Andolana originals

ಹೆಸರಿಗಷ್ಟೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ!

ಮಹೇಂದ್ರ ಹಸಗೂಲಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ 

ಗುಂಡ್ಲುಪೇಟೆ: ರಾಜ್ಯ ಸರ್ಕಾರ ಮೊದಲು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿತ್ತು. ಈಗ ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಯಾದ ನಂತರ ಗಂಡು ಮಕ್ಕಳಿಗೂ (ವಿದ್ಯಾರ್ಥಿಗಳಿಗೆ) ಬಸ್ ಪ್ರಯಾಣ ಉಚಿತ ಎಂದು ಘೋಷಣೆ ಮಾಡಿದ್ದರೂ ಹಣ ಪಾವತಿಸಿಕೊಂಡು ಬಸ್ ಪಾಸ್ ವಿತರಿಸುತ್ತಿರು ವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರ ಘೋಷಣೆ ಹೊರಡಿಸಿದ ನಂತರವಾದರೂ ಇದರ ಬಗ್ಗೆ ಶಿಕ್ಷಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಬಡ ವಿದ್ಯಾರ್ಥಿಗಳಿಗೆ ಉಚಿತ ಯೋಜನೆಯ ಅವಕಾಶ ಸಿಗುವುದಿಲ್ಲ ಎಂಬುದು ಪೋಷಕರ ಅನಿಸಿಕೆಯಾಗಿದೆ.

ಸೈಬರ್ ಸೆಂಟರ್‌ಗೆ ತೆರಳಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಿದರೆ ಅದು ಕೆಎಸ್‌ಆರ್‌ಟಿಸಿ ಮೂಲಕ ಪಾಸ್ ಅನ್ನು ಶಾಲೆಗೆ, ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಶಾಲಾ ವಿದ್ಯಾರ್ಥಿಗಳಿಂದ ಬಸ್ ಪಾಸ್‌ಗೆ ವಾರ್ಷಿಕ ೭೫೦ ರೂ. ಹಾಗೂ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಂದ ೧,೫೦೦ ರೂ. ಪಡೆದುಕೊಂಡು ಬಸ್ ಪಾಸ್ ವಿತರಿಸಲಾಗುತ್ತಿದೆ.

ಸರ್ಕಾರದಿಂದ ಆದೇಶ ಬಾರದಿದ್ದರೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿರುವುದು ವ್ಯರ್ಥ. ಅಲ್ಲಿಯವರೆಗೆ ಎಲ್ಲರೂ ಬಸ್ ಪಾಸ್ ಮಾಡಿಸಿರುತ್ತಾರೆ. ಸರ್ಕಾರ ಹಾಗೂ ಕೆಎಸ್ ಆರ್‌ಟಿಸಿ ನಿಗಮದ ವಿಳಂಬ ನೀತಿ ಸರಿಯಲ್ಲ ಎಂದು ಪೋಷಕರು ಕಿಡಿಕಾರಿದ್ದಾರೆ.

” ಸರ್ಕಾರದಿಂದ ಈಗಾಗಲೇ ಘೋಷಣೆ ಮಾಡಿರುವಂತೆ ಉಚಿತ ಬಸ್ ಪಾಸ್ ಆದೇಶವನ್ನು ಶನಿವಾರ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಮಾಡಿಸದೆ ಆದೇಶದ ಪ್ರತಿ ಬರುವವರೆಗೆ ಕಾಯಬೇಕು.”

-ಎಚ್.ಎಂ.ಗಣೇಶ್ ಪ್ರಸಾದ್, ಶಾಸಕ

” ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯದ ಬಗ್ಗೆ ನಮಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಆದೇಶ ಬಂದರಷ್ಟೇ ನಾವು ಪಾಸ್ ವಿತರಿಸದೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬಹುದು. ಇಲ್ಲದಿದ್ದರೆ ಹಣ ನೀಡಿ ಪಾಸ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ.”

ಕುಮಾರ್ ನಾಯಕ್, ಸಾರಿಗೆ ಘಟಕದ ವ್ಯವಸ್ಥಾಪಕ 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

1 hour ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago