Andolana originals

ಮರಗಳ ಕಟಾವಿಗೆ ಹರಾಜು ಕರೆದ ಅರಣ್ಯ ಇಲಾಖೆ!

ಮಹೇಂದ್ರ ಹಸಗೂಲಿ

ವಸತಿನಿಲಯ ಆವರಣದ ಮರಗಳನ್ನು ಕಡಿಯುವುದಕ್ಕೆ ಪರಿಸರ ಪ್ರೇಮಿಗಳ ವಿರೋಧ 

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ವೀರನಪುರ ಕ್ರಾಸ್ ಬಳಿ ಇರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ನಿಲಯ ಆವರಣದಲ್ಲಿರುವ ೯ ಆಲದ ಮರಗಳ ಕಟಾವಿಗೆ ಅರಣ್ಯ ಇಲಾಖೆ ಬಹಿರಂಗ ಹರಾಜು ಕರೆದಿದ್ದು, ಇದಕ್ಕೆ ಸಾರ್ವಜನಿಕರು, ಪರಿಸರ ಪ್ರೇಮಿಗಳು, ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸತಿ ಶಾಲೆಯ ಮುಂದೆ ವಿಶಾಲವಾದ ಖಾಲಿ ಜಾಗವಿದ್ದು, ಅಲ್ಲಿ ಕಟ್ಟಡ ನಿರ್ಮಿಸದೆ ಮರಗಳನ್ನು ಕಟಾವು ಮಾಡಿ ಆ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಪರಿಸರ ಪ್ರೇಮಿಗಳಿಂದ ವಿರೋಧ ವ್ಯಕ್ತ ಸವಾಗಿದೆ. ಅರಣ್ಯ ಇಲಾಖೆ ಒಂದುಕಡೆ ಮರಗಳನ್ನು ಬೆಳೆಸಿ, ಪರಿಸರ ಉಳಿಸಿ ಎಂದು ಸಂದೇಶ ಸಾರಿದರೆ, ಇನ್ನೊಂದು ಕಡೆ ತಾನೇ ಮರಗಳ ಕಟಾವಿಗೆ ಹರಾಜಿಗೆ ಮುಂದಾಗಿರುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮರಗಳನ್ನು ಕಟಾವು ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮರಗಳ ಕಟಾವು ಮಾಡಬಾರದು ಎಂದು ಕರ್ನಾಟಕ ಕಾವಲು ಪಡೆ ಅಧ್ಯಕ್ಷ ಅಬ್ದುಲ್ ಮಲಿಕ್, ಪದಾಧಿಕಾರಿಗಳಾದ ರಾಮೇಗೌಡ, ಸಾದಿಕ್ ಪಾಷ, ಅಬ್ದುಲ್ ಜಬ್ಬಾರ್, ಮಿಮಿಕ್ರಿ ರಾಜು, ಅಯೂಬ್ ಖಾನ್ ಮತ್ತಿತರರು ವಸತಿ ಶಾಲೆಯ ವಾರ್ಡನ್‌ರವರಿಗೆ ಮನವಿ ಸಲ್ಲಿಸಿದರು.

” ಕೋವಿಡ್ ಸಮಯದಲ್ಲಿ ಅನೇಕರು ಶುದ್ಧ ಗಾಳಿ ಸಿಗದೆ ಮೃತಪಟ್ಟರು. ಇದೇ ಅಬ್ದುಲ್ ಕಲಾಂ ವಸತಿ ನಿಲಯದಲ್ಲಿ ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಶಿಕ್ಷಣ ಸಂಸ್ಥೆಗಳು, ಅರಣ್ಯ ಇಲಾಖೆ ಮರ ಉಳಿಸುವ ಸಂದೇಶ ಸಾರಬೇಕೇ ಹೊರತು, ಮರಗಳ ನಾಶಕ್ಕೆ ಕೈ ಹಾಕಬಾರದು. ಮರ ಕಡಿದು ಕಟ್ಟಡ ನಿರ್ಮಿಸುವುದು ಸರಿಯಲ್ಲ.”

-ಮಣಿ ಮಡಹಳ್ಳಿ, ಪರಿಸರ ಪ್ರೇಮಿ.

” ಉತ್ತಮ ವಾತಾವರಣವಿರುವ ವಸತಿ ಶಾಲೆಯಲ್ಲಿ ಮರಗಳನ್ನು ಕಡಿದು ಕಾಂಕ್ರೀಟ್‌ಮಯ ಮಾಡಲು ಮುಂದಾಗಿರುವುದು ಸರಿಯಲ್ಲ. ಮರಗಳನ್ನು ಕಡಿದು ಕಟ್ಟಡ ನಿರ್ಮಿಸಬಾರದು. ಮರಗಳ ಕಟಾವಿಗೆ ಮುಂದಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.”

-ಅಬ್ದುಲ್ ಮಲಿಕ್, ಕರ್ನಾಟಕ ಕಾವಲುಪಡೆ ತಾಲ್ಲೂಕು ಅಧ್ಯಕ್ಷ

” ಡಾ.ಅಬ್ದುಲ್ ಕಲಾಂ ವಸತಿ ಶಾಲೆಯ ಆವರಣದಲ್ಲಿದ್ದ ೯ ಆಲದ ಮರಗಳ ಕಟಾವಿಗೆ ೫-೬ ತಿಂಗಳ ಹಿಂದೆಯೇ ನಮಗೆ ಪತ್ರ ಬರೆಯಲಾಗಿತ್ತು. ಮರಗಳನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಅವರಿಗೆ ಕಾಲಾವಕಾಶ ನೀಡಲಾಗಿತ್ತು. ಇಂಜಿನಿಯರ್ ಬೇರೆ ಜಾಗದಲ್ಲಿ ಸ್ಥಳಾವಕಾಶದ ಕೊರತೆ ಇದ್ದು, ಇಲ್ಲಿಯೇ ಕಟ್ಟಡ ನಿರ್ಮಿಸಬೇಕು ಎಂಬ ಉತ್ತರ ನೀಡಿದ್ದರಿಂದ ಮರಗಳ ಕಟಾವಿಗೆ ಹರಾಜು ಕರೆಯಲಾಗಿದೆ.”

-ಶಿವಕುಮಾರ್, ವಲಯ ಸಂರಕ್ಷಣಾಧಿಕಾರಿ ಬಫರ್ ಜೋನ್, ಗುಂಡ್ಲುಪೇಟೆ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago