Andolana originals

ಹಣ್ಣಿನಂಗಡಿ ರಾಮಕೃಷ್ಣ

ಮೈಸೂರಿನ ಶಿವರಾಮಪೇಟೆ ರಸ್ತೆಯ ಪಕ್ಕದಲ್ಲಿ ಹಣ್ಣಿನ ಅಂಗಡಿಯೊಂದಿದೆ. ಆಯಾಸದಿಂದ ಬಂದ ಗ್ರಾಹಕರಿಗೆಲ್ಲ ತಂಪನೆಯ ಪಾನೀಯವನ್ನು ನೀಡುತ್ತಾ ಬಂದಿರುವ ಇವರ ಹೆಸರು ರಾಮಕೃಷ್ಣ.

ಅಂಗಡಿ ತೆರೆದು, ಆಗಲೇ ನಾಲ್ಕು ವಸಂತಗಳು ಕಳೆದಿವೆ. ಈ ಮೊದಲು ಡಿಜಿಟಲ್ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅರವತ್ತು ವಾರದ ಹಿರಿಯ ವರ್ಷವಾದ ಮೇಲೆ ಪ್ರೆಸ್‌ನಲ್ಲಿ ಕೆಲಸ ಮಾಡಲಾಗದೆ, ಸುಮ್ಮನೆ ಮನೆಯಲ್ಲೂ ಕೂರಲಾಗದೆ, ಆದಾಯಕ್ಕೆ ಮುಂದೇನು ಮಾಡಬಹುದೆಂದು ಜೀವ ಚಡಪಡಿಸುತ್ತಿತ್ತು. ಒಂದು ದಿನ ತಾನೇಕೆ ಹಣ್ಣಿನಂಗಡಿ ತೆರೆಯಬಾರದು ಎಂದು ಯೋಚನೆ ಹೊಳೆದು, ಅಂಗಡಿ ತೆರೆದೇಬಿಟ್ಟರು. ಕಾಲಕ್ಕೆ ಅನುಗುಣವಾದ ಹಣ್ಣುಗಳಿಗೆ ಇವರ ಅಂಗಡಿಯಲ್ಲಿ ವಿಶೇಷ ಆದ್ಯತೆ, ಬೇಸಿಗೆಯಲ್ಲಿ ವ್ಯಾಪಾರ ಹೇಗೊ ಕುದುರುತ್ತದೆ. ಆದರೆ, ಮಳೆಗಾಲದಲ್ಲಿ ಗ್ರಾಹಕರ ಸ್ಪಂದನೆ ಹೇಗಿರುತ್ತದೆ ಎಂದು ಕೇಳಿದರೆ, ಲಾಭವಂತೂ ಇಲ್ಲ. ಆದರೆ ನಷ್ಟ ಆಗುವುದಿಲ್ಲ ಎಂಬ ಸಂತೃಪ್ತಿಯ ಉತ್ತರ. ವಿಜಯನಗರದಲ್ಲಿರುವ ತಮ್ಮ ಮನೆಯಿಂದ ಬೆಳಿಗ್ಗೆ ಬರುವಾಗಲೇ ಮಾರುಕಟ್ಟೆಯಿಂದ ಹಣ್ಣುಗಳನ್ನೆಲ್ಲ ತಂದು, ಒಂಬತ್ತು ಗಂಟೆಗೆ ತೆರೆದ ಅಂಗಡಿಯ ಕದ, ಮುಚ್ಚುವುದು ರಾತ್ರಿ ಹತ್ತು ಗಂಟೆಗೆ. ತಮ್ಮೊಂದಿಗೆ ಮತ್ತೊಬ್ಬ ಹುಡುಗ ನನ್ನು ಕೆಲಸಕ್ಕೆ ಜೊತೆಮಾಡಿಕೊಂಡಿದ್ದಾರೆ. ಒಂದುವೇಳೆ, ಅವರು ಕೆಲಸಕ್ಕೆ ರಜೆ ತೆಗೆದುಕೊಂಡಿದ್ದರೆ ಸ್ವತಃ ರಾಮಕೃಷ್ಣ ಅವರೇ ಹಣ್ಣಿನ ರಸವನ್ನು ತಯಾರಿಸುತ್ತಾರೆ. ಹಣ್ಣಿನಂಗಡಿ ಅಂತಲ್ಲ ಎಲ್ಲ ಕೆಲಸಕ್ಕೂ ಅಡೆತಡೆಗಳಿವೆ, ನಾವದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂಬ ಕಾಯಕ ತತ್ವವನ್ನು ಇವರ ಬಾಯಲ್ಲಿ ಕೇಳುವುದೇ ಚಂದ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago