Andolana originals

ಹನೂರು ತಾಲ್ಲೂಕಿನಲ್ಲಿ ನಾಲ್ಕು ದಿನಗಳ ಸಂಕ್ರಾಂತಿ

ಮಹದೇಶ ಎಂ. ಗೌಡ

ಕ್ಯಾಲೆಂಡರ್ ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿ. ಈ ಹಬ್ಬವೆಂದರೆ ನೆನಪಿಗೆ ಬರುವುದು ಎಳ್ಳು ಬೆಲ್ಲದ ರುಚಿ. ಕಬ್ಬಿನ ಸಿಹಿ. ಈ ಹಬ್ಬವು ನಾಲ್ಕು ದಿನಗಳ ಕಾಲ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಮಿಳುನಾಡಿಗೆ ಹೊಂದಿಕೊಂಡಂತೆ ಇರುವ ಕೆಲ ಗ್ರಾಮ ಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂಬು ದಾಗಿ ಆಚರಿಸುವುದು ವಿಶೇಷವಾಗಿದೆ.

ಸಂಕ್ರಾಂತಿ ಹಬ್ಬವನ್ನು ಮಲೆ ಮಹದೇಶ್ವರ ಬೆಟ್ಟ, ಮಾರ್ಟಳ್ಳಿ ಸುತ್ತಮುತ್ತ ನಾಲ್ಕು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಪ್ರತಿದಿನವೂ ಕೂಡ ವಿಶೇಷವಾಗಿ ಆಚರಿಸುವುದು ಸಂಪ್ರದಾಯ.

ಸಂಕ್ರಾಂತಿಯ ಮೊದಲನೇ ದಿನ ಭೋಗಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಕತ್ತಲು ಕಲ್ಮಶವನ್ನು ತೊಳೆಯುವ ದಿನ ವಾಗಿದ್ದು, ಈ ದಿನ ಮನೆ ಹೊರಗಡೆ ಬೆರಣಿ ಯಿಂದ ಬೆಂಕಿಯನ್ನು ಹಾಕಿ ಮನೆಯಲ್ಲಿ ರುವ ಬೇಡವಾದ ವಸ್ತುಗಳು ಹರಿದ ಬಟ್ಟೆ ಇನ್ನಿತರ ಸಾಮಗ್ರಿಗಳನ್ನು ಸುಟ್ಟು ಹಾಕಿ ಒಳ್ಳೆಯ ಅಂಶಗಳನ್ನು ಉಳಿಸಿಕೊಳ್ಳುವ ಪ್ರತೀಕವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.

ಎರಡನೇ ದಿನ ಬಾಳು ಬೆಳಗುವ ಸೂರ್ಯನನ್ನು ಆರಾಽಸುತ್ತಾ ಸಿಹಿ ಪೊಂಗಲ್ ಅಥವಾ ಹುಗ್ಗಿಯನ್ನು ಒಲೆಯಲ್ಲಿ ಉಕ್ಕಿಸುವುದು ವಿಶೇಷ.

ಮೂರನೇ ದಿನ ಬಂಧುಗಳು, ಆತ್ಮೀಯರಿಗೆ ಎಳ್ಳು- ಬೆಲ್ಲ ವಿತರಿಸಿ ಸೌಹಾರ್ದ ವಾತಾವರಣವನ್ನು ಉತ್ತೇಜಿಸಲಾಗುತ್ತದೆ. ನಾಲ್ಕನೇ ದಿನ ಜನುವಾರುಗಳ ಮೈ ತೊಳೆದು, ಬಣ್ಣಗಳಿಂದ ಸಿಂಗರಿಸಿ ಸಂಜೆ ವೇಳೆ ಒಣ ಹುಲ್ಲಿಗೆ ಬೆಂಕಿ ಹಾಕಿ, ದನಗಳ ಕಿಚ್ಚು ಹಾಯಿಸಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago