ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ
ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ.
ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆನೆಗಳು ತಾಲೀಮು ಮಾಡುವಾಗ ಯಾವುದೇ ಕಿರಿಕಿರಿಯಾಗದಂತೆ ಹೆಜ್ಜೆ ಹಾಕಲು ಬೇಕಾದ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ಹಾಗೆಯೇ ಸಾರ್ವಜನಿಕರು ತಾಲೀಮು ವೇಳೆ ಹಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ
* ಮಾವುತರ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು
* ಜನರು ಮಕ್ಕಳನ್ನು ಆನೆಗಳಿಂದ ದೂರವಿರಿಸಬೇಕು
* ದಸರಾ ಗಜಪಡೆಯಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು
* ತಾಲೀಮಿನಲ್ಲಿರುವ ಆನೆಗಳಿಗೆ ಆಹಾರ ನೀಡಲು ಹೋಗಬಾರದು
* ಆನೆಗಳ ಸಮೀಪದಲ್ಲಿ ವಾಹನಗಳನ್ನು ನಿಲ್ಲಿಸಬಾರದು
* ಆನೆಗಳು ಬರುವಾಗ ರಸ್ತೆ ದಾಟುವುದನ್ನು ನಿಲ್ಲಿಸಬೇಕು
* ಗಜಪಡೆಯನ್ನು ಸಮೀಪದಿಂದ ಹಿಂಬಾಲಿಸಬಾರದು.
* ರಸ್ತೆಯಲ್ಲಿ ಆನೆಗಳು ನಡೆದು ಹೋಗುತ್ತಿರುವಾಗ ಹೂವು ಎಸೆಯಬಾರದು.
* ಆನೆಗಳು ನಡೆಯುವಾಗ ಅವುಗಳ ಮುಂದೆ ನಿಂತು ಸೆಲ್ಫಿ ವಿಡಿಯೋ, ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಳ್ಳಬಾರದು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…