ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗವಾದ ಮಳಲವಾಡಿ-ಜಯನಗರದಲ್ಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸಿರುವ ಘಟನೆ ನಡೆದಿದೆ.
ಮಳಲವಾಡಿಯ ಸ.ನಂ.31ರ 33 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆಸಾಲುಮರದತಿಮಕವೃಕ್ಟೋದ್ಯಾನವನ್ನು ನಿರ್ಮಿಸಿದ್ದು, ಇಲ್ಲಿ ಸುಮಾರು 1,800 ಸಾಲು ಮರಗಳನ್ನು ನೆಟ್ಟು ಪೋಷಿಸುವ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಪಾತ್, ಮಕ್ಕಳಿಗೆ ಆಟೋಟ ಪರಿಕರಗಳು ಹಾಗೂ ಜಿಮ್ ಪರಿಕರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದೆ. ಈ ಉದ್ಯಾನದ ಮೇಲೆ ಇದೀಗ ಭೂಗಳ್ಳರ ದೃಷ್ಟಿ ಬಿದ್ದಿದ್ದು, ಆತಂಕ ಸೃಷ್ಟಿಯಾಗಿದೆ.
ಸರ್ಕಾರಿ ರಜಾ ದಿನವಾದ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ವೃದ್ಯಾನದ ಹಿಂಭಾಗದಿಂದ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದುಹಾಕಿತಾತ್ಕಾಲಿಕವಾಗಿ ಬೇಲಿ ಹಾಕಲು ಮುಂದಾಗಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆಯನ್ನು ತಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ವದ್ಯಾನದ ಭೂಮಿ ಕಬಳಿಸಲು ಯತ್ನಿಸಿರುವ ವಿಷಯ ತಿಳಿದ ಸ್ಥಳೀಯರು ಭಾನುವಾರ ಸಾಲುಮರ ತಿಮ್ಮಕ್ಕ ವೃಕ್ಲೋದ್ಯಾನ ಅಭಿವೃದ್ಧಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಭೂ ಕಬಳಿಕೆ ತಡೆಯುವಂತೆ ಒತ್ತಾಯಿಸಿದ್ದಾರೆ. ಮೈಸೂರು ಮಹಾ ನಗರಪಾಲಿಕೆ ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ, ಮಂಜೇಶ್, ಮಂಜು ನಾಥ್ ಸೇರಿದಂತೆ ಹತ್ತಾರು ಜನರು ಗಾಯಕ್ವಾಡ್, ರಮೇಶ್, ಲಲಿತಾಕ್ಷಿ, ತೇಜರಾಜ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಆಸ್ತಿಯನ್ನು ಉಳಿಸಲು ಒತ್ತಾಯ: ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನ ಅಭಿವೃದ್ಧಿ ಹಾಗೂ ಹೋರಾಟ ಸಮಿತಿಯು ಇಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಸ್ವ ಇಚ್ಚೆಯಿಂದ ಈ ನೈಸರ್ಗಿಕ ಉದ್ಯಾನವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇದೀಗ ಕೆಲವು ಭೂಮಾಫಿಯಾ ಕಳ್ಳರು ಉದ್ಯಾನದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸುಮಾರು 20 ಕೋಟಿ ರೂ. ಬೆಲೆಬಾಳುವ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡದೆ ಸಾರ್ವಜನಿಕ ಆಸ್ತಿಯನ್ನು ಉಳಿಸಬೇಕು ಎಂದು ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ ಆಗ್ರಹಿಸಿದ್ದಾರೆ.
ಖಾಸಗಿ ವ್ಯಕ್ತಿಯೊಬ್ಬರು ಈ ಸರ್ವೇ ನಂಬರ್ನಲ್ಲಿ ನಮಗೆ 1963ರಲ್ಲಿ 2 ಎಕರೆ 1 ಗುಂಟೆ ಜಾಗ ಮಂಜೂರಾಗಿದೆ ಎಂದು ಹೈಕೋರ್ಟ್ ಆದೇಶ ತಮ್ಮ ಪರ ಇದೆ ಎಂದು ಏಕಾಏಕಿ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದಿದ್ದಾರೆ. 1970ರಲ್ಲಿ ರಾಜ್ಯ ಸರ್ಕಾರ ಮಳಲವವಾಡಿ ಸ.ನಂ.31ರ ಜಾಗವನ್ನು ರಕ್ಷಿತಾರಣ್ಯ ಎಂದು ಅಧಿಸೂಚನೆ ಹೊರಡಿಸಿದೆ. ಅಂದಿನಿಂದ ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ ಎಂದು ಹೇಳಿ ತಡೆದಿದ್ದೇವೆ. ಜೊತೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
-ಧನ್ಯಶ್ರೀ, ವಲಯ ಅರಣ್ಯಾಧಿಕಾರಿ
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…