ ಕಿಡಿ ಹಚ್ಚಲು ಇದೂ ಒಂದು ಕಾರಣವಾಯಿತು. ಆದರೆ ಬೆಂಗಳೂರು ಗಲಭೆಗಳು ಆದ ನಂತರ ಅಂದರೆ ಮರುವರ್ಷವೇ ನಾಲ್ವಡಿಯವರು ಮತ್ತೊಮ್ಮೆ ಮಿರ್ಜಾರನ್ನು ಅಂಬಾರಿ ಮೇಲೆ ಕೂರಿಸಿ ತಮ್ಮ ವಿಶ್ವಾಸವನ್ನು ಮೆರೆದರು. ಮಹಾರಾಜರು ಧೃತಿಗೆಡಲಿಲ್ಲ. ಮಿರ್ಜಾ ಅವರಿಗೂ ಧೈರ್ಯ ತುಂಬಿ ತಮ್ಮ ಬೆಂಬಲ ವ್ಯಕ್ತಪಡಿಸಿ, ಒಂದು ಪತ್ರವನ್ನೂ ಬರೆದರು.

ನಿಮಗೆ ಕೆಲವು ವಾಕ್ಯಗಳ ಪತ್ರ ಬರೆಯದೆ ನಾನು ಸುಮ್ಮನಿರಲಾರೆ. ಕಳೆದ ಕೆಲವು ದಿನಗಳಿಂದ ನಿಮ್ಮ ಸುತ್ತ ನಡೆದಿರುವ ನಿಮಗೆ ಉಂಟಾಗಿರುವ ತೊಂದರೆಗಳು ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗದಿರಲೆಂದು ಪ್ರಾರ್ಥಿಸುತ್ತೇನೆ. ಇದು ದಿವಾನರ ಬಗ್ಗೆ ಇರಿಸಿಕೊಂಡಿದ್ದ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಯಾರು ನಿಸ್ಪೃಹರಾಗಿ, ರಾಜ್ಯಕ್ಕೆ ಮತ್ತು ತಮಗೆ ವಿಧೇಯರಾಗಿ ಸಲ್ಲಿಸುವರೋ ಅವರಿಗೆ ಮಹಾರಾಜರ ಬೆಂಬಲ, ನಿಷ್ಠೆ ಇದೇ ಪ್ರಮಾಣದಲ್ಲಿ ದೊರೆತವು.

ಮತೀಯ ಸೌಹಾರ್ದಕ್ಕೆ ಮೈಸೂರು ಮೊದಲಿನಿಂದಲೂ ಹೆಸರುವಾಸಿ. ನಾಲ್ವಡಿಯವರು ಮತ್ತು ಅವರ ಎಲ್ಲ ದಿವಾನರೂ ಆ ಬಗ್ಗೆ ಗರ್ವಪಡುತ್ತಿದ್ದರು. ಆ ಬಗ್ಗೆ ಮಿರ್ಜಾ ಅವರು ತಮ್ಮ ‘ಸಾರ್ವಜನಿಕ ಜೀವನ’ ಎಂಬ ಆತ್ಮಚರಿತ್ರೆಯಲ್ಲಿ ವಿಪುಲವಾಗಿ ಬರೆದಿರುವರು.‘ ನಾಲ್ವಡಿಯವರು ಎಲ್ಲ ಧರ್ಮೀಯರ ಸಮುದಾಯದವರ ಧಾರ್ಮಿಕ ಸಂಪ್ರದಾಯಗಳ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದರು. ಮತ್ತು ಅರ್ಥಪೂರ್ಣವಾದ ಸಂಪ್ರದಾಯಗಳನ್ನು ಅನುಸರಿಸುತ್ತಿದ್ದರು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago