Andolana originals

ಹುಲಿಗಳ ಚಲನವಲನ ಅರಿಯಲು ಮೊಬೈಲ್ ಆ್ಯಪ್; ವ್ಯಾಘ್ರನ ಗಣತಿಗೆ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ

ಮೈಸೂರು: ಅರಣ್ಯ ಪ್ರದೇಶದಲ್ಲಿ ಹುಲಿಗಳ ಚಲನವಲನ ಹುಲಿಗಳ ಅರಿಯಲು ಅರಣ್ಯ ಇಲಾಖೆ ಇದೀಗ ಮೊಬೈಲ್ ಆ್ಯಪ್ ತಂತ್ರಜ್ಞಾನದ ಮೊರೆ ಹೋಗಿದೆ. ಹುಲಿಗಳ ಕುರಿತು ಆಂತರಿಕ ಗಣತಿ ಕೈಗೊಂಡಿರುವ ಇಲಾಖೆ ಇದೇ ಮೊದಲ ಬಾರಿಗೆ ಆ್ಯಪ್ ಬಳಸಿ ಮೊಬೈಲ್ ಮೂಲಕವೇ ಎಲ್ಲ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಈ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಇದಕ್ಕಾಗಿ ಈಗಾಗಲೇ 1000 ಮೊಬೈಲ್‌ಗಳನ್ನು ಖರೀದಿಸಲಾಗಿದೆ ಎಂದು ಡಿ.ಸಿ.ಎಫ್. ಹರ್ಷ ಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಗಣತಿ ನಡೆಯುವ ಬಗೆ: ಪ್ರಮುಖವಾಗಿ ವನ್ಯಪ್ರಾಣಿಗಳು ಹಾದು ಹೋಗುವ ಕೇಂದ್ರೀಕೃತ ಪ್ರದೇಶಗಳಲ್ಲಿ ಗುರುತಿಸಿರುವ ಸ್ಥಳದ ಎರಡೂ ಬದಿಯಲ್ಲಿ ಅಂದರೆ ಪ್ರತಿ 2 ಚ.ಕಿ.ಮೀ.ಗೆ ಒಂದು ಕಡೆ ಸೆನ್ಸಾರ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮಾರ್ಗದಲ್ಲಿ ಹಾದು ಹೋಗುವ ಹುಲಿ ಜತೆಗೆ ಇತರೆ ಪ್ರಾಣಿಗಳ ಚಿತ್ರವನ್ನು ಎರಡು ಕಡೆಯೂ ಕ್ಯಾಮೆರಾಗಳು ಸ್ವಯಂಚಾಲಿತವಾಗಿ ಹಿಡಿಯುತ್ತವೆ. ಹುಲಿ ಮೈ ಮೇಲಿನ ಪಟ್ಟೆ ಆಧರಿಸಿ ಸಂಖ್ಯೆಯನ್ನು ಪರಿಗಣಿಸಲಾಗುತ್ತದೆ.

ಹುಲಿ ಗಣತಿಯನ್ನು ನಾಲ್ಕು ವಿಧಾನದಲ್ಲಿ ನಡೆಸಲಾಗುತ್ತದೆ. ಮೊದಲ ಎರಡು ಹಂತದಲ್ಲಿ ಹುಲಿ ಇರುವಿಕೆಯ ಚಿಹ್ನೆ ಮತ್ತು ಹೆಜ್ಜೆ ಗುರುತು ಮೂಲಕ ಗುರುತಿಸಲಾಗುತ್ತದೆ. ಮೂರನೇ ಹಂತದಲ್ಲಿ ಜಿಐಎಸ್ ಆ್ಯಪ್ ನೊಂದಿಗೆ ಸಿದ್ಧಪಡಿಸಿದ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಬಳಸಿ ಎಣಿಸಲಾಗುತ್ತದೆ. ಕೊನೆ ಹಂತದಲ್ಲಿ ಕ್ಯಾಮೆರಾ ಹಾಕದ ಪ್ರದೇಶದಲ್ಲಿ ಸರ್ವೇ ಕಾರ್ಯ ನಡೆಸಿ ದತ್ತಾಂಶ ಕಲೆ ಹಾಕಲಾಗುತ್ತದೆ.

ಅರಣ್ಯದಲ್ಲೀಗ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಯಿದ್ದು, ವನ್ಯಜೀವಿಗಳ ಜೀವನ ಕ್ರಮದಲ್ಲೂ ಸಾಕಷ್ಟು ಬದಲಾವಣೆಯ ಪರ್ವ ಕಾಲವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಉದ್ಯಾನವ್ಯಾಪ್ತಿಯ ಅಂತರಸಂತೆ ವಲಯ 4200 ಕಿ.ಮೀ.
ಈ ವ್ಯಾಪ್ತಿಯಲ್ಲಿ ಕೇವಲ 1800 ಕಿ.ಮೀ. ವ್ಯಾಪ್ತಿಯಲ್ಲಿ ದಟ್ಟ ಕಾಡಿದ್ದು ವನ್ಯಜೀವಿಗಳು ತಮ್ಮ ಸಹಜ ಜೀವನ ಕ್ರಿಯೆಗಾಗಿ ಕಾಡಿನಿಂದ ಹೊರಬರುವುದು ರೂಢಿಯಾಗಿ ಬಿಟ್ಟಿದೆ.

ಅರಣ್ಯದಲ್ಲಿ ಸಹಜತೆಯನ್ನು ಕಾಪಾಡುವಲ್ಲಿ ಬದ್ಧತೆ ಅವಶ್ಯಕ. ವನ್ಯಜೀವಿಗಳ ಆಹಾರ ಚಕ್ರದಲ್ಲಿ ಹುಲಿಯ ಪಾತ್ರವೇ ಬಹುಮುಖ್ಯ. ಅರಣ್ಯದಲ್ಲಿನ ನೀರಿನ ಸಂಪನ್ಮೂಲ ಅಭಿವೃದ್ಧಿಗೂ ಈ ವನ್ಯಜೀವಿಗಳ ಆಹಾರ ಚಕ್ರವೇ ಬಹುಮುಖ್ಯ. ಹೀಗಾಗಿ ಯಾವುದೇ ಪ್ರಾಣಿಗಳ ಜೊತೆ ಲಘುವಾಗಿ ನಡೆದುಕೊಳ್ಳದೇ ಅರಣ್ಯದಲ್ಲಿ ಸಹಜತೆಯನ್ನು ಕಾಪಾಡಿಕೊಳ್ಳಲು ಇಲಾಖೆ ಶ್ರಮಿಸುತ್ತಿದೆ ಎಂದು ಡಿ.ಸಿ.ಎಫ್. ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ನಾಗರಹೊಳೆ ಉದ್ಯಾನವನದ ಕಚೇರಿಯಲ್ಲಿ ಇತ್ತೀಚೆಗೆ ಗಣತಿದಾರರಿಗೆ ತರಬೇತಿಯನ್ನೂ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಹರ್ಷಕುಮಾರ್, ಪರಿಸರದ ಕುರಿತು ಕಾಳಜಿ ಮತ್ತು ಅಧ್ಯಯನದ ಜೊತೆಗೆ ಹುಲಿ ಗಣತಿ ಕಾರ್ಯಕ್ಕೆ ಬಂದಿರುವ ಸ್ವಯಂಸೇವಕರು ಕಾಡಿನೊಳಗೆ ವನ್ಯಜೀವಿಗಳ ದೈನಂದಿನ ಬದುಕಿಗೆ ಯಾವುದೇ ತೊಂದರೆಯಾಗದಂತೆ ಗಣತಿ ಕಾರ್ಯದಲ್ಲಿ ತೊಡಗಬೇಕೆಂದು ಮಾಹಿತಿ ನೀಡಿದರು.

ಹುಲಿ ಗಣತಿ ಅತ್ಯಂತ ಕಷ್ಟಕರವಾಗಿದ್ದು, ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸುವ ಎಲ್ಲಾ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಹುಲಿಗಳಿಗೆ ಉತ್ತಮ ವಾತಾವರಣ ಕಲ್ಪಿಸಲು ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿಯ ಶ್ರಮ ಅಪಾರವಾದದ್ದು. ಹಾಗೆ ಕಾಡ್ಗಿಚ್ಚು ಕುರಿತು ಗಮನಹರಿಸುವಂತೆ ಸೂಚನೆ ನೀಡಿದ್ದೇವೆ.

• ಹರ್ಷಕುಮಾರ್ ಚಿಕ್ಕನರಗುಂದ, ಡಿಸಿಎಫ್ ನಾಗರಹೊಳೆ ಹುಲಿ ಸಂರಕಿತ ಪ್ರದೇಶ

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago