Andolana originals

ಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ

ಮಹೇಂದ್ರ ಹಸಗೂಲಿ

ಹುಲಿ, ಚಿರತೆ, ಕಾಡಾನೆ ಉಪಟಳಕ್ಕೆ ನಲುಗಿದ ರೈತರು ಅಽಕಾರಿಗಳ ವರ್ತನೆಯಿಂದ ಬೇಸತ್ತು ದಿಗ್ಬಂಧನಕ್ಕೆ ಮುಂದಾದರೆ?

ಗುಂಡ್ಲುಪೇಟೆ: ಹುಲಿ ಸೆರೆಗೆ ತಕ್ಷಣ ಕ್ರಮ ವಹಿಸಲಿಲ್ಲ ಎಂದು ಸಿಟ್ಟಿಗೆದ್ದ ರೈತರು ತಾಲ್ಲೂಕಿನ ಬೊಮ್ಮಲಾಪುರದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಬೋನಿನೊಳಗೆ ಕೂಡಿಹಾಕಿ ದಿಗ್ಬಂಧನ ವಿಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣ ಎಂಬ ಅಸಮಾಧಾನ ವ್ಯಕ್ತವಾಗಿದೆ. ಬೊಮ್ಮಲಾಪುರದ ಗಂಗಪ್ಪ ಎಂಬವರ ಜಮೀನಿನಲ್ಲಿ ಒಂದು ತಿಂಗಳ ಹಿಂದೆ ಹುಲಿ ಸೆರೆಗೆ ಬೋನು ಇರಿಸಲಾಗಿತ್ತು.

ಆದರೆ, ಹುಲಿ ಬೋನಿಗೆ ಬೀಳದೆ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇತ್ತು. ಗ್ರಾಮದ ಕಡೆಗೆ ಸರಿಯಾಗಿ ಅರಣ್ಯ ಸಿಬ್ಬಂದಿ ಬಾರದಿರುವುದು ಹಾಗೂ ಹುಲಿ ಸೆರೆಗೆ ಕ್ರಮ ವಹಿಸದ ಕಾರಣ ರೈತರು ಆಕ್ರೋಶಗೊಂಡು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ದಿಗ್ಬಂಧನ ವಿಧಿಸಿರುವ ಘಟನೆ ನಡೆದಿದೆ.

ತಾಲ್ಲೂಕಿನ ಹತ್ತಾರು ಗ್ರಾಮಗಳು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಅಂಚಿನಲ್ಲಿವೆ. ಬಫರ್ ವಲಯದೊಳಗೆ ಚಿರತೆ, ಹುಲಿ, ಆನೆಗಳು ಓಡಾಡಿಕೊಂಡು ಜನ-ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ತಾಲ್ಲೂಕು ವ್ಯಾಪ್ತಿಯಲ್ಲಿ ಆಗಾಗ್ಗೆ ಮಾನವ ಮತ್ತು ವನ್ಯಜೀವಿ ಸಂಘರ್ಷ ನಡೆಯುತ್ತಲೇ ಇವೆ .

ಪ್ರಾಣಿಗಳು ಜಾನುವಾರು ಗಳ ಮೇಲೆ ದಾಳಿ ನಡೆಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ತಕ್ಷಣ ಕ್ರಮ ವಹಿಸಿದರೆ ದಿಗ್ಬಂಧನದಂತಹ ಘಟನೆಗಳು ನಡೆಯುವುದಿಲ್ಲ. ಆದರೆ, ಅರಣ್ಯ ಇಲಾಖೆ ಸಿಬ್ಬಂದಿ ಸ್ಪಂದಿಸುವುದಿಲ್ಲ ಎಂಬ ಅಪವಾದ ರೈತ ಮುಖಂಡರು ಹಾಗೂ ರೈತರಿಂದ ಕೇಳಿಬರುತ್ತಲೇ ಇದೆ.

