ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ
ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ.
ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆನೆಗಳು ತಾಲೀಮು ಮಾಡುವಾಗ ಯಾವುದೇ ಕಿರಿಕಿರಿಯಾಗದಂತೆ ಹೆಜ್ಜೆ ಹಾಕಲು ಬೇಕಾದ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ಹಾಗೆಯೇ ಸಾರ್ವಜನಿಕರು ತಾಲೀಮು ವೇಳೆ ಹಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ
* ಮಾವುತರ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು
* ಜನರು ಮಕ್ಕಳನ್ನು ಆನೆಗಳಿಂದ ದೂರವಿರಿಸಬೇಕು
* ದಸರಾ ಗಜಪಡೆಯಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು
* ತಾಲೀಮಿನಲ್ಲಿರುವ ಆನೆಗಳಿಗೆ ಆಹಾರ ನೀಡಲು ಹೋಗಬಾರದು
* ಆನೆಗಳ ಸಮೀಪದಲ್ಲಿ ವಾಹನಗಳನ್ನು ನಿಲ್ಲಿಸಬಾರದು
* ಆನೆಗಳು ಬರುವಾಗ ರಸ್ತೆ ದಾಟುವುದನ್ನು ನಿಲ್ಲಿಸಬೇಕು
* ಗಜಪಡೆಯನ್ನು ಸಮೀಪದಿಂದ ಹಿಂಬಾಲಿಸಬಾರದು.
* ರಸ್ತೆಯಲ್ಲಿ ಆನೆಗಳು ನಡೆದು ಹೋಗುತ್ತಿರುವಾಗ ಹೂವು ಎಸೆಯಬಾರದು.
* ಆನೆಗಳು ನಡೆಯುವಾಗ ಅವುಗಳ ಮುಂದೆ ನಿಂತು ಸೆಲ್ಫಿ ವಿಡಿಯೋ, ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಳ್ಳಬಾರದು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…