ನವೀನ್ ಡಿಸೋಜ
ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆ; ಎಚ್ಚರದಿಂದಿರಲು ನದಿಪಾತ್ರದ ಜನರಿಗೆ ಸೂಚನೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಸಮಯದಲ್ಲಿ ನದಿಗೆ ನೀರು ಹರಿಯಬಿಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ೭೬೭.೪೩ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೩೩೯.೫೮ ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.೫೦ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಬಹುತೇಕ ಭರ್ತಿಯಾಗಿದೆ.
೨,೮೫೯ ಅಡಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ೮ ಗಂಟೆಯ ವೇಳೆಗೆ ೨,೮೫೧.೧೩ ಅಡಿಯಷ್ಟು ನೀರಿನ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨,೮೨೪.೧೦ ಅಡಿಗಷ್ಟು ಮಾತ್ರ ನೀರಿನ ಸಂಗ್ರಹವಿತ್ತು. ಜಲಾಶಯದಲ್ಲಿ ಸದ್ಯ ೫.೪೧೮೬೬ ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨.೨೮೬೭೮ ಟಿಎಂಸಿ ಯಷ್ಟು ನೀರಿನ ಸಂಗ್ರಹವಿತ್ತು. ಸದ್ಯ ಜಲಾಶಯಕ್ಕೆ ೧,೫೪೧ ಕ್ಯೂಸೆಕ್ಸ್ನಷ್ಟು ನೀರು ಹರಿದುಬರುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ನದಿಗೆ ೧೦೦ ಕ್ಯೂಸೆಕ್ಸ್ನಷ್ಟು ನೀರನ್ನು ಹರಿಯಬಿಡಲಾಗುತ್ತಿದೆ.
ಸಾಮಾನ್ಯವಾಗಿ ಹಾರಂಗಿ ಜಲಾಶಯ ಭರ್ತಿಯಾಗುವುದು ಆಗಸ್ಟ್ ತಿಂಗಳಿನಲ್ಲಿ. ಒಮ್ಮೊಮ್ಮೆ ಹೆಚ್ಚು ಮಳೆಯಿದ್ದಾಗ ಜುಲೈ ತಿಂಗಳಾಂತ್ಯದಲ್ಲಿ ಭರ್ತಿಯಾಗುತ್ತದೆ. ಜೂನ್ ನಲ್ಲಿ ಜಲಾಶಯ ಭರ್ತಿಯಾಗಿರುವುದೇ ಅಪರೂಪ.
” ಹಾರಂಗಿ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದೆ. ದೊಡ್ಡ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದರೆ ಕುಶಾಲನಗರದಲ್ಲಿ ಪ್ರವಾಹ ಉಂಟಾಗು ತ್ತದೆ. ಹೀಗಾಗಿ ಜಲಾಶಯ ಭರ್ತಿಗೆ ಕೆಲ ಅಡಿಗಳಿರುವಾಗ ಮಳೆ ಮತ್ತು ಒಳಹರಿವಿನ ಪ್ರಮಾಣ ನೋಡಿಕೊಂಡು ನೀರು ಬಿಡುಗಡೆ ಮಾಡಲಾಗುವುದು. ಸಾರ್ವಜನಿಕರು ಎಚ್ಚರದಿಂದ ಇರಬೇಕು.”
-ಪುಟ್ಟಸ್ವಾಮಿ, ಕಾರ್ಯಪಾಲಕ ಇಂಜಿನಿಯರ್, ಹಾರಂಗಿ.
ಪ್ರವಾಹ ಮುನ್ನೆಚ್ಚರಿಕೆ..!
” ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕೋರಲಾಗಿದೆ.”
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…