Andolana originals

ಅರಣ್ಯ ಇಲಾಖೆ ಭೂಮಿ ಕಬಳಿಕೆ ಯತ್ನ: ತಿಮ್ಮಕ್ಕ ವೃಕ್ಷೋದ್ಯಾನ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗವಾದ ಮಳಲವಾಡಿ-ಜಯನಗರದಲ್ಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸಿರುವ ಘಟನೆ ನಡೆದಿದೆ.

ಮಳಲವಾಡಿಯ ಸ.ನಂ.31ರ 33 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆಸಾಲುಮರದತಿಮಕವೃಕ್ಟೋದ್ಯಾನವನ್ನು ನಿರ್ಮಿಸಿದ್ದು, ಇಲ್ಲಿ ಸುಮಾರು 1,800 ಸಾಲು ಮರಗಳನ್ನು ನೆಟ್ಟು ಪೋಷಿಸುವ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಪಾತ್, ಮಕ್ಕಳಿಗೆ ಆಟೋಟ ಪರಿಕರಗಳು ಹಾಗೂ ಜಿಮ್ ಪರಿಕರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದೆ. ಈ ಉದ್ಯಾನದ ಮೇಲೆ ಇದೀಗ ಭೂಗಳ್ಳರ ದೃಷ್ಟಿ ಬಿದ್ದಿದ್ದು, ಆತಂಕ ಸೃಷ್ಟಿಯಾಗಿದೆ.

ಸರ್ಕಾರಿ ರಜಾ ದಿನವಾದ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ವೃದ್ಯಾನದ ಹಿಂಭಾಗದಿಂದ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದುಹಾಕಿತಾತ್ಕಾಲಿಕವಾಗಿ ಬೇಲಿ ಹಾಕಲು ಮುಂದಾಗಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆಯನ್ನು ತಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ವದ್ಯಾನದ ಭೂಮಿ ಕಬಳಿಸಲು ಯತ್ನಿಸಿರುವ ವಿಷಯ ತಿಳಿದ ಸ್ಥಳೀಯರು ಭಾನುವಾರ ಸಾಲುಮರ ತಿಮ್ಮಕ್ಕ ವೃಕ್ಲೋದ್ಯಾನ ಅಭಿವೃದ್ಧಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಭೂ ಕಬಳಿಕೆ ತಡೆಯುವಂತೆ ಒತ್ತಾಯಿಸಿದ್ದಾರೆ. ಮೈಸೂರು ಮಹಾ ನಗರಪಾಲಿಕೆ ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ, ಮಂಜೇಶ್, ಮಂಜು ನಾಥ್ ಸೇರಿದಂತೆ ಹತ್ತಾರು ಜನರು ಗಾಯಕ್ವಾಡ್, ರಮೇಶ್, ಲಲಿತಾಕ್ಷಿ, ತೇಜರಾಜ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಆಸ್ತಿಯನ್ನು ಉಳಿಸಲು ಒತ್ತಾಯ: ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನ ಅಭಿವೃದ್ಧಿ ಹಾಗೂ ಹೋರಾಟ ಸಮಿತಿಯು ಇಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಸ್ವ ಇಚ್ಚೆಯಿಂದ ಈ ನೈಸರ್ಗಿಕ ಉದ್ಯಾನವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇದೀಗ ಕೆಲವು ಭೂಮಾಫಿಯಾ ಕಳ್ಳರು ಉದ್ಯಾನದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸುಮಾರು 20 ಕೋಟಿ ರೂ. ಬೆಲೆಬಾಳುವ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡದೆ ಸಾರ್ವಜನಿಕ ಆಸ್ತಿಯನ್ನು ಉಳಿಸಬೇಕು ಎಂದು ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ ಆಗ್ರಹಿಸಿದ್ದಾರೆ.

ಖಾಸಗಿ ವ್ಯಕ್ತಿಯೊಬ್ಬರು ಈ ಸರ್ವೇ ನಂಬರ್‌ನಲ್ಲಿ ನಮಗೆ 1963ರಲ್ಲಿ 2 ಎಕರೆ 1 ಗುಂಟೆ ಜಾಗ ಮಂಜೂರಾಗಿದೆ ಎಂದು ಹೈಕೋರ್ಟ್ ಆದೇಶ ತಮ್ಮ ಪರ ಇದೆ ಎಂದು ಏಕಾಏಕಿ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದಿದ್ದಾರೆ. 1970ರಲ್ಲಿ ರಾಜ್ಯ ಸರ್ಕಾರ ಮಳಲವವಾಡಿ ಸ.ನಂ.31ರ ಜಾಗವನ್ನು ರಕ್ಷಿತಾರಣ್ಯ ಎಂದು ಅಧಿಸೂಚನೆ ಹೊರಡಿಸಿದೆ. ಅಂದಿನಿಂದ ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ ಎಂದು ಹೇಳಿ ತಡೆದಿದ್ದೇವೆ. ಜೊತೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

-ಧನ್ಯಶ್ರೀ, ವಲಯ ಅರಣ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

27 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

53 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago