Andolana originals

ಹನೂರು ತಾಲ್ಲೂಕಿನಲ್ಲಿ ನಾಲ್ಕು ದಿನಗಳ ಸಂಕ್ರಾಂತಿ

ಮಹದೇಶ ಎಂ. ಗೌಡ

ಕ್ಯಾಲೆಂಡರ್ ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿ. ಈ ಹಬ್ಬವೆಂದರೆ ನೆನಪಿಗೆ ಬರುವುದು ಎಳ್ಳು ಬೆಲ್ಲದ ರುಚಿ. ಕಬ್ಬಿನ ಸಿಹಿ. ಈ ಹಬ್ಬವು ನಾಲ್ಕು ದಿನಗಳ ಕಾಲ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಮಿಳುನಾಡಿಗೆ ಹೊಂದಿಕೊಂಡಂತೆ ಇರುವ ಕೆಲ ಗ್ರಾಮ ಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂಬು ದಾಗಿ ಆಚರಿಸುವುದು ವಿಶೇಷವಾಗಿದೆ.

ಸಂಕ್ರಾಂತಿ ಹಬ್ಬವನ್ನು ಮಲೆ ಮಹದೇಶ್ವರ ಬೆಟ್ಟ, ಮಾರ್ಟಳ್ಳಿ ಸುತ್ತಮುತ್ತ ನಾಲ್ಕು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಪ್ರತಿದಿನವೂ ಕೂಡ ವಿಶೇಷವಾಗಿ ಆಚರಿಸುವುದು ಸಂಪ್ರದಾಯ.

ಸಂಕ್ರಾಂತಿಯ ಮೊದಲನೇ ದಿನ ಭೋಗಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಕತ್ತಲು ಕಲ್ಮಶವನ್ನು ತೊಳೆಯುವ ದಿನ ವಾಗಿದ್ದು, ಈ ದಿನ ಮನೆ ಹೊರಗಡೆ ಬೆರಣಿ ಯಿಂದ ಬೆಂಕಿಯನ್ನು ಹಾಕಿ ಮನೆಯಲ್ಲಿ ರುವ ಬೇಡವಾದ ವಸ್ತುಗಳು ಹರಿದ ಬಟ್ಟೆ ಇನ್ನಿತರ ಸಾಮಗ್ರಿಗಳನ್ನು ಸುಟ್ಟು ಹಾಕಿ ಒಳ್ಳೆಯ ಅಂಶಗಳನ್ನು ಉಳಿಸಿಕೊಳ್ಳುವ ಪ್ರತೀಕವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.

ಎರಡನೇ ದಿನ ಬಾಳು ಬೆಳಗುವ ಸೂರ್ಯನನ್ನು ಆರಾಽಸುತ್ತಾ ಸಿಹಿ ಪೊಂಗಲ್ ಅಥವಾ ಹುಗ್ಗಿಯನ್ನು ಒಲೆಯಲ್ಲಿ ಉಕ್ಕಿಸುವುದು ವಿಶೇಷ.

ಮೂರನೇ ದಿನ ಬಂಧುಗಳು, ಆತ್ಮೀಯರಿಗೆ ಎಳ್ಳು- ಬೆಲ್ಲ ವಿತರಿಸಿ ಸೌಹಾರ್ದ ವಾತಾವರಣವನ್ನು ಉತ್ತೇಜಿಸಲಾಗುತ್ತದೆ. ನಾಲ್ಕನೇ ದಿನ ಜನುವಾರುಗಳ ಮೈ ತೊಳೆದು, ಬಣ್ಣಗಳಿಂದ ಸಿಂಗರಿಸಿ ಸಂಜೆ ವೇಳೆ ಒಣ ಹುಲ್ಲಿಗೆ ಬೆಂಕಿ ಹಾಕಿ, ದನಗಳ ಕಿಚ್ಚು ಹಾಯಿಸಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

30 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

39 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

1 hour ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

2 hours ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

4 hours ago