Andolana originals

ನೀಳವಾದ ಕೇಶರಾಶಿಗೆ ಭೃಂಗರಾಜ

• ರಮ್ಯ ಅರವಿಂದ್

ನಾವು ಬಾಲ್ಯದಿಂದಲೂ ಟಿವಿ ಹಾಗೂ ರೇಡಿಯೋ ಜಾಹೀರಾತುಗಳಲ್ಲಿ ‘ನೀಳ ಕೂದಲಿಗಾಗಿ ಶೃಂಗರಾಜ ತೈಲ ಬಳಸಿ’ ಎಂಬು ದನ್ನು ನೋಡಿರುತ್ತೇವೆ, ಅದರ ಬಗ್ಗೆ ಕೇಳಿರುತ್ತೇವೆ. ಈ ಶೃಂಗರಾಜ ಸೊಪ್ಪಿಗೆ ನಾವು ಕನ್ನಡದಲ್ಲಿ ‘ಗರಗದ ಸೊಪ್ಪು’ ಎಂದು ಕರೆಯುತ್ತೇವೆ.

ಶೃಂಗರಾಜ ಒಂದು ರೀತಿಯಲ್ಲಿ ‘ಗಿಡಮೂಲಿಕೆಗಳ ರಾಜ’ ಎಂದರೆ ತಪ್ಪಾಗ ಲಾರದು. ಸಾಮಾನ್ಯವಾಗಿ ಇದು ಎಲ್ಲೆಡೆ ಕಳೆಯ ಸಸ್ಯಗಳಂತೆ ಬೆಳೆದುಕೊಂಡಿರುತ್ತದೆ. ಇದು ನೈಸರ್ಗಿಕವಾಗಿ ಕಪ್ಪು ವರ್ಣದ ಗುಣವನ್ನು ಹೊಂದಿದ್ದು, ಕೂದಲಿಗೆ ಬಣ್ಣ ಕೊಡುವ ಮತ್ತು ತಲೆಕೂದಲನ್ನು ಸೋಂಪಾಗಿ ಬೆಳೆಸುವ ಗುಣ ಹೊಂದಿದೆ. ಆದ್ದರಿಂದಲೇ ಇದನ್ನು ಸಂಸ್ಕೃತದಲ್ಲಿ ‘ಕೇಶರಂಜನ’ ಅಥವಾ ‘ಕೇಶರಾಜ’ ಎಂದು ಕರೆಯಲಾಗುತ್ತದೆ.

ಶೃಂಗರಾಜ ಗಿಡಮೂಲಿಕೆಯಲ್ಲಿಯೂ 2 ವಿಧಗಳಿವೆ. ಒಂದು ಹಳದಿ ಬಣ್ಣದ ಹೂ ಬಿಡುವ ಗಿಡವಾದರೆ ಮತ್ತೊಂದು ಬಿಳಿ ಬಣ್ಣದ ಹೂ ಬಿಡುತ್ತದೆ. ಇದರಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು, ಪ್ರಾಚೀನ ಕಾಲದಿಂದಲೂ ಆಯುರ್ವೇದದಲ್ಲಿ ವಿವಿಧ ಉದ್ದೇಶಗಳಿಗಾಗಿ ಈ ಗಿಡಮೂಲಿಕೆಯನ್ನು ಬಳಸಲಾಗುತ್ತಿದೆ.

ಕೆಲ ಅಧ್ಯಯನಗಳ ಪ್ರಕಾರ ಭ್ರಂಗರಾಜ ಗಿಡಮೂಲಕೆಯ ತೈಲವು ನೆತ್ತಿ ಹಾಗೂ ಕೂದಲಿನ ಬೇರುಗಳಿಗೆ ಪುಷ್ಟಿಯನ್ನು ನೀಡಿ ರಕ್ತ ಪರಿಚಲನೆಯನ್ನು ಹೆಚ್ಚುಸುವಲ್ಲಿ ಸಹಕಾರಿಯಾಗಿದೆ. ಇದರಿಂದಾಗಿ ದಟ್ಟವಾದ ಕೇಶರಾಶಿ ಹಾಗೂ ಕೂದಲಿನ ಕಾಂತಿಯನ್ನೂ ಹೆಚ್ಚಿಸುವಲ್ಲಿ ಈ ಭ್ರಂಗರಾಜವು ಹೆಚ್ಚು ಪರಿಣಾಮಕಾರಿಯಾಗಿದೆ. ಭ್ರಂಗರಾಜದಿಂದ ತಯಾರಿಸಿದ ತೈಲವನ್ನು ಕೂದಲಿಗೆ ಲೇಪಿಸಿ ವೃತ್ತಾಕಾರದ ಚಲನೆಯಲ್ಲಿ 10 ನಿಮಿಷಗಳ ಕಾಲ ಮಸಾಜ್ ಮಾಡುವುದರಿಂದ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ.

ಶೃಂಗರಾಜ ಗಿಡದಿಂದ ತೈಲವನ್ನು ತಯಾರಿಸುವ ವಿಧಾನ: ಈ ಭ್ರಂಗರಾಜ ತೈಲವನ್ನು ನಾವು ಮನೆಯಲ್ಲಿಯೇ ತಯಾರಿಸಿ ಕೊಳ್ಳಬಹುದು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಪ್ರಮಾಣದಲ್ಲಿ ಭಂಗರಾಜ ಎಲೆಗಳನ್ನು ಸಂಗ್ರಹಿಸಿ, ಈ ಎಲೆಗಳನ್ನು 2ರಿಂದ 3 ಸಲವಾ ದರೂ ಶುದ್ಧನೀರಿನಿಂದ ಚೆನ್ನಾಗಿ ತೊಳೆದು, ನಂತರ ಒಂದು ಹತ್ತಿ ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಸುಮಾರು ಒಂದು ತಾಸು ಒಣಗಿಸಬೇಕು. ನಂತರ ಒಂದು ಪಾತ್ರೆಯಲ್ಲಿ (ಕಬ್ಬಿಣದಾದರೇ ಸೂಕ್ತ) ಒಂದು ಲೀ. ಕೊಬ್ಬರಿ ಎಣ್ಣೆ ಅಥವಾ ಎಳ್ಳಿನ ಎಣ್ಣೆಯನ್ನು ಹಾಕಿ, ಒಣಗಿಸಿದ ಎಲೆಗಳನ್ನು ಮಿಶ್ರಣ ಮಾಡಿ, ಒಲೆಯ ಮೇಲಿಟ್ಟು ಕಡಿಮೆ ಉರಿಯಲ್ಲಿ 8-10 ನಿಮಿಷಗಳ ಕಾಲ ಕುದಿಯಲು ಬಿಡುವುದು. ಎಣ್ಣೆಯು ಗಾಢ ಹಸಿರು ಬಣ್ಣಕ್ಕೆ ಬದಲಾಗುತ್ತದೆ. ಆರಿದ ನಂತರ ಒಂದು ಗಾಜಿನ ಬಾಟಲಿಗೆ ಶೋಧಿಸಿ ಕೊಂಡು, ಆ ತೈಲವನ್ನು ವಾರಕ್ಕೆ ಎರಡು ಬಾರಿ ಯಂತೆ 5-6 ತಿಂಗಳುಗಳ ಕಾಲ ಕೂದಲಿಗೆ ಹಚ್ಚು ವುದರಿಂದ ಒಳ್ಳೆಯ ಫಲಿತಾಂಶ ನಿರೀಕ್ಷಿಸಬಹುದು.

ಅಡುಗೆಯಲ್ಲಿಯೂ ಶೃಂಗರಾಜ ಬಳಸಬಹುದು : ಶೃಂಗರಾಜ ಎಲೆಗಳನ್ನು ಸಣ್ಣಗೆ ಕತ್ತರಿಸಿ ದೋಸೆ ಹಿಟ್ಟಿಗೆ ಬೆರೆಸಿ ದೋಸೆಯನ್ನು ಸವಿಯಬಹುದು. ಅಲ್ಲದೆ ಅಕ್ಕಿ ಹಿಟ್ಟಿನ ಜತೆ ಸ್ವಲ್ಪ ಉಪ್ಪು, ಜೀರಿಗೆ ಸೇರಿಸಿ ಅಕ್ಕಿರೊಟ್ಟಿಯನ್ನೂ ಸಿದ್ಧಪಡಿಸಿ ಸವಿಯ ಬಹುದು. ಇದರಿಂದ ಆರೋಗ್ಯಕ್ಕೂ ಉತ್ತಮ. ಪ್ರತಿಮನೆಯ ಹಿತ್ತಲಿನಲ್ಲಿ ಹಾಗೂ ಪಾಟ್‌ಗಳಲ್ಲಿ ಇಂತಹ ಅಮೂಲ್ಯವಾದ ಗಿಡಮೂಲಿಕೆಯನ್ನು ಬೆಳೆಸುವ ಜತೆಗೆ ಅವುಗಳನ್ನು ನಾವೂ ಉಪಯೋಗಿಸುವುದರಿಂದ ನಮ್ಮ ದೇಹದ ಆರೋಗ್ಯ ಮತ್ತು ಕೂದಲಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು.
abigna.ramya@gmail.com

ಆಂದೋಲನ ಡೆಸ್ಕ್

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

13 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

37 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

57 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago