Andolana originals

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ ಹಸಿರು ನಿಶಾನೆ ತೋರಿ ಪ್ರಕ್ರಿಯೆ ಶುರು ಮಾಡಿದ್ದು, ಇದರಿಂದ ನಗರದ ಹೊರವಲಯದಲ್ಲಿರುವ ನಿವೇಶನಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದೆ.

ಎರಡು ದಶಕಗಳಿಂದ ಬ್ಯಾಂಕ್‌ನಿಂದ ಸಾಲ ಪಡೆದು ಬಡಾವಣೆಗಳನ್ನು ರಚಿಸಿ ಮಾರಾಟಕ್ಕಾಗಿ ಕಾದಿರುವ ವಿವಿಧ ಅಳತೆಯ ನಿವೇಶನಗಳ ದರವೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ. ನಗರ ಪಾಲಿಕೆ ಸುತ್ತಮುತ್ತ ಇರುವ ೫ ನಗರ ಸ್ಥಳೀಯ ಸಂಸ್ಥೆಗಳು, ೭ ಗ್ರಾಮ ಪಂಚಾಯಿಗಳ ೨೦ ಗ್ರಾಮಗಳನ್ನು ಒಟ್ಟು ಸೇರಿಸಿ ಗ್ರೇಡ್ ೧ ನಗರ ಪಾಲಿಕೆ ರಚಿಸಲು ಉದ್ದೇ ಶಿಸಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ ಹಲವಾರು ಬಡಾವಣೆಗಳು ನಿರ್ಮಾಣಗೊಂಡು ನಿವೇಶನಗಳು ಹಂಚಿಕೆಯಾಗಿದ್ದು, ಇನ್ನೂ ಹಲವಾರು ಬಡಾವಣೆಗಳು ನಿರ್ಮಾಣ ಆಗುತ್ತಿವೆ. ಈ ಎಲ್ಲ ಪ್ರದೇಶಗಳು ಇನ್ನು ಮುಂದೆ ಮೈಸೂರು ನಗರ ವ್ಯಾಪ್ತಿಗೆ ಒಳಪಡುವ ಹಿನ್ನೆಲೆಯಲ್ಲಿ ಸಹಜವಾಗಿಯೇ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದ್ದು, ಇದೇ ನೆಪದಲ್ಲಿ ನಿವೇಶನಗಳ ಬೆಲೆ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಸಂಪಾದನೆ ಮಾಡಿ ಕೊನೆಯಲ್ಲಿ ಮೈಸೂರಿನಲ್ಲಿ ಸುಂದರವಾದ ಮನೆ ಕಟ್ಟಿಸಿಕೊಂಡು ವಾಸಮಾಡಬೇಕೆಂಬ ಮನಸ್ಸಿನವರು ಹೆಚ್ಚಾಗಿ ಮುಖ ಮಾಡಿರುವುದರಿಂದ ಈಗ ಮಾರಾಟವಾಗದೆ ಉಳಿದಿರುವ ನಿವೇಶನಗಳಿಗೂ ಶುಕ್ರದೆಸೆ ತಿರುಗಲಿದೆ.

ಹೂಡಿಕೆಗೆ ಸೂಕ್ತ: ಮೈಸೂರನ್ನು ನಿವೃತ್ತರ ಸ್ವರ್ಗ ಎಂದು ಕರೆಯಲಾಗುತ್ತದೆ. ಮೈಸೂರು ಯೋಜನಾಬದ್ಧವಾಗಿ ನಿರ್ಮಾಣ ಗೊಂಡಿರುವುದೇ ಇದಕ್ಕೆ ಪ್ರಮುಖ ಕಾರಣ. ಇಲ್ಲಿ ವಿಶಾಲವಾದ ರಸ್ತೆಗಳು, ಉದ್ಯಾನಗಳು ಹಾಗೂ ಉತ್ತಮ ವಾತಾವರಣ ಇರುವ ಹಿನ್ನೆಲೆಯಲ್ಲಿ ಜನರು ಸಹಜವಾಗಿಯೇ ಇಲ್ಲಿ ನೆಲೆಸಲು ಬಯಸುತ್ತಾರೆ. ಹೀಗಾಗಿ ಮೈಸೂರಿನಲ್ಲಿ ಒಂದು ನಿವೇಶನ ಖರೀದಿಸಬೇಕು ಎಂಬುದು ಎಲ್ಲರ ಕನಸೂ ಆಗಿದೆ. ಇನ್ನೂ ಕೆಲವರು ನಗರ ಮುಂದಿನ ದಿನಗಳಲ್ಲಿ ಸಾಕಷ್ಟು ಬೆಳವಣಿಗೆ ಕಾಣಲಿದೆ ಎಂಬ ನಿರೀಕ್ಷೆಯಲ್ಲಿ ನಿವೇಶನಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ನಗರದಲ್ಲಿ ಹಲವಾರು ಹೊಸ ಬಡಾವಣೆಗಳು ನಿರ್ಮಾಣಗೊಳ್ಳುತ್ತಿದೆ. ಇದೀಗ ನಗರದ ಹೊರವಲಯದ ಪ್ರದೇಶಗಳು ಮೈಸೂರು ನಗರ ವ್ಯಾಪ್ತಿಗೆ ಸೇರುವ ಹಿನ್ನೆಲೆಯಲ್ಲಿ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಜನರು ನಿವೇಶನಗಳ ಮೇಲೆ ಹೂಡಿಕೆ ಮಾಡಲು ಒಲವು ತೋರಲಿದ್ದಾರೆ.

ಇದನ್ನು ಓದಿ: ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ 

ಯಾವೆಲ್ಲ ಪ್ರದೇಶ ಸೇರ್ಪಡೆ?:  ಗ್ರೇಟರ್-೧ ಮೈಸೂರು ವ್ಯಾಪ್ತಿಗೆ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಬೋಗಾದಿ ಪಟ್ಟಣ ಪಂಚಾಯಿತಿಗಳು, ಇಲವಾಲ, ಸಿದ್ದಲಿಂಗಪುರ, ಚಾಮುಂಡಿಬೆಟ್ಟ, ನಾಗನಹಳ್ಳಿ, ನಾಗವಾಲ, ಧನಗಳ್ಳಿ, ಬೀರಿಹುಂಡಿ ಹಾಗೂ ಆಲನಹಳ್ಳಿ ಗ್ರಾಮ ಪಂಚಾಯಿತಿಗಳು ಸೇರ್ಪಡೆಯಾಗಲಿವೆ. ಕಡಕೊಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉತ್ತನಹಳ್ಳಿ, ಬಂಡಿಪಾಳ್ಯ, ಹೊಸಹುಂಡಿ, ಮರಸೆ, ಮದರಗಳ್ಳಿ, ಏಳಿಗೆಹುಂಡಿ, ಗುಡುಮಾದನಹಳ್ಳಿ, ಗೆಜ್ಜಗಳ್ಳಿ, ಮಂಡಕಳ್ಳಿ ಪ್ರದೇಶ ಹಾಗೂ ನಾಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ಯಾದನಹಳ್ಳಿ ಗ್ರಾಮ ಮಾತ್ರ ಗ್ರೇಟರ್-೧ ಮೈಸೂರು ವ್ಯಾಪ್ತಿಗೆ ಸೇರ್ಪಡೆಯಾಗಲಿವೆ.

ವಾರ್ಡ್‌ಗಳ ಸಂಖ್ಯೆ ಹೆಚ್ಚಳ:  ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು ೬೫ ವಾರ್ಡ್‌ಗಳು ಇವೆ. ಒಂದು ವೇಳೆ ಗ್ರೇಡ್-೧ ಮೈಸೂರು ರಚನೆಯಾದರೆ ಜನಸಂಖ್ಯೆಗೆ ಅನುಗುಣವಾಗಿ ೧೦೦ಕ್ಕೂ ಹೆಚ್ಚು ವಾರ್ಡ್ ಗಳು ರಚನೆಯಾಗುವ ಸಾಧ್ಯತೆ ಇದೆ. ೨೦೧೧ರ ಜನಗಣತಿ ಪ್ರಕಾರ ಮೈಸೂರು ನಗರದಲ್ಲಿ ೯,೨೦,೫೫೦ ಜನಸಂಖ್ಯೆ ಇದ್ದು, ಪ್ರಸ್ತುತ ೧೧,೪೬,೦೬೯ ಜನಸಂಖ್ಯೆ ಇರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಗ್ರೇಡ್-೧ ಮೈಸೂರು ವ್ಯಾಪ್ತಿಯ ಪ್ರದೇಶದಲ್ಲಿ ೧೪,೧೬,೬೭೧ ಜನಸಂಖ್ಯೆ ಇದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರ ೨೦೨೫ರ ಜನಗಣತಿ ನಡೆಸಿದ ನಂತರ ಗ್ರೇಟರ್ ಮೈಸೂರು ಪ್ರದೇಶದಲ್ಲಿ ಎಷ್ಟು ಜನರು ವಾಸವಿದ್ದಾರೆ ಎಂಬ ನಿಖರ ಅಂಕಿ ಅಂಶ ದೊರೆಯಲಿದೆ.

ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ:  ಮೈಸೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕಾಗಿ ಭೂಸ್ವಾಧಿನಕ್ಕೆ ಸಿದ್ಧತೆ ಕೈಗೊಂಡಿದೆ. ಒಟ್ಟು ೧೦೫ ಕಿಮೀ ಉದ್ದದ ೨೦೦ ಅಡಿ ಅಗಲದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದ ಮುಂದಿನ ೨೫ ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ಕೊಂಡು ಈ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ದಶಕದ ಹಿಂದೆ ೪೫ ಕಿಮೀ ಉದ್ದದ ಹೊರವರ್ತುಲ ರಸ್ತೆ ನಿರ್ಮಾಣ ಮಾಡಿದ ಬಳಿಕ ನಗರದ ಬೆಳವಣಿಗೆಯ ವೇಗ ಮತ್ತಷ್ಟು ಹೆಚ್ಚಾಯಿತು. ಹೊಸದಾಗಿ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣವಾದರೆ ನಗರ ಮತ್ತಷ್ಟು ಬೆಳವಣಿಗೆ ಕಾಣಲಿದೆ. ಗ್ರೇಡ್-೧ ಮೈಸೂರು ರಚನೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣವು ರಿಯಲ್ ಎಸ್ಟೇಟ್ ಉದ್ಯಮದ ಪಾಲಿಗೆ ವರದಾನವಾಗಲಿದೆ.

ಪಾಲಿಕೆ ಆದಾಯ ವೃದ್ಧಿ:  ಗ್ರೇಡ್-೧ ಮೈಸೂರು ರಚನೆಯ ನಂತರ ಪಾಲಿಕೆಗೆ ಹೆಚ್ಚುವರಿಯಾಗಿ ೨೫.೮೧ ಕೋಟಿ ರೂ. ಆದಾಯ ಹರಿದು ಬರುವ ನಿರೀಕ್ಷೆ ಇದೆ. ನಗರದ ಹೊರ ವಲಯದಲ್ಲಿರುವ ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ದರ ಕಡಿಮೆ ಇದ್ದು, ನಗರಪಾಲಿಕೆ ವ್ಯಾಪ್ತಿಗೆ ಬಂದರೆ ತೆರಿಗೆ ಪ್ರಮಾಣ ಹೆಚ್ಚಾಗುತ್ತದೆ. ಹಾಗಾಗಿ ಪ್ರಸ್ತುತ ಸಂಗ್ರಹವಾಗುತ್ತಿರುವ ತೆರಿಗೆ ಹಣಕ್ಕಿಂತ ಹೆಚ್ಚಿನ ಪ್ರಮಾಣದ ಆದಾಯ ನಗರ ಪಾಲಿಕೆಗೆ ದೊರೆಯುವ ನಿರೀಕ್ಷೆ ಇದೆ. ಗ್ರೇಡ್-೧ ಮೈಸೂರು ರಚನೆಯಾದರೆ ಜನಸಂಖ್ಯೆಗೆ ಪೂರಕವಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿದೆ.

-ಕೆ.ಬಿ.ರಮೇಶನಾಯಕ

ಆಂದೋಲನ ಡೆಸ್ಕ್

Recent Posts

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

28 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

3 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

3 hours ago