Andolana originals

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸ್ಥಾಪಿಸಲಾಗುತ್ತಿದ್ದು, ಡಿ.೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಶಾಖೆ ಉದ್ಘಾಟನೆ, ರಾಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅವಧೂತ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ಹಾಗೂ ಕಿರಿಯಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ಜರುಗಲಿವೆ. ಅಯೋಧ್ಯೆಯ ನಯಾಘಾಟ್, ಅಯೋಧ್ಯೆ ಬೈಪಾಸ್ ಬಳಿ ಇರುವ ಹರ್ಷನ್ ನಗರದ ‘ಶ್ರೀರಾಮ ಮಂತ್ರಾರ್ಥ ಮಂಟಪ’ದಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ಡಿ.೨೫ರಂದು ಸಂಜೆ ೫ ಗಂಟೆಗೆ ಸ್ವಾಗತ ಸಭೆ ನಡೆಯಲಿದೆ. ೫.೩೦ಕ್ಕೆ ಶ್ರೀರಾಮ ತಾರಕ ಯಾಗ ಪೂರ್ಣಾ ಹುತಿ ಹಾಗೂ ನೂತನ ಆಶ್ರಮದ] ಉದ್ಘಾಟನೆ ನೆರವೇರಲಿದೆ. ೭ಕ್ಕೆ ಶ್ರೀರಾಮ ಮತ್ತು ಶ್ರೀ ಹನುಮಾನ್ ಆರತಿ ಜರುಗಲಿದೆ. ಡಿ.೨೬ರಂದು ಬೆಳಿಗ್ಗೆ ೯ಕ್ಕೆ ಶ್ರೀ ಸೀತಾ ರಾಮ ಕಲ್ಯಾಣೋತ್ಸವ, ೧೦ಕ್ಕೆ ಶ್ರೀ ಚಕ್ರ ಪೂಜೆ ಹಾಗೂ ಮಧ್ಯಾಹ್ನ ೧.೩೦ಕ್ಕೆ ನೂತನ ಆಶ್ರಮದಲ್ಲಿ ಬ್ರಹ್ಮ ಭೋಜನ ಏರ್ಪಡಿಸಲಾಗಿದೆ.

ಸಂಜೆ ೬ ಗಂಟೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಂದ ‘ಬಾಲ ರಾಮ ರಾಗ ಸಾಗರ’(ಧ್ಯಾನಕ್ಕಾಗಿ ಸಂಗೀತ) ಕಚೇರಿ ನಡೆಯಲಿದೆ. ಡಿ.೨೭ರಂದು ಬೆಳಿಗ್ಗೆ ೯ಕ್ಕೆ ಶ್ರೀ ಚಕ್ರಪೂಜೆ, ೧೦ಕ್ಕೆ] ಶ್ರೀರಾಮ ಪಾದುಕಾ ಪಟ್ಟಾಭಿಷೇಕ ಹಾಗೂ ೧೧ಕ್ಕೆ ಪವಮಾನ ಯಾಗ ಮತ್ತು ಶ್ರೀ ಸೂಕ್ತ ಯಾಗ ಪೂರ್ಣಾಹುತಿ ನೆರವೇರಲಿದೆ. ಸಂಜೆ ೬.೩೦ಕ್ಕೆ ಶ್ರೀ ರಾಮ ಲಲ್ಲಾ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಡಿ.೨೮ರಂದು ಬೆಳಿಗ್ಗೆ ೧೦ಕ್ಕೆ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ, ೧೦.೩೦ಕ್ಕೆ ಪವಮಾನ ಯಾಗ ಮತ್ತು ಮಹಾವಿಷ್ಣು ಯಾಗಗಳು ನಡೆಯಲಿವೆ. ಮಧ್ಯಾಹ್ನ ೧೨.೩೦ಕ್ಕೆ ಪೂರ್ಣಾಹುತಿ ಮತ್ತು ಶ್ರೀ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ. ಸಂಜೆ ೫ ಗಂಟೆಗೆ ಶತಶ್ಲೋಕಿ ರಾಮಾಯಣ ಸಾಮೂಹಿಕ ಪಾರಾಯಣ ಹಾಗೂ ೬.೩೦ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಹಾಗೂ ಶ್ರೀ ರಾಮನ ಕೃಪೆಗೆ ಪಾತ್ರರಾಗಬೇಕೆಂದು ದತ್ತ ಪೀಠ ಕೋರಿದೆ.

ಭಕ್ತರೊಂದಿಗೆ ಪಯಣ: ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಡಿ.೨೧ಕ್ಕೆ ಮೈಸೂರಿನಿಂದ ಹೊರಡುವ ವಿಶೇಷ ರೈಲು ಬೋಗಿಯಲ್ಲಿ ೧,೩೦೦ ಮಂದಿ ಭಕ್ತರು ಪಯಣ ಬೆಳೆಸಲಿದ್ದು, ಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿ ಕೂಡ ರೈಲಿನಲ್ಲೇ ತೆರಳುತ್ತಿರುವುದು ವಿಶೇಷವಾಗಿದೆ. ಮೈಸೂರಿನಿಂದ ಅಯೋಧ್ಯೆಗೆ ತೆರಳುವ ರೈಲಿನಲ್ಲಿ ವಿಶೇಷ ಬೋಗಿ ವ್ಯವಸ್ಥೆ ಮಾಡಿದ್ದು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹೊರ ರಾಜ್ಯಗಳು, ದೇಶಗಳ ಭಕ್ತರು ಹಾಜರಿರುತ್ತಾರೆ.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

16 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

33 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

48 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

1 hour ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

1 hour ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

1 hour ago