Andolana originals

ಅರಣ್ಯ ಇಲಾಖೆ ಭೂಮಿ ಕಬಳಿಕೆ ಯತ್ನ: ತಿಮ್ಮಕ್ಕ ವೃಕ್ಷೋದ್ಯಾನ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗವಾದ ಮಳಲವಾಡಿ-ಜಯನಗರದಲ್ಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸಿರುವ ಘಟನೆ ನಡೆದಿದೆ.

ಮಳಲವಾಡಿಯ ಸ.ನಂ.31ರ 33 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆಸಾಲುಮರದತಿಮಕವೃಕ್ಟೋದ್ಯಾನವನ್ನು ನಿರ್ಮಿಸಿದ್ದು, ಇಲ್ಲಿ ಸುಮಾರು 1,800 ಸಾಲು ಮರಗಳನ್ನು ನೆಟ್ಟು ಪೋಷಿಸುವ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಪಾತ್, ಮಕ್ಕಳಿಗೆ ಆಟೋಟ ಪರಿಕರಗಳು ಹಾಗೂ ಜಿಮ್ ಪರಿಕರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದೆ. ಈ ಉದ್ಯಾನದ ಮೇಲೆ ಇದೀಗ ಭೂಗಳ್ಳರ ದೃಷ್ಟಿ ಬಿದ್ದಿದ್ದು, ಆತಂಕ ಸೃಷ್ಟಿಯಾಗಿದೆ.

ಸರ್ಕಾರಿ ರಜಾ ದಿನವಾದ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ವೃದ್ಯಾನದ ಹಿಂಭಾಗದಿಂದ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದುಹಾಕಿತಾತ್ಕಾಲಿಕವಾಗಿ ಬೇಲಿ ಹಾಕಲು ಮುಂದಾಗಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆಯನ್ನು ತಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ವದ್ಯಾನದ ಭೂಮಿ ಕಬಳಿಸಲು ಯತ್ನಿಸಿರುವ ವಿಷಯ ತಿಳಿದ ಸ್ಥಳೀಯರು ಭಾನುವಾರ ಸಾಲುಮರ ತಿಮ್ಮಕ್ಕ ವೃಕ್ಲೋದ್ಯಾನ ಅಭಿವೃದ್ಧಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಭೂ ಕಬಳಿಕೆ ತಡೆಯುವಂತೆ ಒತ್ತಾಯಿಸಿದ್ದಾರೆ. ಮೈಸೂರು ಮಹಾ ನಗರಪಾಲಿಕೆ ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ, ಮಂಜೇಶ್, ಮಂಜು ನಾಥ್ ಸೇರಿದಂತೆ ಹತ್ತಾರು ಜನರು ಗಾಯಕ್ವಾಡ್, ರಮೇಶ್, ಲಲಿತಾಕ್ಷಿ, ತೇಜರಾಜ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಆಸ್ತಿಯನ್ನು ಉಳಿಸಲು ಒತ್ತಾಯ: ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನ ಅಭಿವೃದ್ಧಿ ಹಾಗೂ ಹೋರಾಟ ಸಮಿತಿಯು ಇಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಸ್ವ ಇಚ್ಚೆಯಿಂದ ಈ ನೈಸರ್ಗಿಕ ಉದ್ಯಾನವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇದೀಗ ಕೆಲವು ಭೂಮಾಫಿಯಾ ಕಳ್ಳರು ಉದ್ಯಾನದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸುಮಾರು 20 ಕೋಟಿ ರೂ. ಬೆಲೆಬಾಳುವ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡದೆ ಸಾರ್ವಜನಿಕ ಆಸ್ತಿಯನ್ನು ಉಳಿಸಬೇಕು ಎಂದು ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ ಆಗ್ರಹಿಸಿದ್ದಾರೆ.

ಖಾಸಗಿ ವ್ಯಕ್ತಿಯೊಬ್ಬರು ಈ ಸರ್ವೇ ನಂಬರ್‌ನಲ್ಲಿ ನಮಗೆ 1963ರಲ್ಲಿ 2 ಎಕರೆ 1 ಗುಂಟೆ ಜಾಗ ಮಂಜೂರಾಗಿದೆ ಎಂದು ಹೈಕೋರ್ಟ್ ಆದೇಶ ತಮ್ಮ ಪರ ಇದೆ ಎಂದು ಏಕಾಏಕಿ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದಿದ್ದಾರೆ. 1970ರಲ್ಲಿ ರಾಜ್ಯ ಸರ್ಕಾರ ಮಳಲವವಾಡಿ ಸ.ನಂ.31ರ ಜಾಗವನ್ನು ರಕ್ಷಿತಾರಣ್ಯ ಎಂದು ಅಧಿಸೂಚನೆ ಹೊರಡಿಸಿದೆ. ಅಂದಿನಿಂದ ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ ಎಂದು ಹೇಳಿ ತಡೆದಿದ್ದೇವೆ. ಜೊತೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

-ಧನ್ಯಶ್ರೀ, ವಲಯ ಅರಣ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago