ಮೈಸೂರಿನ ಶಿವರಾಮಪೇಟೆ ರಸ್ತೆಯ ಪಕ್ಕದಲ್ಲಿ ಹಣ್ಣಿನ ಅಂಗಡಿಯೊಂದಿದೆ. ಆಯಾಸದಿಂದ ಬಂದ ಗ್ರಾಹಕರಿಗೆಲ್ಲ ತಂಪನೆಯ ಪಾನೀಯವನ್ನು ನೀಡುತ್ತಾ ಬಂದಿರುವ ಇವರ ಹೆಸರು ರಾಮಕೃಷ್ಣ.
ಅಂಗಡಿ ತೆರೆದು, ಆಗಲೇ ನಾಲ್ಕು ವಸಂತಗಳು ಕಳೆದಿವೆ. ಈ ಮೊದಲು ಡಿಜಿಟಲ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದರು. ಅರವತ್ತು ವಾರದ ಹಿರಿಯ ವರ್ಷವಾದ ಮೇಲೆ ಪ್ರೆಸ್ನಲ್ಲಿ ಕೆಲಸ ಮಾಡಲಾಗದೆ, ಸುಮ್ಮನೆ ಮನೆಯಲ್ಲೂ ಕೂರಲಾಗದೆ, ಆದಾಯಕ್ಕೆ ಮುಂದೇನು ಮಾಡಬಹುದೆಂದು ಜೀವ ಚಡಪಡಿಸುತ್ತಿತ್ತು. ಒಂದು ದಿನ ತಾನೇಕೆ ಹಣ್ಣಿನಂಗಡಿ ತೆರೆಯಬಾರದು ಎಂದು ಯೋಚನೆ ಹೊಳೆದು, ಅಂಗಡಿ ತೆರೆದೇಬಿಟ್ಟರು. ಕಾಲಕ್ಕೆ ಅನುಗುಣವಾದ ಹಣ್ಣುಗಳಿಗೆ ಇವರ ಅಂಗಡಿಯಲ್ಲಿ ವಿಶೇಷ ಆದ್ಯತೆ, ಬೇಸಿಗೆಯಲ್ಲಿ ವ್ಯಾಪಾರ ಹೇಗೊ ಕುದುರುತ್ತದೆ. ಆದರೆ, ಮಳೆಗಾಲದಲ್ಲಿ ಗ್ರಾಹಕರ ಸ್ಪಂದನೆ ಹೇಗಿರುತ್ತದೆ ಎಂದು ಕೇಳಿದರೆ, ಲಾಭವಂತೂ ಇಲ್ಲ. ಆದರೆ ನಷ್ಟ ಆಗುವುದಿಲ್ಲ ಎಂಬ ಸಂತೃಪ್ತಿಯ ಉತ್ತರ. ವಿಜಯನಗರದಲ್ಲಿರುವ ತಮ್ಮ ಮನೆಯಿಂದ ಬೆಳಿಗ್ಗೆ ಬರುವಾಗಲೇ ಮಾರುಕಟ್ಟೆಯಿಂದ ಹಣ್ಣುಗಳನ್ನೆಲ್ಲ ತಂದು, ಒಂಬತ್ತು ಗಂಟೆಗೆ ತೆರೆದ ಅಂಗಡಿಯ ಕದ, ಮುಚ್ಚುವುದು ರಾತ್ರಿ ಹತ್ತು ಗಂಟೆಗೆ. ತಮ್ಮೊಂದಿಗೆ ಮತ್ತೊಬ್ಬ ಹುಡುಗ ನನ್ನು ಕೆಲಸಕ್ಕೆ ಜೊತೆಮಾಡಿಕೊಂಡಿದ್ದಾರೆ. ಒಂದುವೇಳೆ, ಅವರು ಕೆಲಸಕ್ಕೆ ರಜೆ ತೆಗೆದುಕೊಂಡಿದ್ದರೆ ಸ್ವತಃ ರಾಮಕೃಷ್ಣ ಅವರೇ ಹಣ್ಣಿನ ರಸವನ್ನು ತಯಾರಿಸುತ್ತಾರೆ. ಹಣ್ಣಿನಂಗಡಿ ಅಂತಲ್ಲ ಎಲ್ಲ ಕೆಲಸಕ್ಕೂ ಅಡೆತಡೆಗಳಿವೆ, ನಾವದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂಬ ಕಾಯಕ ತತ್ವವನ್ನು ಇವರ ಬಾಯಲ್ಲಿ ಕೇಳುವುದೇ ಚಂದ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…