Andolana originals

ಅರಣ್ಯ ಇಲಾಖೆ ಭೂಮಿ ಕಬಳಿಕೆ ಯತ್ನ: ತಿಮ್ಮಕ್ಕ ವೃಕ್ಷೋದ್ಯಾನ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗವಾದ ಮಳಲವಾಡಿ-ಜಯನಗರದಲ್ಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸಿರುವ ಘಟನೆ ನಡೆದಿದೆ.

ಮಳಲವಾಡಿಯ ಸ.ನಂ.31ರ 33 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆಸಾಲುಮರದತಿಮಕವೃಕ್ಟೋದ್ಯಾನವನ್ನು ನಿರ್ಮಿಸಿದ್ದು, ಇಲ್ಲಿ ಸುಮಾರು 1,800 ಸಾಲು ಮರಗಳನ್ನು ನೆಟ್ಟು ಪೋಷಿಸುವ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಪಾತ್, ಮಕ್ಕಳಿಗೆ ಆಟೋಟ ಪರಿಕರಗಳು ಹಾಗೂ ಜಿಮ್ ಪರಿಕರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದೆ. ಈ ಉದ್ಯಾನದ ಮೇಲೆ ಇದೀಗ ಭೂಗಳ್ಳರ ದೃಷ್ಟಿ ಬಿದ್ದಿದ್ದು, ಆತಂಕ ಸೃಷ್ಟಿಯಾಗಿದೆ.

ಸರ್ಕಾರಿ ರಜಾ ದಿನವಾದ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ವೃದ್ಯಾನದ ಹಿಂಭಾಗದಿಂದ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದುಹಾಕಿತಾತ್ಕಾಲಿಕವಾಗಿ ಬೇಲಿ ಹಾಕಲು ಮುಂದಾಗಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆಯನ್ನು ತಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ವದ್ಯಾನದ ಭೂಮಿ ಕಬಳಿಸಲು ಯತ್ನಿಸಿರುವ ವಿಷಯ ತಿಳಿದ ಸ್ಥಳೀಯರು ಭಾನುವಾರ ಸಾಲುಮರ ತಿಮ್ಮಕ್ಕ ವೃಕ್ಲೋದ್ಯಾನ ಅಭಿವೃದ್ಧಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಭೂ ಕಬಳಿಕೆ ತಡೆಯುವಂತೆ ಒತ್ತಾಯಿಸಿದ್ದಾರೆ. ಮೈಸೂರು ಮಹಾ ನಗರಪಾಲಿಕೆ ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ, ಮಂಜೇಶ್, ಮಂಜು ನಾಥ್ ಸೇರಿದಂತೆ ಹತ್ತಾರು ಜನರು ಗಾಯಕ್ವಾಡ್, ರಮೇಶ್, ಲಲಿತಾಕ್ಷಿ, ತೇಜರಾಜ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಆಸ್ತಿಯನ್ನು ಉಳಿಸಲು ಒತ್ತಾಯ: ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನ ಅಭಿವೃದ್ಧಿ ಹಾಗೂ ಹೋರಾಟ ಸಮಿತಿಯು ಇಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಸ್ವ ಇಚ್ಚೆಯಿಂದ ಈ ನೈಸರ್ಗಿಕ ಉದ್ಯಾನವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇದೀಗ ಕೆಲವು ಭೂಮಾಫಿಯಾ ಕಳ್ಳರು ಉದ್ಯಾನದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸುಮಾರು 20 ಕೋಟಿ ರೂ. ಬೆಲೆಬಾಳುವ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡದೆ ಸಾರ್ವಜನಿಕ ಆಸ್ತಿಯನ್ನು ಉಳಿಸಬೇಕು ಎಂದು ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ ಆಗ್ರಹಿಸಿದ್ದಾರೆ.

ಖಾಸಗಿ ವ್ಯಕ್ತಿಯೊಬ್ಬರು ಈ ಸರ್ವೇ ನಂಬರ್‌ನಲ್ಲಿ ನಮಗೆ 1963ರಲ್ಲಿ 2 ಎಕರೆ 1 ಗುಂಟೆ ಜಾಗ ಮಂಜೂರಾಗಿದೆ ಎಂದು ಹೈಕೋರ್ಟ್ ಆದೇಶ ತಮ್ಮ ಪರ ಇದೆ ಎಂದು ಏಕಾಏಕಿ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದಿದ್ದಾರೆ. 1970ರಲ್ಲಿ ರಾಜ್ಯ ಸರ್ಕಾರ ಮಳಲವವಾಡಿ ಸ.ನಂ.31ರ ಜಾಗವನ್ನು ರಕ್ಷಿತಾರಣ್ಯ ಎಂದು ಅಧಿಸೂಚನೆ ಹೊರಡಿಸಿದೆ. ಅಂದಿನಿಂದ ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ ಎಂದು ಹೇಳಿ ತಡೆದಿದ್ದೇವೆ. ಜೊತೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

-ಧನ್ಯಶ್ರೀ, ವಲಯ ಅರಣ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

35 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago