Andolana originals

ಅರಣ್ಯ ಇಲಾಖೆ ಭೂಮಿ ಕಬಳಿಕೆ ಯತ್ನ: ತಿಮ್ಮಕ್ಕ ವೃಕ್ಷೋದ್ಯಾನ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗವಾದ ಮಳಲವಾಡಿ-ಜಯನಗರದಲ್ಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸಿರುವ ಘಟನೆ ನಡೆದಿದೆ.

ಮಳಲವಾಡಿಯ ಸ.ನಂ.31ರ 33 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆಸಾಲುಮರದತಿಮಕವೃಕ್ಟೋದ್ಯಾನವನ್ನು ನಿರ್ಮಿಸಿದ್ದು, ಇಲ್ಲಿ ಸುಮಾರು 1,800 ಸಾಲು ಮರಗಳನ್ನು ನೆಟ್ಟು ಪೋಷಿಸುವ ಜತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಪಾತ್, ಮಕ್ಕಳಿಗೆ ಆಟೋಟ ಪರಿಕರಗಳು ಹಾಗೂ ಜಿಮ್ ಪರಿಕರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದೆ. ಈ ಉದ್ಯಾನದ ಮೇಲೆ ಇದೀಗ ಭೂಗಳ್ಳರ ದೃಷ್ಟಿ ಬಿದ್ದಿದ್ದು, ಆತಂಕ ಸೃಷ್ಟಿಯಾಗಿದೆ.

ಸರ್ಕಾರಿ ರಜಾ ದಿನವಾದ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ವೃದ್ಯಾನದ ಹಿಂಭಾಗದಿಂದ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದುಹಾಕಿತಾತ್ಕಾಲಿಕವಾಗಿ ಬೇಲಿ ಹಾಕಲು ಮುಂದಾಗಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆಯನ್ನು ತಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ವದ್ಯಾನದ ಭೂಮಿ ಕಬಳಿಸಲು ಯತ್ನಿಸಿರುವ ವಿಷಯ ತಿಳಿದ ಸ್ಥಳೀಯರು ಭಾನುವಾರ ಸಾಲುಮರ ತಿಮ್ಮಕ್ಕ ವೃಕ್ಲೋದ್ಯಾನ ಅಭಿವೃದ್ಧಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಭೂ ಕಬಳಿಕೆ ತಡೆಯುವಂತೆ ಒತ್ತಾಯಿಸಿದ್ದಾರೆ. ಮೈಸೂರು ಮಹಾ ನಗರಪಾಲಿಕೆ ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ, ಮಂಜೇಶ್, ಮಂಜು ನಾಥ್ ಸೇರಿದಂತೆ ಹತ್ತಾರು ಜನರು ಗಾಯಕ್ವಾಡ್, ರಮೇಶ್, ಲಲಿತಾಕ್ಷಿ, ತೇಜರಾಜ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಆಸ್ತಿಯನ್ನು ಉಳಿಸಲು ಒತ್ತಾಯ: ಸಾಲುಮರದ ತಿಮ್ಮಕ್ಕ ವೃಕ್ಟೋದ್ಯಾನ ಅಭಿವೃದ್ಧಿ ಹಾಗೂ ಹೋರಾಟ ಸಮಿತಿಯು ಇಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಸ್ವ ಇಚ್ಚೆಯಿಂದ ಈ ನೈಸರ್ಗಿಕ ಉದ್ಯಾನವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇದೀಗ ಕೆಲವು ಭೂಮಾಫಿಯಾ ಕಳ್ಳರು ಉದ್ಯಾನದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸುಮಾರು 20 ಕೋಟಿ ರೂ. ಬೆಲೆಬಾಳುವ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡದೆ ಸಾರ್ವಜನಿಕ ಆಸ್ತಿಯನ್ನು ಉಳಿಸಬೇಕು ಎಂದು ಮಾಜಿ ಉಪ ಮಹಾಪೌರ ವಿ.ಶೈಲೇಂದ್ರ ಆಗ್ರಹಿಸಿದ್ದಾರೆ.

ಖಾಸಗಿ ವ್ಯಕ್ತಿಯೊಬ್ಬರು ಈ ಸರ್ವೇ ನಂಬರ್‌ನಲ್ಲಿ ನಮಗೆ 1963ರಲ್ಲಿ 2 ಎಕರೆ 1 ಗುಂಟೆ ಜಾಗ ಮಂಜೂರಾಗಿದೆ ಎಂದು ಹೈಕೋರ್ಟ್ ಆದೇಶ ತಮ್ಮ ಪರ ಇದೆ ಎಂದು ಏಕಾಏಕಿ ಜೆಸಿಬಿ ನುಗ್ಗಿಸಿ ಕಾಂಪೌಂಡ್ ಒಡೆದಿದ್ದಾರೆ. 1970ರಲ್ಲಿ ರಾಜ್ಯ ಸರ್ಕಾರ ಮಳಲವವಾಡಿ ಸ.ನಂ.31ರ ಜಾಗವನ್ನು ರಕ್ಷಿತಾರಣ್ಯ ಎಂದು ಅಧಿಸೂಚನೆ ಹೊರಡಿಸಿದೆ. ಅಂದಿನಿಂದ ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ ಎಂದು ಹೇಳಿ ತಡೆದಿದ್ದೇವೆ. ಜೊತೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

-ಧನ್ಯಶ್ರೀ, ವಲಯ ಅರಣ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

2 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

4 hours ago