ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ
ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ.
ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆನೆಗಳು ತಾಲೀಮು ಮಾಡುವಾಗ ಯಾವುದೇ ಕಿರಿಕಿರಿಯಾಗದಂತೆ ಹೆಜ್ಜೆ ಹಾಕಲು ಬೇಕಾದ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ. ಹಾಗೆಯೇ ಸಾರ್ವಜನಿಕರು ತಾಲೀಮು ವೇಳೆ ಹಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ
* ಮಾವುತರ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು
* ಜನರು ಮಕ್ಕಳನ್ನು ಆನೆಗಳಿಂದ ದೂರವಿರಿಸಬೇಕು
* ದಸರಾ ಗಜಪಡೆಯಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು
* ತಾಲೀಮಿನಲ್ಲಿರುವ ಆನೆಗಳಿಗೆ ಆಹಾರ ನೀಡಲು ಹೋಗಬಾರದು
* ಆನೆಗಳ ಸಮೀಪದಲ್ಲಿ ವಾಹನಗಳನ್ನು ನಿಲ್ಲಿಸಬಾರದು
* ಆನೆಗಳು ಬರುವಾಗ ರಸ್ತೆ ದಾಟುವುದನ್ನು ನಿಲ್ಲಿಸಬೇಕು
* ಗಜಪಡೆಯನ್ನು ಸಮೀಪದಿಂದ ಹಿಂಬಾಲಿಸಬಾರದು.
* ರಸ್ತೆಯಲ್ಲಿ ಆನೆಗಳು ನಡೆದು ಹೋಗುತ್ತಿರುವಾಗ ಹೂವು ಎಸೆಯಬಾರದು.
* ಆನೆಗಳು ನಡೆಯುವಾಗ ಅವುಗಳ ಮುಂದೆ ನಿಂತು ಸೆಲ್ಫಿ ವಿಡಿಯೋ, ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಳ್ಳಬಾರದು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…