ಚುಂಚಶ್ರೀ ಪ್ರಶಸ್ತಿ ಪ್ರದಾನ; ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕ
ನಾಗಮಂಗಲ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕದ ಅಂಗವಾಗಿ ಸೆ.೨೪ ಮತ್ತು ೨೫ರಂದು ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳ ನಡೆಯಲಿದೆ.
ಜಾನಪದ ಕಲೆಯನ್ನು ಸಂರಕ್ಷಿಸಿ ಅದರ ಶ್ರೇಯೋಭಿವೃದ್ಧಿಗಾಗಿ ಚಿಂತಿಸುತ್ತಿದ್ದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಶ್ರೀಗಳು ಜನಪದ ಕಲೆ, ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸುವುದರ ಜತೆಗೆ ಕಲಾವಿದರ ಬದುಕನ್ನು ಹಸನುಗೊಳಿಸುವ ಉದ್ದೇಶದಿಂದ ತಮ್ಮ ಪಟ್ಟಾಭಿಷೇಕದ ವಾರ್ಷಿಕ ಮಹೋತ್ಸವವನ್ನು ನಾಡಿನ ಜಾನಪದ ಕಲಾವಿದರಿಗೆ ಅರ್ಪಿಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಜಾನಪದ ಕಲಾಮೇಳ ನಡೆಸಲು ಚಿಂತಿಸಿದ್ದರು. ಅದರಂತೆ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ನಡೆಸುತ್ತಾ ಬಂದಿದ್ದು, ಶ್ರೀಗಳು ನಿಧನರಾದ ನಂತರವೂ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಮುಂದುವರಿದಿದೆ.
ಇದುವರೆಗೂ ೪೫ ಜಾನಪದ ಕಲಾಮೇಳಗಳು ಮೇಳೈಸಿದ್ದು, ೪೬ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳವನ್ನು ನಡೆಸಲು ಶ್ರೀ ಮಠ ಸಜ್ಜಾಗಿದೆ. ಈ ವೇಳೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಹಾಗೂ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗುರು ಸಂಸ್ಮರಣೋತ್ಸವ ಸಮಾರಂಭವೂ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಕಲಾವಿದರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ೧೫ ಸಾವಿರಕ್ಕೂ ಹೆಚ್ಚು ಮಂದಿ ಜಾನಪದ ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರದರ್ಶಿಸುವ ನಿರೀಕ್ಷೆ ಇದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ಸೆ.೨೪ರ ಬೆಳಿಗ್ಗೆ ೧೦ ಗಂಟೆಗೆ ಶ್ರೀಗಳ ಜತೆಗೂಡಿ ಗಣ್ಯರು ಉದ್ಘಾಟಿಸಲಿದ್ದಾರೆ. ಇದೇ ದಿನ ಸಂಜೆ ೮ ಗಂಟೆಗೆ ಕ್ಷೇತ್ರದ ಬಿಜಿಎಸ್ ವೃತ್ತದಿಂದ ಜೋಡಿ ರಸ್ತೆಯಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸರ್ವಾಲಂಕೃತ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಜಾನಪದ ಕಲಾವಿದರ ವರ್ಣರಂಜಿತ ಮೆರವಣಿಗೆ ನಡೆದ ಬಳಿಕ ಸರ್ವಾಲಂಕೃತ ಶ್ರೀ ಕಾಲಭೈರವೇಶ್ವರಸ್ವಾಮಿ ಪುಷ್ಕರಣೆಯಲ್ಲಿ ತೆಪ್ಪೋತ್ಸವ ಜರುಗಲಿದೆ.
ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸೆ.೨೫ರ ಬೆಳಿಗ್ಗೆ ೯.೩೦ ಗಂಟೆಗೆ ಶ್ರೀ ಬಾಲಗಂಗಾಧರನಾಥ ಶ್ರೀಗಳ ೫೨ನೇ ವಾರ್ಷಿಕ ಪಟ್ಟಾಭಿಷೇಕ, ಶ್ರೀ ಗುರು ಸಂಸ್ಮರಣೋತ್ಸವಮತ್ತು ರಾಜ್ಯಮಟ್ಟದ ೪೬ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳದ ಸಮಾರೋಪ ಸಮಾರಂಭ ನಡೆಯಲಿದ್ದು, ಜಾನಪದ ಕ್ಷೇತ್ರದ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
” ಜಾನಪದ ಕಲಾಮೇಳದಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರಿಗೆ ವಸ್ತ್ರ, ಪ್ರಯಾಣ ಭತ್ಯೆ ಹಾಗೂ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು. ಜಾನಪದ ಕಲಾಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಸೆ.೨೩ರ ಬೆಳಿಗ್ಗೆ ೯ ಗಂಟೆಗೆ ಆಗಮಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ನಂತರ ಬಂದವರನ್ನು ನೋಂದಣಿ ಮಾಡಿಕೊಳ್ಳುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ ಜತೆಗೆ ತಮ್ಮ ಜಿಲ್ಲೆಯ ಆದಿಚುಂಚನಗಿರಿ ಶಾಖಾ ಮಠಗಳು ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾಗವಹಿಸುವಿಕೆಯ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು. ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು. ಜಾನಪದ ಹಾಡುಗಾರರ ತಂಡದಲ್ಲಿ ಕನಿಷ್ಠ ೫ ಮಂದಿ, ಗರಿಷ್ಟ ೧೨ ಮಂದಿ ಇರಬೇಕು. ಕಲಾ ಪ್ರದರ್ಶನ ನೀಡುವ ತಂಡದಲ್ಲಿ ಕನಿಷ್ಠ ೯ ರಿಂದ ೩೦ ಮಂದಿ ಕಲಾವಿದರು ಇರಬೇಕು.”
– ಶ್ರೀ ಪ್ರಸನ್ನನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ, ಆದಿಚುಂಚನಗಿರಿ ಮಠ
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…