ತಾಲ್ಲೂಕಿನ ಬೊಮ್ಮಲಾಪುರ, ಸೋಮಹಳ್ಳಿ, ಯಡವನಹಳ್ಳಿ, ಹೊಸಪುರ, ಕುರುಬರಹುಂಡಿ, ಹಾಲಹಳ್ಳಿ, ಮಾಡ್ರಹಳ್ಳಿ, ಹಸಗೂಲಿ, ವಡಯ್ಯನಪುರ, ಹುಂಡೀಪುರ, ಶಿವಪುರ, ಕಲ್ಲಿಗೌಡನಹಳ್ಳಿ, ಮಂಚಹಳ್ಳಿ, ಹೊಂಗಹಳ್ಳಿ, ಕಲ್ಲಹಳ್ಳಿ, ಆಲತ್ತೂರು, ಪಡಗೂರು, ಗೋಪಾಲಪುರ, ಕಗ್ಗಳಹುಂಡಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಹುಲಿ, ಚಿರತೆ ಆನೆ ದಾಳಿ ಸತತವಾಗಿ ನಡೆಯುತ್ತಿದೆ. ಇದಲ್ಲದೆ ಹಂದಿಗಳು, ನವಿಲುಗಳ ಕಾಟವೂ ಇದೆ.

ಈ ಹಿಂದೆ ಹುಲಿ ದಾಳಿಗೆ ಚೌಡಹಳ್ಳಿಯ ಇಬ್ಬರು ರೈತರು, ದೇಸಿಪುರ ಕಾಲೋನಿಯ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಕುಂದಕೆರೆ ಗ್ರಾಮದ ಬಳಿಯ ರೈತರ ಜಮೀನಿನಲ್ಲಿ ಹುಲಿಗಳ ನಡುವೆ ಕಾದಾಟ ನಡೆದು ಹುಲಿಯೊಂದು ಗಾಯ ಗೊಂಡಿತ್ತು. ಮತ್ತೊಂದು ಹುಲಿಯನ್ನು ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರೂ ಹುಲಿ ಸೆರೆ ಸಿಕ್ಕಿಲ್ಲ.

ಪಟಾಕಿಗಳನ್ನು ನೀಡುತ್ತಿಲ್ಲ : ಕಾಡಾನೆಗಳ ದಾಳಿಯಿಂದಾಗಿ ಪ್ರತಿನಿತ್ಯ ಹೊಸಪುರ, ಆಲತ್ತೂರು, ಸಾವಕನಹಳ್ಳಿ ಪಾಳ್ಯ, ಮಂಚಹಳ್ಳಿ, ಕುರುಬರಹುಂಡಿ ಭಾಗದಲ್ಲಿ ಬೆಳೆ ನಾಶವಾಗುತ್ತಿದೆ. ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಪಟಾಕಿಗಳನ್ನು ನೀಡುತ್ತಿಲ್ಲ. ಇತ್ತ ರೈತರ ಫಸಲು ನಾಶವಾದರೆ ಸರಿಯಾಗಿ ಪರಿಹಾರ ನೀಡುತ್ತಿಲ್ಲ.

ಸರಿಯಾಗಿ ಕಾಡಂಚಿನ ಜನರು, ರೈತರು, ಸಾರ್ವಜನಿಕರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳ ಹೊಂದಾಣಿಕೆ ಇಲ್ಲದೆ ತಿಕ್ಕಾಟ ಏರ್ಪಟ್ಟಿದೆ ಎಂದು ಆರೋಪವೂ ಕೇಳಿಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಾಮಕಾವಸ್ತೆಗೆ ಬೋನು ಇರಿಸಿ ವಾಚರ್‌ಗಳನ್ನು ನೇಮಿಸಿ ಹೋಗುತ್ತಾರೆ. ಆದರೆ, ಅವರು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಕಾಡಂಚಿನ ಭಾಗದಲ್ಲಿ ಟ್ರಂಚ್, ರೈಲ್ವೆ ಕಂಬಿಗಳ ಅಳವಡಿಕೆ ನಡೆಯದ ಕಾರಣ ಕಾಡಾನೆಗಳು ನಾಡಿನತ್ತ ಮುಖ ಮಾಡುತ್ತಿವೆ ಎಂದು ಆಕ್ರೋಶ ಹೊರಹಾಕಿದರು.

” ಅರಣ್ಯ ಇಲಾಖೆ ಸಿಬ್ಬಂದಿ ಹುಲಿ, ಚಿರತೆಗಳ ಚಲನವಲನ ಕಂಡು ಹಿಡಿಯದೆ ತಿಂಗಳುಗಟ್ಟಲೇ ಕಾಲಹರಣ ಮಾಡಿದ್ದಾರೆ. ಅಲ್ಲದೇ ತಾಲ್ಲೂಕಿನಾದ್ಯಂತ ಕಾಡುಪ್ರಾಣಿಗಳ ಹಾವಳಿ ಹೆಚ್ಚಿದೆ. ಇವುಗಳನ್ನು ಅರಣ್ಯ ಇಲಾಖೆ ನಿಯಂತ್ರಿಸಿ ರೈತರಿಗೆ, ಸಾರ್ವಜನಿಕರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ.”

-ಶಿವಪ್ರಸಾದ್( ಗುಂಡಣ್ಣ) ಪ್ರಗತಿಪರ ರೈತ, ಕೊಡಸೋಗೆ

” ಕಾಡು ಪ್ರಾಣಿಗಳ ಹಾವಳಿ ಸಂದರ್ಭ ನಮಗೆ ಮಾಹಿತಿ ಬಂದಾಗ ಸ್ಥಳಕ್ಕೆ ತೆರಳಲು ಸಮಯ ಬೇಕಾಗುತ್ತದೆ. ಆ ಸಂದರ್ಭದಲ್ಲಿಯೇ ಬೇರೆ ಕಡೆ ಕಾರ್ಯಾಚರಣೆ ನಡೆದರೆ ಮತ್ತಷ್ಟು ವಿಳಂಬವಾಗಿರಬಹುದು. ಅದನ್ನು ಬಿಟ್ಟು ಬೇಕಂತಲೇ ಯಾವ ಅರಣ್ಯ ಅಧಿಕಾರಿ, ಸಿಬ್ಬಂದಿಯೂ ವಿಳಂಬ ಮಾಡುವುದಿಲ್ಲ. ಎಲ್ಲಾ ಸಿಬ್ಬಂದಿ ಆಯಾಯ ವಲಯ ವ್ಯಾಪ್ತಿಯಲ್ಲಿಯೇ ಇರುತ್ತಾರೆ. ಹುಲಿ ಸೆರೆಗೆ ಬೋನಿನಲ್ಲಿ ಕಟ್ಟಿದ್ದ ಕರು ಆಕಸ್ಮಿಕವಾಗಿ ಸಾವನ್ನಪ್ಪಿದೆ.”

-ಸುರೇಶ್ ಕುಮಾರ್ ಎಸಿಎಫ್, ಬಫರ್ ವಲಯ ಗುಂಡ್ಲುಪೇಟೆ

” ಹುಲಿ ಕಾಟದಿಂದ ಜಮೀನುಗಳಿಗೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಸರಿಯಾಗಿ ಕೂಂಬಿಂಗ್ ಮಾಡಲ್ಲ. ಬೋನಿನಲ್ಲಿ ಕಟ್ಟಿಹಾಕಿದ್ದ ಕರುವಿಗೆ ಹುಲ್ಲು ಹಾಕದೆ ಸಾಯಿಸಿದ್ದಾರೆ. ಕಳೆದು ಒಂದು ತಿಂಗಳಿಂದ ಹುಲಿ ಉಪಟಳಕ್ಕೆ ಬೊಮ್ಮಲಾಪುರ, ಕೊಡಸೋಗೆ ವಡಯ್ಯನಪುರ ಭಾಗದ ಜನರು ಭಯಭೀತರಾಗಿದ್ದಾರೆ.”

-ವಿಶ್ವಣ್ಣ, ಮುಖಂಡ, ವಡಯ್ಯನಪುರ

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago