Andolana originals

ಹಣ್ಣಿನಂಗಡಿ ರಾಮಕೃಷ್ಣ

ಮೈಸೂರಿನ ಶಿವರಾಮಪೇಟೆ ರಸ್ತೆಯ ಪಕ್ಕದಲ್ಲಿ ಹಣ್ಣಿನ ಅಂಗಡಿಯೊಂದಿದೆ. ಆಯಾಸದಿಂದ ಬಂದ ಗ್ರಾಹಕರಿಗೆಲ್ಲ ತಂಪನೆಯ ಪಾನೀಯವನ್ನು ನೀಡುತ್ತಾ ಬಂದಿರುವ ಇವರ ಹೆಸರು ರಾಮಕೃಷ್ಣ.

ಅಂಗಡಿ ತೆರೆದು, ಆಗಲೇ ನಾಲ್ಕು ವಸಂತಗಳು ಕಳೆದಿವೆ. ಈ ಮೊದಲು ಡಿಜಿಟಲ್ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅರವತ್ತು ವಾರದ ಹಿರಿಯ ವರ್ಷವಾದ ಮೇಲೆ ಪ್ರೆಸ್‌ನಲ್ಲಿ ಕೆಲಸ ಮಾಡಲಾಗದೆ, ಸುಮ್ಮನೆ ಮನೆಯಲ್ಲೂ ಕೂರಲಾಗದೆ, ಆದಾಯಕ್ಕೆ ಮುಂದೇನು ಮಾಡಬಹುದೆಂದು ಜೀವ ಚಡಪಡಿಸುತ್ತಿತ್ತು. ಒಂದು ದಿನ ತಾನೇಕೆ ಹಣ್ಣಿನಂಗಡಿ ತೆರೆಯಬಾರದು ಎಂದು ಯೋಚನೆ ಹೊಳೆದು, ಅಂಗಡಿ ತೆರೆದೇಬಿಟ್ಟರು. ಕಾಲಕ್ಕೆ ಅನುಗುಣವಾದ ಹಣ್ಣುಗಳಿಗೆ ಇವರ ಅಂಗಡಿಯಲ್ಲಿ ವಿಶೇಷ ಆದ್ಯತೆ, ಬೇಸಿಗೆಯಲ್ಲಿ ವ್ಯಾಪಾರ ಹೇಗೊ ಕುದುರುತ್ತದೆ. ಆದರೆ, ಮಳೆಗಾಲದಲ್ಲಿ ಗ್ರಾಹಕರ ಸ್ಪಂದನೆ ಹೇಗಿರುತ್ತದೆ ಎಂದು ಕೇಳಿದರೆ, ಲಾಭವಂತೂ ಇಲ್ಲ. ಆದರೆ ನಷ್ಟ ಆಗುವುದಿಲ್ಲ ಎಂಬ ಸಂತೃಪ್ತಿಯ ಉತ್ತರ. ವಿಜಯನಗರದಲ್ಲಿರುವ ತಮ್ಮ ಮನೆಯಿಂದ ಬೆಳಿಗ್ಗೆ ಬರುವಾಗಲೇ ಮಾರುಕಟ್ಟೆಯಿಂದ ಹಣ್ಣುಗಳನ್ನೆಲ್ಲ ತಂದು, ಒಂಬತ್ತು ಗಂಟೆಗೆ ತೆರೆದ ಅಂಗಡಿಯ ಕದ, ಮುಚ್ಚುವುದು ರಾತ್ರಿ ಹತ್ತು ಗಂಟೆಗೆ. ತಮ್ಮೊಂದಿಗೆ ಮತ್ತೊಬ್ಬ ಹುಡುಗ ನನ್ನು ಕೆಲಸಕ್ಕೆ ಜೊತೆಮಾಡಿಕೊಂಡಿದ್ದಾರೆ. ಒಂದುವೇಳೆ, ಅವರು ಕೆಲಸಕ್ಕೆ ರಜೆ ತೆಗೆದುಕೊಂಡಿದ್ದರೆ ಸ್ವತಃ ರಾಮಕೃಷ್ಣ ಅವರೇ ಹಣ್ಣಿನ ರಸವನ್ನು ತಯಾರಿಸುತ್ತಾರೆ. ಹಣ್ಣಿನಂಗಡಿ ಅಂತಲ್ಲ ಎಲ್ಲ ಕೆಲಸಕ್ಕೂ ಅಡೆತಡೆಗಳಿವೆ, ನಾವದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂಬ ಕಾಯಕ ತತ್ವವನ್ನು ಇವರ ಬಾಯಲ್ಲಿ ಕೇಳುವುದೇ ಚಂದ.

ಆಂದೋಲನ ಡೆಸ್ಕ್

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

11 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

12 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago