Andolana originals

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ

೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು

ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಗುಂಡಿನ ದಾಳಿ ಯಲ್ಲಿ ೩ ಮಂದಿ ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿ ರುವ ಘಟನೆ ಮಾದರಿಯಲ್ಲಿ ೨೦೧೪ರಿಂದ ೨೦೨೪ರವರೆಗೆ ಮೂರು ಘಟನೆಗಳು ನಡೆದಿವೆ.

ಪಾಲಾರ್ ಗಡಿಯಲ್ಲಿ ಘಟನೆ: ೨೦೧೪ರ ಅಕ್ಟೋಬರ್ ತಿಂಗಳಲ್ಲಿ ಕಾವೇರಿ ವನ್ಯಜೀವಿಧಾಮದ ಪಾಲಾರ್ ಗಡಿ ಪ್ರದೇಶದಲ್ಲಿ ಕರ್ನಾಟಕದ ಅರಣ್ಯ ಸಿಬ್ಬಂದಿ ಮತ್ತು ತಮಿಳುನಾಡಿನವರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಪಳನಿ ಎಂಬ ವ್ಯಕ್ತಿ ಗುಂಡೇಟಿನಿಂದ ಕಾವೇರಿ ಹಿನ್ನೀರಿನಲ್ಲಿ ಬಿದ್ದಿದ್ದ. ನಂತರ ಆತನ ಮೃತದೇಹ ಪತ್ತೆಯಾಗಿತ್ತು. ಮೃತದೇಹದ ಕೆಲವು ಭಾಗಗಳಿಗೆ ಹಾನಿಯಾಗಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಕಚೇರಿ ಮತ್ತು ವಸತಿಗೃಹದ ಮೇಲೆ ದಾಳಿ ನಡೆಸಿ, ವಾಹನಕ್ಕೆ ಬೆಂಕಿ ಹಚ್ಚಿದ್ದರು. ಬಂದೂಕು ಮತ್ತು ದಂತವನ್ನೂ ಕೊಂಡೊಯ್ದಿದ್ದರು ಎಂದು ವರದಿಯಾಗಿತ್ತು.

ಅರಣ್ಯ ಇಲಾಖೆಯು ಅವರು ಬೇಟೆಗಾರರು ಎಂದು ಹೇಳಿದ್ದರೆ, ಕುಟುಂಬದವರು ಮೀನು ಹಿಡಿಯಲು ಹೋಗಿದ್ದರು ಎಂದು ವಾದಿಸಿದ್ದರು. ಪಳನಿಯ ಪತ್ನಿಯ ದೂರಿನ ಆಧಾರದ ಮೇಲೆ ಅರಣ್ಯ ಸಿಬ್ಬಂದಿ ವಿರುದ್ಧ ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆಗಲೂ ಶವವನ್ನು ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು.

ಅಡಿಪಾಲಾರ್‌ನಲ್ಲಿ ಘಟನೆ: ೨೦೨೩ರ ಫೆಬ್ರವರಿ ೧೪ರ ರಾತ್ರಿ ಗೋಪಿನಾಥಂ ವಲಯದ ಅಡಿಪಾಲಾರ್ ಅರಣ್ಯದಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿತ್ತು. ಅರಣ್ಯ ಸಿಬ್ಬಂದಿ ಹೇಳಿಕೆಯ ಪ್ರಕಾರ, ಬೇಟೆಗಾರರು ೨೦ರಿಂದ ೨೫ ಮೀಟರ್ ದೂರದಿಂದ ಗುಂಡು ಹಾರಿಸಿದಾಗ ಸಿಬ್ಬಂದಿ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದ್ದರು. ಆರೋಪಿ ಎನ್ನಲಾಗಿದ್ದ ರಾಜು ಎಂಬಾತ ನದಿಗೆ ಜಿಗಿದಿದ್ದರು.

ಸ್ಥಳದಲ್ಲಿ ಎರಡು ಜಿಂಕೆಗಳ ಕಳೇಬರ, ಒಂದು ನಾಡಬಂದೂಕು, ಟಾರ್ಚ್, ಮೊಬೈಲ್ ಮತ್ತು ಪಾದರಕ್ಷೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಗುಂಡಿನ ಚಕಮಕಿಯ ಬಳಿಕ ನದಿಗೆ ಹಾರಿದ್ದ ರಾಜು ಅವರ ಮೃತದೇಹ ಮೂರು ದಿನಗಳ ನಂತರ ಪಾಲಾರ್ ನದಿಯಲ್ಲಿ ಪತ್ತೆಯಾಗಿತ್ತು. ಕುಟುಂಬದವರು ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದರು. ೨೦೧೪ರಲ್ಲಿ ನಡೆದ ಚಕಮಕಿಯಲ್ಲಿಯೂ ರಾಜು ಭಾಗಿಯಾಗಿದ್ದನೆಂದು ಅರಣ್ಯ ಇಲಾಖೆಯ ಮೂಲಗಳು ಹೇಳಿದ್ದವು.

ಬಂಡೀಪುರದಲ್ಲಿ ಘಟನೆ: ೨೦೨೩ರ ನವೆಂಬರ್‌ನಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಅರಣ್ಯ ಸಿಬ್ಬಂದಿಯ ಗುಂಡಿಗೆ ಭೀಮನಬೀಡು ಗ್ರಾಮದ ಮಧು ಎಂಬ ಯುವಕ ಬಲ್ಲಿಯಾಗಿದ್ದ. ಎಂಟರಿಂದ ಹತ್ತು ಮಂದಿಯ ತಂಡ ಕಡವೆಯನ್ನು ಬೇಟೆಯಾಡಿತ್ತು. ಸಿಬ್ಬಂದಿ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ ಎದುರಿನಿಂದ ಗುಂಡಿನ ದಾಳಿ ಮುಂದುವರಿದ ಕಾರಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಯಿತು ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದರು. ಕಡವೆ ಕಳೇಬರ ಮತ್ತು ಬಂದೂಕು ವಶಪಡಿಸಿಕೊಂಡಿದ್ದಾಗಿ ತಿಳಿಸಿದ್ದರು. ಹನೂರಿನ ಈಗಿನ ಪ್ರಕರಣದಲ್ಲಿಯೂ ಇದೇ ಮಾದರಿ ಮರುಕಳಿಸಿರುವುದರಿಂದ ಹಳೆಯ ಪ್ರಕರಣಗಳ ತನಿಖಾ ವರದಿ ಮತ್ತು ಅಂತಿಮ ನ್ಯಾಯಿಕ ಫಲಿತಾಂಶಗಳನ್ನು ಮರುಪರಿಶೀಲಿಸುವ ಅಗತ್ಯವಿದೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

13 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

19 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago