ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ
ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ.
ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆನೆಗಳು ತಾಲೀಮು ಮಾಡುವಾಗ ಯಾವುದೇ ಕಿರಿಕಿರಿಯಾಗದಂತೆ ಹೆಜ್ಜೆ ಹಾಕಲು ಬೇಕಾದ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ಹಾಗೆಯೇ ಸಾರ್ವಜನಿಕರು ತಾಲೀಮು ವೇಳೆ ಹಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ
* ಮಾವುತರ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು
* ಜನರು ಮಕ್ಕಳನ್ನು ಆನೆಗಳಿಂದ ದೂರವಿರಿಸಬೇಕು
* ದಸರಾ ಗಜಪಡೆಯಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು
* ತಾಲೀಮಿನಲ್ಲಿರುವ ಆನೆಗಳಿಗೆ ಆಹಾರ ನೀಡಲು ಹೋಗಬಾರದು
* ಆನೆಗಳ ಸಮೀಪದಲ್ಲಿ ವಾಹನಗಳನ್ನು ನಿಲ್ಲಿಸಬಾರದು
* ಆನೆಗಳು ಬರುವಾಗ ರಸ್ತೆ ದಾಟುವುದನ್ನು ನಿಲ್ಲಿಸಬೇಕು
* ಗಜಪಡೆಯನ್ನು ಸಮೀಪದಿಂದ ಹಿಂಬಾಲಿಸಬಾರದು.
* ರಸ್ತೆಯಲ್ಲಿ ಆನೆಗಳು ನಡೆದು ಹೋಗುತ್ತಿರುವಾಗ ಹೂವು ಎಸೆಯಬಾರದು.
* ಆನೆಗಳು ನಡೆಯುವಾಗ ಅವುಗಳ ಮುಂದೆ ನಿಂತು ಸೆಲ್ಫಿ ವಿಡಿಯೋ, ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಳ್ಳಬಾರದು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…