Categories: Andolana originals

ಹೆಸರಿಗೆ ಮಾತ್ರ ‘ಮನೆ ಮನೆಗೆ ಗಂಗೆ’ ಯೋಜನೆ

ಪಿ. ಪಟ್ಟಣ: ಜೆಜೆಎಂ ಯೋಜನೆಯಡಿ ಟೆಂಡರ್ ಆಗಿ ವರ್ಷ ಸಮೀಪಿಸಿದರೂ ಪ್ರಾರಂಭವಾಗದ ಕಾಮಗಾರಿ

ಮಹೇಶ ಕೋಗಿಲವಾಡಿ
ಪಿರಿಯಾಪಟ್ಟಣ: ‘ಮನೆ ಮನೆಗೆ ಗಂಗೆ’ ಎಂಬ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯಿಂದ ಪ್ರತಿ ಮನೆಗೂ ನೀರನ್ನು ಒದಗಿಸುವ ಯೋಜನೆಯಲ್ಲಿ ಅನೇಕ ಲೋಪಗಳು ಕಂಡು ಬರುತ್ತಿವೆ ಎಂಬ ಆರೋಪ ಕೇಳಿಬರುತ್ತಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಕೋಗಿಲವಾಡಿ ಗ್ರಾಮದ ವಡ್ಡನಕಟ್ಟೆ ಹಾಡಿ ಜನರಿಗೆ ಹಾಗೂ ಸುಬ್ಬನಕಟ್ಟೆ ಗ್ರಾಮದ ಜನರಿಗೆ ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಒದಗಿಸುವ ಕಾಮಗಾರಿ ವರ್ಷವಾದರೂ ಆರಂಭವಾಗಿಲ್ಲ.

೪೩,೨೮,೦೦೦ ರೂ. ವೆಚ್ಚದಲ್ಲಿ ನಂಜುಂಡೇಗೌಡ ಎಂಬ ಗುತ್ತಿಗೆದಾರ ರಿಗೆ ಕಾಮಗಾರಿಯ ಟೆಂಡರ್ ಆಗಿ, ೨೦೨೩ರ ಡಿ. ೧೩ರಂದು ಕಾಮಗಾರಿ ಪ್ರಾರಂಭಿಸಲು ಸರ್ಕಾರ ಆದೇಶ ನೀಡಿದ್ದು, ಇದಾಗಿ ಒಂದು ವರ್ಷ ಕಳೆಯುತ್ತಿದ್ದರೂ ಕಾಮಗಾರಿಯನ್ನು ಪ್ರಾರಂಭಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರಿಂದಾಗಿ ಗ್ರಾಮಗಳ ನಿವಾಸಿಗಳು ಪ್ರತಿನಿತ್ಯ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ, ಗುತ್ತಿಗೆದಾರರು ಮತ್ತು ಅಽಕಾರಿಗಳು ಕೇವಲ ನಾಮ-ಲಕಗಳನ್ನು ಅಳವಡಿಸಿ ಕಾಮಗಾರಿ ನಡೆಸದೆ ಮೌನವಾಗಿ ರುವುದು ಜನರಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ.

ಅಲ್ಲದೆ ಫಲಕಗಳಲ್ಲಿಯೂ ಅನೇಕ ದೋಷಗಳು ಕಂಡುಬರುತ್ತಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೂ ತಾರದೆ ಅಧ್ಯಕ್ಷರು ಮತ್ತು ಸದಸ್ಯರ ಹೆಸರನ್ನು ತಪ್ಪಾಗಿ ನಮೂದಿಸಲಾಗಿದೆ. ಬೇರೆ ಗ್ರಾಮದ ಸದಸ್ಯರು ಮತ್ತು ಅಧ್ಯಕ್ಷರ ಹೆಸರನ್ನು ಬರೆಯಲಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಅಧಿಕಾರಿಗಳನ್ನು ಕೇಳಿದರೆ ಮೂಲ ಗುತ್ತಿಗೆದಾರರು ಯಾರೆಂಬುದೇ ನಮಗೆ ತಿಳಿದಿಲ್ಲ. -ಲಕಗಳನ್ನು ಅಳವಡಿಸುವ ಸಂದರ್ಭ ದಲ್ಲಿ ಕೆಲಸವನ್ನು ಪ್ರಾರಂಭಿಸುವ ದಿನದ ಬಗ್ಗೆ ಕೇಳಿದಾಗ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ಟೆಂಡರ್ ಆದ ಆರು ತಿಂಗಳ ಒಳಗೆ ಕಾಮಗಾರಿ ಪ್ರಾರಂಭಿಸಬೇಕು ಎಂಬ ಸರ್ಕಾರದ ಆದೇಶವಿದ್ದರೂ ಒಂದು ವರ್ಷ ಕಳೆದರೂ ಕೆಲಸ ಪ್ರಾರಂಭವಾಗದೆ ಇರುವುದಕ್ಕೆ ಕಾರಣವೇನು ಎಂಬುದು ತಿಳಿದಿಲ್ಲ. ಆದ್ದರಿಂದ ಸಂಬಂಧಪಟ್ಟ ಹಿರಿಯ ಅಽಕಾರಿಗಳು ಮತ್ತು ಸರ್ಕಾರ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವ ಜನಿಕರ ಆಗ್ರಹವಾಗಿದೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಸರ್ಕಾರ ನೀಡು ವಂತಹ ಅನೇಕ ಮೂಲಸೌಲಭ್ಯಗಳು ನಮಗೆ ದೊರೆಯುತ್ತಿಲ್ಲ. ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಪ್ರತಿನಿತ್ಯ ತೊಂದರೆಪಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಾಗಲಿ, ಯಾರೂ ಕೂಡ ನಮ್ಮ ನೋವನ್ನು ಕೇಳುತ್ತಿಲ್ಲ. -ಸ್ವಾಮಿ, ಸುಬ್ಬನಕಟ್ಟೆ ನಿವಾಸಿ

ಟೆಂಡರ್ ಆಗಿ ಒಂದು ವರ್ಷ ಮುಗಿಯುವ ಹಂತದಲ್ಲಿದ್ದರೂ ಕಾಮಗಾರಿಯನ್ನು ಪ್ರಾರಂಭಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. -ಲಕಗಳನ್ನು ಅಳವಡಿಸುವ ಸಂದರ್ಭದಲ್ಲಿ ನಮ್ಮ ಗ್ರಾಪಂ ಗಮನಕ್ಕೂ ತಾರದೆ ಕೆಲಸ ನಿರ್ವಹಿಸುತ್ತಿರುವುದು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ.
-ಮೋಹನ್ ಕುಮಾರ್, ಪಿಡಿಒ, ಚೌತಿ ಗ್ರಾಪಂ

 

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

7 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

7 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

12 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago