Andolana originals

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ

೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ

ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ ಮಾತ್ರ ಅನ್ವಯ

ಮೈಸೂರು: ಯಾರೋ ಮಾಡಿದ ತಪ್ಪಿಗೆ ಉತ್ತೀರ್ಣರಾದರೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರಮಾಣಪತ್ರ ಸಿಗದೆ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಚಾತಕಪಕ್ಷಿಯಂತೆ ಕಾದು ಕುಳಿತಿದ್ದ ಸಾವಿರಾರು ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ವನವಾಸಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸ್ನಾತಕ-ಸ್ನಾತಕೋತ್ತರ ಪದವಿ ಪಡೆದು ಸರ್ಕಾರಿ ಅಥವಾ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಒಂದು ಕೆಲಸ ಪಡೆಯಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ದೊರೆಯದೆ ವಯಸ್ಸಿನ ಮಿತಿ ಮೀರುವ ಹಂತಕ್ಕೆ ತಲುಪಿದ್ದಾಗಲೇ ಮುಕ್ತ ವಿವಿ ಕೈಗೊಂಡಿರುವ ಮಹತ್ವದ ತೀರ್ಮಾನ ವಿದ್ಯಾರ್ಥಿಗಳ ಮನದಲ್ಲಿ ಸಂತಸ ಮೂಡಿಸಿದೆ.

ರಾಜ್ಯದಲ್ಲೇ ಏಕೈಕ ದೂರ ಶಿಕ್ಷಣ ಕೊಡುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ನಿಯಮಾವಳಿಗಳನ್ನು ಉಲ್ಲಂಸಿ ವೈದ್ಯಕೀಯ, ತಾಂತ್ರಿಕ ಕೋರ್ಸ್ ಗಳನ್ನು ಆರಂಭಿಸಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗಿತ್ತು. ಇದಲ್ಲದೆ, ಹೊರ ರಾಜ್ಯ, ಹೊರ ದೇಶಗಳ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಯುಜಿಸಿ ತಾಂತ್ರಿಕ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವ ಜತೆಗೆ, ರಾಜ್ಯದ ಒಳಗೆ ಸೀಮಿತವಾಗಿ ನಡೆಸುವಂತೆ ಸೂಚನೆ ನೀಡಿತ್ತು. ಹೀಗಿದ್ದರೂ ನಿಯಮ ಉಲ್ಲಂಸಿ ಪ್ರವೇಶಾತಿ, ಒಡಂಬಡಿಕೆ ಮುಂದುವರಿಸಿದ್ದರಿಂದಾಗಿ ಯುಜಿಸಿಯು ಮಾನ್ಯತೆಯನ್ನು ರದ್ದುಪಡಿಸಿತ್ತು. ಇದರಿಂದ ಕರ್ನಾಟಕದ ಏಕೈಕ ದೂರ ಶಿಕ್ಷಣ ಸಂಸ್ಥೆ ಎಂದೇ ಹೆಸರಾಗಿದ್ದ ಮುಕ್ತ ವಿವಿಯು ಸಂಕಷ್ಟಕ್ಕೆ ಸಿಲುಕಿತ್ತಲ್ಲದೆ, ವಿದ್ಯಾರ್ಥಿಗಳ ಭವಿಷ್ಯ ಕೂಡ ಡೋಲಾಯಮಾನವಾಗಿತ್ತು.

ನಂತರದ ದಿನಗಳಲ್ಲಿ ಇನ್ನೇನು ಮುಕ್ತ ವಿವಿ ಕಥೆ ಮುಗಿದು ಹೋಯಿತು ಎನ್ನುವ ಹಂತಕ್ಕೆ ತಲುಪಿದ್ದಾಗ ಕುಲಪತಿಗಳಾಗಿದ್ದ ಪ್ರೊ.ಡಿ.ಶಿವಲಿಂಗಯ್ಯ ಅವರು ಕೇಂದ್ರಸರ್ಕಾರ, ಯುಜಿಸಿಯೊಂದಿಗೆ ನಿರಂತರವಾದ ಪತ್ರ ವ್ಯವಹಾರಗಳನ್ನು ಮಾಡುವ ಜತೆಗೆ, ರಾಜ್ಯಸರ್ಕಾರದ ಉನ್ನತ ಶಿಕ್ಷಣ ಸಚಿವರು, ಸಂಸದರ ಮೂಲಕ ಒತ್ತಡಹೇರಿದ್ದರಿಂದಾಗಿ ಮಾನ್ಯತೆಯನ್ನು ನೀಡಲಾಯಿತು. ಆದರೆ, ಹೊಸದಾಗಿ ಮಾನ್ಯತೆ ನೀಡಿದ ವಿವಿಯು ೨೦೧೩-೧೪ ಮತ್ತು ೨೦೧೪-೧೫ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಸಿ ನೋಂದಣಿ ಮಾಡಿಕೊಂಡಿದ್ದರಿಂದಾಗಿ ನವೀಕರಿಸಿರಿಲ್ಲ. ಹೀಗಾಗಿ, ಈ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೂ ಪ್ರಮಾಣಪತ್ರ ವಿತರಿಸಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳು ನಿರಂತರವಾಗಿ ಒತ್ತಡ ಹೇರಿದರೂ ಮುಕ್ತ ವಿವಿಯು ಯಾವುದೇ ತೀರ್ಮಾನ ಮಾಡಲಾಗದೆ ಕೈಕಟ್ಟಿ ಕೂರುವಂತಾಗಿತ್ತು. ಆದರೆ, ಈಗಿನ ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ಅವರು ಯುಜಿಸಿಯೊಂದಿಗೆ ನಿರಂತರ ಪತ್ರ ವ್ಯವಹಾರ ಮಾಡುವ ಜತೆಗೆ, ಅಂದು ಆಗಿದ್ದ ಎಲ್ಲಾ ಬೆಳವಣಿಗೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದರು. ಯುಜಿಸಿಯ ನಿಯಮಾವಳಿ ಪಾಲಿಸುವ ಜತೆಗೆ, ಹೊಸ ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸುವ ಮೂಲಕ ಇಗ್ನೋಕ್ಕಿಂತಲೂ ಮೇಲುಗೈ ಸಾಧಿಸುವ ಮಟ್ಟಕ್ಕೆ ತಂದು ನಿಲ್ಲಿಸಿದ್ದರು. ಇದೆಲ್ಲದರ ಬೆಳವಣಿಗೆಯ ನಡುವೆ ೨೦೧೩-೧೪ ಮತ್ತು ೨೦೧೪-೧೫ನೇ ಸಾಲಿನಲ್ಲಿ ನೋಂದಣಿ ಮಾಡಿಕೊಂಡಿದ್ದ ೯೬ ಸಾವಿರ ವಿದ್ಯಾರ್ಥಿಗಳಲ್ಲಿ ಇನ್‌ಹೌಸ್‌ನಲ್ಲಿ ನೋಂದಣಿಯಾಗಿದ್ದ ೫೬ ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ವಿತರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ವಿವಿ ಸಿಂಡಿಕೇಟ್ ತೀರ್ಮಾನಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವ ಜತೆಗೆ ಜನವರಿ ತಿಂಗಳಲ್ಲಿ ನಡೆಯುವ ಘಟಿಕೋತ್ಸವದಲ್ಲೇ ಪ್ರಮಾಣಪತ್ರ ವಿತರಣೆಗೂ ಮುಹೂರ್ತ ನಿಗದಿಪಡಿಸುವಂತೆ ಹೇಳಿರುವುದರಿಂದ ದಶಕಗಳಿಂದ ಕಾದು ಕುಳಿತಿದ್ದ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿದೆ.

೫೨ ಸಾವಿರ ವಿದ್ಯಾರ್ಥಿಗಳಿಗೆ ವಿತರಣೆ: ೨೦೧೩-೧೪ ಮತ್ತು ೨೦೧೪-೧೫ನೇ ಸಾಲಿನಲ್ಲಿ ಬಿಎ, ಬಿಕಾಂ, ಬಿ.ಲಿಬ್, ಬಿಎಸ್‌ಸಿ, ಬಿ.ಇಡಿ ಮತ್ತು ಬಿ. ಇಡಿ ಸ್ಪೆಷಲ್ ಮತ್ತು ಸರ್ಟಿಫಿಕೇಟ್, ಸ್ನಾತಕ ಪದವಿ, ಎಂ.ಎ, ಎಂಕಾಂ,ಎಂಬಿಎ, ಎಂ.ಇಡಿ, ಎಲ್ಲಾ ಎಂಎಸ್ಸಿ, ಎಂ.ಲಿಬ್ ಐಎಸ್‌ಸಿ, ಪಿ.ಜಿ.ಡಿಪ್ಲೊಮಾ ಕಾರ್ಯಕ್ರಮಗಳ ಸ್ನಾತಕೋತ್ತರ ಪದವಿಯಲ್ಲಿ ೯೬ ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ಈಗ ವೈದ್ಯಕೀಯ, ತಾಂತ್ರಿಕ ಕೋರ್ಸ್‌ಗಳನ್ನು ಹೊರತುಪಡಿಸಿ ಸ್ನಾತಕ-ಸ್ನಾತಕೋತ್ತರ ಪದವಿಯ ಇನ್‌ಹೌಸ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದ ೫೬ಸಾವಿರ ವಿದ್ಯಾರ್ಥಿ ಗಳಿಗೆ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಇದರಲ್ಲಿ ಪಿಜಿ ೪೩,೮೦೦, ಯುಜಿ ೭,೮೦೦ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ. ಇನ್ನುಳಿದ ೪೪ ಸಾವಿರ ವಿದ್ಯಾರ್ಥಿಗಳ  ಬಗ್ಗೆ ರಾಜ್ಯಪಾಲರು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೂಲಗಳು ಹೇಳಿವೆ.

” ೨೦೧೩-೧೪ ಮತ್ತು ೨೦೧೪-೧೫ನೇ ಸಾಲಿನಲ್ಲಿ ಇನ್‌ಹೌಸ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದ ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದರಿಂದ ಪ್ರಮಾಣ ಪತ್ರವನ್ನು ನೀಡಲು ರಾಜ್ಯಪಾಲರು ಸಮ್ಮತಿಸಿದ್ದಾರೆ. ಅಂದು ನೋಂದಣಿಯಾಗಿದ್ದ ೯೬ ಸಾವಿರ ವಿದ್ಯಾರ್ಥಿಗಳಲ್ಲಿ ೫೨ ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಪ್ರಮಾಣಪತ್ರ ವಿತರಿಸಲಾಗುತ್ತದೆ.”

-ಪ್ರೊ.ಶರಣಪ್ಪ ವಿ.ಹಲಸೆ, ಕುಲಪತಿ, ಮುಕ್ತ ವಿವಿ

ಆಂದೋಲನ ಡೆಸ್ಕ್

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

12 mins ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

22 mins ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

32 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

49 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

1 hour ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago